Homeಮುಖಪುಟಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

- Advertisement -
- Advertisement -

ಇತ್ತೀಚಿಗೆ ತಾನೇ ಅಯೋಧ್ಯಾ ಬಗ್ಗೆ ಪುಸ್ತಕ ಬರೆದಿದ್ದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿದ್ದ ಮನೆಗೆ ದುಷ್ಕರ್ಮಿಗಳು ಇಂದು ಬೆಂಕಿ ಹಚ್ಚಿದ್ದಾರೆ.

ಈ ಕುರಿತು ಸ್ವತಃ ಸಲ್ಮಾನ್ ಖುರ್ಷಿದ್‌ರವರೆ ತಮ್ಮ ಫೇಸ್‌ಬುಕ್ ಪುಟದಲ್ಲಿ ಮಾಹಿತಿ ನೀಡಿದ್ದು, ತಮ್ಮ ಮನೆಗೆ ಬೆಂಕಿ ಹಚ್ಚಿರುವುದರ ಫೋಟೊ, ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಬಾಗಿಲಿಗೆ ಬೆಂಕಿ ಬಿದ್ದಿ ಧಗಧಗನೇ ಉರಿಯುವ ದೃಶ್ಯಗಳು ವಿಡಿಯೋದಲ್ಲಿವೆ.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ಪುಸ್ತಕವು ಹಿಂದೂಗಳ ಭಾವನೆಗೆ ಘಾಸಿಯನ್ನುಂಟು ಮಾಡಿದೆ. ಕಾಂಗ್ರೆಸ್ ಮುಸ್ಲಿಮ ಮತಗಳಿಗಾಗಿ ಕೋಮುವಾದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಪುಸ್ತಕದ ಕುರಿತು ಕಾಂಗ್ರೆಸ್ ಒಳಗಿನಿಂದಲೇ ಟೀಕೆಗಳು ವ್ಯಕ್ತವಾಗಿದ್ದವು. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರವರು “ನಾವು ಹಿಂದುತ್ವವನ್ನು ರಾಜಕೀಯ ಸಿದ್ಧಾಂತವಾಗಿ ಒಪ್ಪದಿರಬಹುದು ಆದರೆ ಅದನ್ನು ಐಸಿಸ್ ಮತ್ತು ಜಿಹಾದಿಸ್ಟ್ ಇಸ್ಲಾಂನೊಂದಿಗೆ ಹೋಲಿಸುವುದು ವಾಸ್ತವಿಕವಾಗಿ ತಪ್ಪು ಮತ್ತು ಉತ್ಪ್ರೇಕ್ಷೆಯಾಗಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, ಹಿಂದುತ್ವ ಮತ್ತು ಹಿಂದೂ ಧರ್ಮ ಎಂಬುದು ಒಂದೇ ಅಲ್ಲ. ಅವು ಎರಡು ವಿಭಿನ್ನ ಪರಿಕಲ್ಪನೆಗಳು ಎಂದಿದ್ದರು. ಮಹರಾಷ್ಟ್ರದ ವಾರ್ಧದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಹಿಂದೂ ಧರ್ಮವು ಸಿಖ್ಖರನ್ನು ಅಥವಾ ಮುಸಲ್ಮಾನರನ್ನು ಹೊಡೆಯಿರಿ ಎಂದು ಹೇಳುತ್ತದೆಯೇ? ಹಾಗೆಂದು ಯಾವ ಪುಸ್ತಕದಲ್ಲಿ ಬರೆಯಲಾಗಿದೆ? ನಾನು ಉಪನಿಷತ್ತುಗಳನ್ನು ಓದಿದ್ದೇನೆ, ಎಲ್ಲಿಯೂ ಹಾಗೆ ಹೇಳಿಲ್ಲ. ಆದರೆ ಹಿಂದುತ್ವವು ಸಹಜವಾಗಿಯೇ ಏಕೆ ದ್ವೇಷಿಸಲು ಕರೆ ಕೊಡುತ್ತದೆ? ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ವ್ಯತ್ಯಾಸವಿದೆ ಎಂದು ನಾವು ಹೇಳುತ್ತೇವೆ. ಇದು ಸರಳವಾದ ತರ್ಕ. ನೀವು ಹಿಂದೂ ಆಗಿದ್ದರೆ ನಿಮಗೆ ಹಿಂದುತ್ವ ಏಕೆ ಬೇಕು? ನಿಮಗೆ ಈ ಹೊಸ ಹೆಸರು ಏಕೆ ಬೇಕು?” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...