Homeಮುಖಪುಟಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಅಂದು ಆರ್‌ಎಸ್‌ಎಸ್‌ ಹುಟ್ಟಿರಲಿಲ್ಲ: ಬಿ.ಎಲ್.ಸಂತೋಷ್

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಅಂದು ಆರ್‌ಎಸ್‌ಎಸ್‌ ಹುಟ್ಟಿರಲಿಲ್ಲ: ಬಿ.ಎಲ್.ಸಂತೋಷ್

ಬ್ರಿಟಿಷರಲ್ಲಿ ಕ್ಷಮೆಯಾಚಿಸುವಂತೆ ಗಾಂಧೀಜಿಯವರೇ ಸಾವರ್ಕರ್‌ ಅವರಿಗೆ ಸಲಹೆ ನೀಡಿದ್ದರು ಎಂದು ರಾಜನಾಥ್‌ ಸಿಂಗ್‌ ಅವರು ಕಳೆದ ಅಕ್ಟೋಬರ್‌‌ನಲ್ಲಿ ಸುಳ್ಳು ಹೇಳಿದ್ದರು. ಈಗ ಬಿ.ಎಲ್‌.ಸಂತೋಷ್‌ ಅವರ ಸರದಿ...

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಆರ್‌ಎಸ್‌ಎಸ್‌ ಹುಟ್ಟಿರಲಿಲ್ಲ. ಹೀಗಾಗಿ ನಾವು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಹೇಳಿರುವ ವಿಡಿಯೊ ವೈರಲ್ ಆಗಿದೆ.

ಮಂಗಳೂರಿನ ರಾಜ್ಯ ಪ್ರಕೋಷ್ಠಗಳ ಚಿಂತನಾ ವರ್ಗದಲ್ಲಿ ಮಾತನಾಡಿರುವ ಅವರ ಸರಣಿ ವಿಡಿಯೊಗಳನ್ನು ಬಿಜೆಪಿಯ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗುತ್ತಿದ್ದು, “ನಮ್ಮ ರಾಜ್ಯದ ಅನೇಕ ರಾಜಕಾರಣಿಗಳು, ನಮ್ಮ ರಾಜ್ಯದ ಸಿದ್ದರಾಮಯ್ಯನವರು, ಸ್ವಾತಂತ್ರ್ಯಕ್ಕಾಗಿ ಏನ್ ಬಲಿದಾನ ಮಾಡಿದ್ದಾರಾ ಎಂದು ಕೇಳುತ್ತಿದ್ದಾರೆ. ಆದರೆ ನಾವು ಹುಟ್ಟಿರಲಿಲ್ಲ. ಹುಟ್ಟಿದ್ದರೆ ನಾವು ಬಲಿದಾನ ಮಾಡುತ್ತಿದ್ದೆವು. ನಾವು ಆ ಸಂದರ್ಭದಲ್ಲಿ ಹುಟ್ಟಿರಲಿಲ್ಲ ಎಂಬುದು ಭಗವಂತನ ನಿಯಮ” ಎಂದು ಹೇಳಿದ್ದಾರೆ.

“ಹುಟ್ಟಿದ್ದವರ ಹೆಸರಲ್ಲಿ ಕಾಂಗ್ರೆಸ್‌ನಲ್ಲಿ ಎಷ್ಟು ಮಂದಿ ಅಂಗಡಿ ಇಟ್ಟುಕೊಂಡಿದ್ದಾರೆಂಬುದು ಇಲ್ಲಿರುವವರಿಗೆ ಚೆನ್ನಾಗಿ ಗೊತ್ತು. ಗಾಂಧೀಜಿ ಹೆಸರಲ್ಲಿ ಊರೂರಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ. ಗಾಂಧೀಜಿಗೆ ಹೆಸರಲ್ಲಿ ಪಾಪವನ್ನು ಯಾರಾದರೂ ಮಾಡಿದ್ದರೆ ಅದು ಕಾಂಗ್ರೆಸ್‌ನವರೇ. ಇದು ಸಿದ್ದರಾಮಯ್ಯನವರಿಗೆ ಯಾವತ್ತೂ ಅರ್ಥವಾಗುವುದಿಲ್ಲ. ನಾವು ಹುಟ್ಟಿರಲಿಲ್ಲ. ಹಾಗಾಗಿ ಬಲಿದಾನ ಮಾಡಲಿಲ್ಲ. ಬಲಿದಾನ ಮಾಡುವ ವಿಚಾರ ಬಂದಾಗ, ನಮ್ಮಷ್ಟು ಬಲಿದಾನ ಇನ್ನಾರೂ ಮಾಡಲಿಲ್ಲ” ಎಂದಿದ್ದಾರೆ.

“ತುರ್ತು ಪರಿಸ್ಥಿತಿ ಕಾಲದಲ್ಲಿ ಜೈಲಿಗೆ ಹೋದವರಲ್ಲಿ ಹೆಚ್ಚು ಜನ ನಮ್ಮವರು. ಹೆದರಿಕೊಂಡು ಕರ್ನಾಟಕದ ರಾಜಕಾರಣಿಗಳು ಊರೂರು ಅಲೆದಾಡುತ್ತಿದ್ದಾಗ ಧೈರ್ಯಕೊಟ್ಟು ರಾಜಕೀಯ ಕ್ಷೇತ್ರದಲ್ಲಿ ಉಳಿಸಿದ್ದು ಇದೇ ಬಿಜೆಪಿಯವರು, ಇದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು. ಅದನ್ನು ಖಾಸಗಿಯಾಗಿ ಅವರೂ ಒಪ್ಪಿಕೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

ಬಿಜೆಪಿ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೊದಲ್ಲಿ, “ಬೇರೆ ಬೇರೆ ಹೆಸರಲ್ಲಿ ರಾಜಕಾರಣ ಮಾಡಿದ್ದಾರೆ. ಸೋಶಿಯಲಿಸಂ, ಸೆಕ್ಯುಲರಿಸಂ ಹೆಸರಲ್ಲಿ ರಾಜಕಾರಣ ಮಾಡಿದ್ದಾರೆ. ಸೆಕ್ಯುಲರ್‌ ಎಂದು ಜೆಡಿಎಸ್‌ನವರು ಇಟ್ಟುಕೊಂಡಿದ್ದಾರೆ. ಏನ್ ಸೆಕ್ಯುಲರ್‌ ಇದೆ ಎಂದು ಈವತ್ತಿನವರೆಗೂ ನಮಗೆ ಗೊತ್ತಿಲ್ಲ. ದೇವಸ್ಥಾನಕ್ಕೆ ಹೋಗೋದೇ ಸೆಕ್ಯುಲರಿಸಂ, ಯಾಗ ಮಾಡೋದೆ ಸೆಕ್ಯುಲರಿಸಂ ಎಂದು ತಿಳಿದರೆ ಅದಕ್ಕಿಂತ ದೊಡ್ಡ ಭ್ರಮೆ ಇನ್ಯಾವುದೂ ಇಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಸೋಶಿಯಲಿಸಂ, ಸೆಕ್ಯುಲರಿಸಂ ಹೆಸರಲ್ಲಿ ದೇಶದ ರಾಜಕೀಯ ರಂಗದಲ್ಲಿ ಪ್ರವರ್ಧಮಾನಕ್ಕೆ ಬಂದ ಅನೇಕ ರಾಜಕಾರಣಿಗಳ ಹೆಸರುಗಳು ಕೇಳಿಬರುತ್ತವೆ. ಮೊದಲು ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಸಮಗ್ರ ಕ್ರಾಂತಿ ಎಂದು ಆರಂಭಿಸಿದರು. ಅದಾದ ಮೇಲೆ ಜಾತಿವಾದಿಗಳಾದರು. ಈಗ ಕುಟುಂಬವಾದಿಗಳಾಗಿದ್ದಾರೆ. ಜಾತಿವಾದಿಗಳಾದರೂ ಸಹಿಸಿಕೊಳ್ಳಬಹುದು. ಯಾಕೆಂದರೆ ಕೋಟ್ಯಂತರ ಜನರಿಗೆ ಅವರು ಸಹಾಯ ಮಾಡುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್‌ ಕುರಿತಂತೆ ಬಿ.ಎಲ್.ಸಂತೋಷ್‌ ಹೇಳಿರುವ ಮಾತುಗಳು ಇತಿಹಾಸವನ್ನು ತಿರುಚಲು ಯತ್ನಿಸಿವೆ ಎಂಬ ಆರೋಪಗಳು ಬಂದಿವೆ. 1925ರಲ್ಲಿ ಆರ್‌ಎಸ್‌ಎಸ್‌ ಸ್ಥಾಪನೆಯಾಗಿದೆ ಎಂದು ಇತಿಹಾಸ ಹೇಳುತ್ತದೆ. ಸಂಘ ಪರಿವಾರದ ಪ್ರಮುಖ ನಾಯಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದರು ಎಂಬ ಕುರಿತು ಸಾಕಷ್ಟು ಚರ್ಚೆಗಳಾಗಿವೆ. “ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌‌ಎಸ್‌ಎಸ್ ಭಾಗಹಿಸಿರಲಿಲ್ಲ” ಎಂಬುದನ್ನು ಬಿ.ಎಲ್‌.ಸಂತೋಷ್ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ.

ಬಿ.ಎಲ್‌.ಸಂತೋಷ್ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು, “ಸರಿಯಾಗಿ ಕೇಳಿಸಿಕೊಳ್ಳಿ. ನಮ್ಮ‌‌ ಸಂತೋಷಣ್ಣನವರು ಅಪರೂಪಕ್ಕೆ ಸತ್ಯ‌ ಮಾತನಾಡಿದ್ದಾರೆ. ಕೇಳಿ: `ಆರ್ ಎಸ್ ಎಸ್ ನವರು ಎಂದಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರಾ ಎಂದು‌ ನಮ್ಮ ಸಿದ್ದರಾಮಯ್ಯನವರು ಆಗಾಗ ಕೇಳ್ತಿರ್ತಾರೆ. ಆ ಕಾಲದಲ್ಲಿ ನಾವು ಹುಟ್ಟಿರ್ಲಿಲ್ಲ, ಅದಕ್ಕೆ‌‌ ಭಾಗವಹಿಸಿಲ್ಲ.‌ಅದು ಭಗವಂತನ ಮಹಿಮೆ ನಾವೇನು‌ ಮಾಡ್ಲಿಕ್ಕಾಗುತ್ತೆ….’ ಅರೆರೆ ಇವರಿಗೇನಾಗಿದೆ? ಆರ್‌‌ಎಸ್‌ಎಸ್ ಹುಟ್ಟಿದ್ದು 1925ರಲ್ಲಿ. ಅದನ್ನು ಸ್ಥಾಪಿಸಿದ್ದ ಕೇಶವ ಬಲಿರಾಮ್ ಹೆಗಡೆ ಹುಟ್ಟಿದ್ದು 1889 ಏಪ್ರಿಲ್ ಒಂದರಂದು. ಅವರ ಗುರು ಮೂಂಜೆ ಹುಟ್ಟಿದ್ದು1872 ಡಿಸೆಂಬರ್ 12ರಂದು. ಸಂತೋಷಜ್ಜನವರು ಕಂಗನಾ ಸಿಂಡ್ರೋಮ್ ನಲ್ಲಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ. ದಿನೇಶ್ ಮಟ್ಟು ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರು ಸುಳ್ಳುಗಳನ್ನು ತೇಲಿಬಿಡುವುದು ಹೆಚ್ಚಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಳೆದ ಅಕ್ಟೋಬರ್‌ನಲ್ಲಿ, “ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದಿದ್ದರು. ಇವರ ಹೇಳಿಕೆಯನ್ನು ಇತಿಹಾಸಕಾರರು ಅಲ್ಲಗಳೆದಿದ್ದರು.

ಬಿಜೆಪಿಯ ಕಟ್ಟಾ ಬೆಂಬಲಿಗರಲ್ಲಿ ಒಬ್ಬರಾದ ನಟಿ ಕಂಗನಾ ರಣಾವತ್ ಅವರು ಟೈಮ್ಸ್ ನೌ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ, ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014ರಲ್ಲಿ ಬಂದಿದೆ” ಎಂದು ಹೇಳಿದ್ದರು. ಅಲ್ಲದೆ, “ಯಾರಾದರೂ ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ” ಎಂದೂ ಉಡಾಫೆಯಾಗಿ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...