Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...