Homeಮುಖಪುಟಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

- Advertisement -
- Advertisement -

ಇಂಧನ ಬೆಲೆ ಏರಿಕೆ ಬಗ್ಗೆ ಜನರು ತಮ್ಮದೇ ರಾಜ್ಯ ಸರ್ಕಾರಗಳನ್ನು ಕೇಳಬೇಕು. ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇಂಧನ ದರವನ್ನು ಮತ್ತಷ್ಟು ತಗ್ಗಿಸಲು ಮೌಲ್ಯವರ್ಧಿತ ತೆರಿಗೆ (VAT) ಅನ್ನು ಕಡಿಮೆ ಮಾಡುವಂತೆ ರಾಜ್ಯಗಳಿಗೆ ಮನವಿ ಮಾಡಿದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಎಸ್‌ಟಿ ಕೌನ್ಸಿಲ್‌ ಇಂಧನ ಸೇರ್ಪಡೆಗೆ ದರವನ್ನು ನಿಗದಿಪಡಿಸುವವರೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಸೇರಿಸಲಾಗುವುದಿಲ್ಲ’ ಎಂದರು.

ದೇಶದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳೊಂದಿಗಿನ ಸಂವಾದದ ನಂತರ ಸೀತಾರಾಮನ್‌ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಇಂಧನ ಬೆಲೆ ಏರಿಕೆ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ, ಕೇಂದ್ರ ಸರ್ಕಾರವು ದೀಪಾವಳಿಯ ಹಿಂದಿನ ದಿನ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 5ರೂ ಮತ್ತು 10 ರೂ ನಷ್ಟು ಕಡಿಮೆ ಮಾಡಿದೆ. ಇಂಧನ ಬೆಲೆಗಳನ್ನು ತಗ್ಗಿಸಲು ಹಲವಾರು ರಾಜ್ಯಗಳು ವ್ಯಾಟ್‌ ಅನ್ನು ಕಡಿಮೆ ಮಾಡಿದ್ದವು. ಕೆಲವು ರಾಜ್ಯಗಳು ಅಬಕಾರಿ ಸುಂಕವನ್ನು ಮತ್ತಷ್ಟು ಕಡಿಮೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿವೆ.

ಕೇರಳದ ಹಣಕಾಸು ಸಚಿವರು ಕೇಂದ್ರದ ಕ್ರಮವನ್ನು ‘ಹಾನಿ ನಿಯಂತ್ರಣ’ ಎಂದು ಕರೆದರು. ಇತ್ತೀಚಿನ ಉಪಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಹಲವು ಸ್ಥಾನಗಳಲ್ಲಿ ಸೋತಿದೆ. ಅದಕ್ಕೆ ಇಂಧನ ಬೆಲೆ ಏರಿಕೆ ಮತ್ತಿತರ ಅಂಶಗಳೂ ಕಾರಣವಾಗಿವೆ. ಹಾಗಾಗಿ ಅವರು ಸಣ್ಣ ಮಟ್ಟಿಗೆ ಬೆಲೆ ಇಳಿಸಿದ್ದಾರೆ ಎಂದು ಟೀಕಿಸಿದ್ದರು.

ಮೋದಿ ಸರ್ಕಾರವು ಈ ಹಿಂದೆ ಅಬಕಾರಿ ಸುಂಕವನ್ನು ಗಣನೀಯವಾಗಿ ಹೆಚ್ಚಿಸಿ, ನಂತರ ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿದೆ. ರಾಜ್ಯ ಸರ್ಕಾರಗಳು ವ್ಯಾಟ್‌ ಹೆಚ್ಚಿಸಿಲ್ಲ ಆದ್ದರಿಂದ ಅದನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ. ಕೇಂದ್ರವು ಅಬಕಾರಿ ಸುಂಕವನ್ನು ಹೆಚ್ಚಳವನ್ನು ಹಿಂತೆಗೆದುಕೊಂಡರೆ ಬೆಲೆಗಳು ಸ್ವಯಂಚಾಲಿತವಾಗಿ ಇಳಿಯುತ್ತವೆ ಎಂದು ವಿರೋಧ ಪಕ್ಷಗಳು ತಿಳಿಸಿವೆ.

ಕೇಂದ್ರ ಸರ್ಕಾರವು ದೀಪಾವಳಿ ಸಮಯದಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು  5 ರೂ ಮತ್ತು ಡೀಸೆಲ್ ಮೇಲೆ 10 ರೂ ಸುಂಕವನ್ನು ಇಳಿಸಿತ್ತು. ಕರ್ನಾಟಕ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ವ್ಯಾಟ್‌ ಅನ್ನು 7 ರೂ ಕಡಿಮೆ ಗೊಳಿಸಿತ್ತು.

ಪ್ರಸ್ತುತ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 27ರೂ ಮತ್ತು ರಾಜ್ಯ ಸರ್ಕಾರವು 20 ರೂ ಸುಂಕ ವಸೂಲಿ ಮಾಡುತ್ತಿದೆ. ಹಾಗೆಯೇ ಡೀಸೆಲ್ ಮೇಲೆ ಕೇಂದ್ರವು 21 ರೂ ಹಾಗೂ ರಾಜ್ಯವೂ 11 ರೂ ತೆರಿಗೆ ವಿಧಿಸುತ್ತಿದೆ.


ಇದನ್ನು ಓದಿ: ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಾಗಾದರೆ ಕೇಂದ್ರದಲ್ಲಿ ನಿಮ್ಮ ಸರ್ಕಾರ ಇದಕ್ಕೆ ಇದೆ ರಾಜೀನಾಮೆ ಕೊಡಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...