Homeಮುಖಪುಟದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

ದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

- Advertisement -
- Advertisement -

ಕಳೆದ 20 ವರ್ಷಗಳಲ್ಲಿ, ದೇಶಾದ್ಯಂತ 1,888 ಲಾಕಪ್ ಡೆತ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ 893 ಪ್ರಕರಣಗಳನ್ನು ದಾಖಲಿಸಲಾಗಿದೆ. 358 ಸಿಬ್ಬಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ಈ ಅವಧಿಯಲ್ಲಿ ಕೇವಲ 26 ಪೊಲೀಸರಿಗೆ ಶಿಕ್ಷೆಯಾಗಿದೆ ಎಂದು ಅಧಿಕೃತ ದಾಖಲೆಗಳು ತಿಳಿಸಿವೆ.

2001-2020 ರವರೆಗಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(National Crime Records Bureau) ವಾರ್ಷಿಕ ಅಪರಾಧದ (CII) ವರದಿಗಳು ಈ ನಿರಾಶದಾಯಕ ಸತ್ಯವನ್ನು ಹೊರಗೆಡವಿದೆ. 1,888 ಜನರ ಲಾಕಪ್‌ ಡೆತ್‌ ಆಗಿದ್ದರೂ ಕೂಡ ಶಿಕ್ಷೆ ಕೇವಲ 26 ಪೊಲೀಸರಿಗೆ ಎನ್ನುವುದನ್ನು ಈ ದಾಖಲೆಗಳು ಬಿಚ್ಚಿಟ್ಟಿವೆ.

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕಳೆದ ಮಂಗಳವಾರ 22 ವರ್ಷದ ಅಲ್ತಾಫ್‌ನ ಕಸ್ಟಡಿ ಸಾವಿನ ಹಿನ್ನೆಲೆಯಲ್ಲಿ ಈ ವರದಿ ಮಹತ್ವ ಪಡೆದುಕೊಂಡಿದೆ. ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿ ನಾಪತ್ತೆಯಾದ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಅಪ್ತಾಫ್‌ನನ್ನು ಬಂಧಿಸಲಾಗಿತ್ತು. ಕಾಸ್‌ಗಂಜ್‌ ಲಾಕಪ್ ಡೆತ್ ನಂತರ, ಕಾಸ್‌ಗಂಜ್‌ನ ಕೊಟ್ವಾಲಿ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನೆಲದಿಂದ ಕೇವಲ ಒಂದೆರಡು ಅಡಿ ಎತ್ತರದಲ್ಲಿರುವ ಶೌಚಾಲಯದ ನೀರಿನ ಪೈಪ್‌ಗೆ ಅಲ್ತಾಫ್ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದರು. ಕಸ್ಟಡಿ ಸಾವಿನ ಬಗ್ಗೆ ಇಲಾಖಾ ವಿಚಾರಣೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯನ್ನು ಏಕಕಾಲದಲ್ಲಿ ನಡೆಸಲಾಗುತ್ತಿದೆ ಎಂದು ಯುಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಮಾಹಿತಿಯ ಪ್ರಕಾರ, 2020 ರಲ್ಲಿ 76 ಲಾಕಪ್ ಡೆತ್ ವರದಿಯಾಗಿವೆ. ಗುಜರಾತ್‌ನಲ್ಲಿ ಅತಿ ಹೆಚ್ಚು ಅಂದರೆ, 15 ಸಾವುಗಳು ವರದಿಯಾಗಿವೆ. ಉಳಿದಂತೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸೇರಿವೆ.

ಎನ್‌ಸಿಆರ್‌ಬಿ 2017 ರಿಂದ ಲಾಕಪ್ ಡೆತ್ ಪ್ರಕರಣಗಳಲ್ಲಿ ಬಂಧಿತ ಪೊಲೀಸರ ಡೇಟಾವನ್ನು ಬಿಡುಗಡೆ ಮಾಡುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ‌ಈ ಸಾವುಗಳಿಗೆ ಸಂಬಂಧಿಸಿದಂತೆ 96 ಪೊಲೀಸರನ್ನು ಬಂಧಿಸಲಾಗಿದೆ.

ಎನ್‌ಸಿಆರ್‌ಬಿ ಪೊಲೀಸ್ ಕಸ್ಟಡಿ/ಲಾಕಪ್‌ ಡೆತ್‌‌ಗಳನ್ನು ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಮತ್ತು ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದು ಎರಡು ವಿಭಾಗಗಳ ಅಡಿಯಲ್ಲಿ ವರ್ಗೀಕರಿಸಿದೆ.

ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಎಂದರೆ, ಬಂಧಿಸಲ್ಪಟ್ಟವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾದವರು. ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದರೆ ಪೊಲೀಸ್ ಅಥವಾ ನ್ಯಾಯಾಂಗ ಬಂಧನದಲ್ಲಿರುವವರು.

2006 ರಲ್ಲಿ ಉತ್ತರ ಪ್ರದೇಶದಲ್ಲಿ ಏಳು ಮತ್ತು ಮಧ್ಯಪ್ರದೇಶದಲ್ಲಿ ನಾಲ್ವರು ಪೊಲೀಸರು ಲಾಕಪ್ ಡೆತ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ವರದಿಯಾಗಿತ್ತು. ಈ 11 ಮಂದಿ ಪೊಲೀಸರಿಗೂ ಶಿಕ್ಷೆಯಾಗಿದ್ದು, 20 ವರ್ಷಗಳಲ್ಲಿ ಒಂದೇ ಬಾರಿಗೆ ಶಿಕ್ಷೆಗೆ ಗುರಿಯಾದ ಅತ್ಯಧಿಕ ಪೊಲೀಸರು ಇವರು ಎಂಬುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶದಲ್ಲಿ ಕಾಣಸಿಗುತ್ತದೆ. ಆದರೆ, ಇವರೆಲ್ಲಾ ಅದೇ ವರ್ಷ ಮಾಡಿದ ಅಪರಾಧಕ್ಕೆ ಶಿಕ್ಷೆ ಅನುಭವಿಸಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...