Homeಮುಖಪುಟದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

ದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

- Advertisement -
- Advertisement -

ಕಳೆದ 20 ವರ್ಷಗಳಲ್ಲಿ, ದೇಶಾದ್ಯಂತ 1,888 ಲಾಕಪ್ ಡೆತ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ 893 ಪ್ರಕರಣಗಳನ್ನು ದಾಖಲಿಸಲಾಗಿದೆ. 358 ಸಿಬ್ಬಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ಈ ಅವಧಿಯಲ್ಲಿ ಕೇವಲ 26 ಪೊಲೀಸರಿಗೆ ಶಿಕ್ಷೆಯಾಗಿದೆ ಎಂದು ಅಧಿಕೃತ ದಾಖಲೆಗಳು ತಿಳಿಸಿವೆ.

2001-2020 ರವರೆಗಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(National Crime Records Bureau) ವಾರ್ಷಿಕ ಅಪರಾಧದ (CII) ವರದಿಗಳು ಈ ನಿರಾಶದಾಯಕ ಸತ್ಯವನ್ನು ಹೊರಗೆಡವಿದೆ. 1,888 ಜನರ ಲಾಕಪ್‌ ಡೆತ್‌ ಆಗಿದ್ದರೂ ಕೂಡ ಶಿಕ್ಷೆ ಕೇವಲ 26 ಪೊಲೀಸರಿಗೆ ಎನ್ನುವುದನ್ನು ಈ ದಾಖಲೆಗಳು ಬಿಚ್ಚಿಟ್ಟಿವೆ.

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕಳೆದ ಮಂಗಳವಾರ 22 ವರ್ಷದ ಅಲ್ತಾಫ್‌ನ ಕಸ್ಟಡಿ ಸಾವಿನ ಹಿನ್ನೆಲೆಯಲ್ಲಿ ಈ ವರದಿ ಮಹತ್ವ ಪಡೆದುಕೊಂಡಿದೆ. ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿ ನಾಪತ್ತೆಯಾದ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಅಪ್ತಾಫ್‌ನನ್ನು ಬಂಧಿಸಲಾಗಿತ್ತು. ಕಾಸ್‌ಗಂಜ್‌ ಲಾಕಪ್ ಡೆತ್ ನಂತರ, ಕಾಸ್‌ಗಂಜ್‌ನ ಕೊಟ್ವಾಲಿ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನೆಲದಿಂದ ಕೇವಲ ಒಂದೆರಡು ಅಡಿ ಎತ್ತರದಲ್ಲಿರುವ ಶೌಚಾಲಯದ ನೀರಿನ ಪೈಪ್‌ಗೆ ಅಲ್ತಾಫ್ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದರು. ಕಸ್ಟಡಿ ಸಾವಿನ ಬಗ್ಗೆ ಇಲಾಖಾ ವಿಚಾರಣೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯನ್ನು ಏಕಕಾಲದಲ್ಲಿ ನಡೆಸಲಾಗುತ್ತಿದೆ ಎಂದು ಯುಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಮಾಹಿತಿಯ ಪ್ರಕಾರ, 2020 ರಲ್ಲಿ 76 ಲಾಕಪ್ ಡೆತ್ ವರದಿಯಾಗಿವೆ. ಗುಜರಾತ್‌ನಲ್ಲಿ ಅತಿ ಹೆಚ್ಚು ಅಂದರೆ, 15 ಸಾವುಗಳು ವರದಿಯಾಗಿವೆ. ಉಳಿದಂತೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸೇರಿವೆ.

ಎನ್‌ಸಿಆರ್‌ಬಿ 2017 ರಿಂದ ಲಾಕಪ್ ಡೆತ್ ಪ್ರಕರಣಗಳಲ್ಲಿ ಬಂಧಿತ ಪೊಲೀಸರ ಡೇಟಾವನ್ನು ಬಿಡುಗಡೆ ಮಾಡುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ‌ಈ ಸಾವುಗಳಿಗೆ ಸಂಬಂಧಿಸಿದಂತೆ 96 ಪೊಲೀಸರನ್ನು ಬಂಧಿಸಲಾಗಿದೆ.

ಎನ್‌ಸಿಆರ್‌ಬಿ ಪೊಲೀಸ್ ಕಸ್ಟಡಿ/ಲಾಕಪ್‌ ಡೆತ್‌‌ಗಳನ್ನು ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಮತ್ತು ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದು ಎರಡು ವಿಭಾಗಗಳ ಅಡಿಯಲ್ಲಿ ವರ್ಗೀಕರಿಸಿದೆ.

ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಎಂದರೆ, ಬಂಧಿಸಲ್ಪಟ್ಟವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾದವರು. ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದರೆ ಪೊಲೀಸ್ ಅಥವಾ ನ್ಯಾಯಾಂಗ ಬಂಧನದಲ್ಲಿರುವವರು.

2006 ರಲ್ಲಿ ಉತ್ತರ ಪ್ರದೇಶದಲ್ಲಿ ಏಳು ಮತ್ತು ಮಧ್ಯಪ್ರದೇಶದಲ್ಲಿ ನಾಲ್ವರು ಪೊಲೀಸರು ಲಾಕಪ್ ಡೆತ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ವರದಿಯಾಗಿತ್ತು. ಈ 11 ಮಂದಿ ಪೊಲೀಸರಿಗೂ ಶಿಕ್ಷೆಯಾಗಿದ್ದು, 20 ವರ್ಷಗಳಲ್ಲಿ ಒಂದೇ ಬಾರಿಗೆ ಶಿಕ್ಷೆಗೆ ಗುರಿಯಾದ ಅತ್ಯಧಿಕ ಪೊಲೀಸರು ಇವರು ಎಂಬುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶದಲ್ಲಿ ಕಾಣಸಿಗುತ್ತದೆ. ಆದರೆ, ಇವರೆಲ್ಲಾ ಅದೇ ವರ್ಷ ಮಾಡಿದ ಅಪರಾಧಕ್ಕೆ ಶಿಕ್ಷೆ ಅನುಭವಿಸಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...