Homeಚಳವಳಿಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ...

ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಕಾಯ್ದೆಯು ಪೊಲೀಸರಿಗೆ ಮತ್ತು ಸ್ವಘೋಷಿತ ಗೋ ರಕ್ಷಕರಿಗೆ ಅನಿಯಮಿತ ಅಧಿಕಾರ ನೀಡಿದ್ದು, ನಿತ್ಯ ಕಿರುಕುಳ ಮತ್ತು ಹಣದ ಸುಲಿಗೆ ನಡೆಯುತ್ತಿದೆ. ನಾಲ್ಕು ತಿಂಗಳಲ್ಲಿ 29 FIR ದಾಖಲಿಸಲಾಗಿದೆ.

- Advertisement -
- Advertisement -

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯಿದೆ 2020 ರ ಜಾರಿಯಿಂದ ಜನರ ಜೀವನೋಪಾಯವನ್ನು ಅಪರಾಧೀಕರಿಸುವ ಪ್ರಕ್ರಿಯೆಗಳು ಆರಂಭವಾಗಿದ್ದು, ಗೂಂಡಾಗಿರಿಯನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ. ಇದರಿಂದ ರೈತರು, ಮಾಂಸದ ವ್ಯಾಪಾರಿಗಳು ಸೇರಿದಂತೆ ಬಡವರ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಆಹಾರ ನಮ್ಮ ಹಕ್ಕು ಒಕ್ಕೂಟದ ಅಧ್ಯಯನ ವರದಿ ತಿಳಿಸಿದೆ.

ಆಹಾರ ನಮ್ಮ ಹಕ್ಕು ಒಕ್ಕೂಟವು ವೈದ್ಯರಾದ ಡಾ. ಸಿಲ್ವಿಯಾ ಕರ್ಪಗಂ ಮತ್ತು ಸಂಶೋಧಕರಾದ ಸಿದ್ಧಾರ್ಥ್ ಕೆ ಜೋಶಿಯವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಿಂದಾಗಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ. ಜಾನುವಾರು ವ್ಯಾಪಾರಿಗಳು, ಮಾಂಸದ ವ್ಯಾಪಾರಿಗಳು, ಮಾರಾಟಗಾರರು ಮತ್ತು ಗ್ರಾಹಕರ ಮೇಲೆ ಜಾನುವಾರು ಹತ್ಯೆ ನಿಷೇಧವು ತೀವ್ರ ಪರಿಣಾಮ ಬೀರಿದ್ದು, ಈ ಕಾಯ್ದೆಯು ಕರ್ನಾಟಕದ ಜಾನುವಾರು, ಚರ್ಮ ಮತ್ತು ಮಾಂಸದ ಆರ್ಥಿಕತೆಗೆ ಬಲವಾದ ಹೊಡೆತ ನೀಡಿದೆ ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕ ರಾಜ್ಯ ರೈತ ಸಂಘ, ದನದ ಮಾಂಸ ವ್ಯಾಪಾರಿಗಳ ಸಂಘ, ಜಮಾತೆ ಇಸ್ಲಾಮಿ, ಕರ್ನಾಟಕ ಅಲ್ಪಸಂಖ್ಯಾತರ ಹಕ್ಕುಗಳ ವೇದಿಕೆ, ದಲಿತ ಸಂಘರ್ಷ ಸಮಿತಿ (ಭೀಮವಾದ), ಚರ್ಮ ಘಟಕಗಳು, ಕಸಾಯಿಖಾನೆಗಳು, ಹೋಟಲ್ ಮಾಲೀಕರು, ಜಾನುವಾರು ಮಾರುಕಟ್ಟೆ ಅಧಿಕಾರಿಗಳು ಮತ್ತು ವ್ಯಾಪಾರಿಗಳು ಹಾಗೂ ಗ್ರಾಹಕರರನ್ನು ಸಂದರ್ಶಿಸಿ ಈ ವರದಿ ತಯಾರಿಸಲಾಗಿದೆ.

ಹಳೆಯ 1964 ಕಾಯಿದೆಯಿಂದ ಈಗಾಗಲೇ ನಿಷೇಧಿಸಲ್ಪಟ್ಟಿರುವ ಆಕಳು ಜೊತೆಗೆ ಎಲ್ಲ ವಯಸ್ಸಿನ ಗೂಳಿ, ಎತ್ತು ಹಾಗು ಹದಿಮೂರು ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳ ಹತ್ಯೆವನ್ನು ನಿಷೇಧಿಸುವ ಕಾಯ್ದೆಯನ್ನು ಬಿಜೆಪಿ ಸರ್ಕಾರವು 2021 ರಲ್ಲಿ ತಂದಿತು.

ರೈತರು ಹಾಲು, ಗೊಬ್ಬರ, ಸಾಗಣೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಕುತ್ತಾರೆ ಮತ್ತು ಈ ಜಾನುವಾರುಗಳು ಅನುತ್ಪಾದಕವಾದಾಗ ಅವುಗಳನ್ನು ಮಾರಿ ಬೇರೆಯವನ್ನು ಖರೀದಿಸುತ್ತಾರೆ. ರಾಜ್ಯದಲ್ಲಿ “ಅನುತ್ಪಾದಕ ಜಾನುವಾರು” ಗಳಿಂದ ಮಾಂಸ, ಗೊರಸು, ಚರ್ಮ, ಮೂಳೆಗಳು, ರಕ್ತ, ಟ್ಯಾಲೋ ಮತ್ತು ಇತರ ಉತ್ಪನ್ನಗಳ ದೊಡ್ಡ ವ್ಯಾಪಾರವೂ ಇದೆ. 2018-19ರಲ್ಲಿ ಕರ್ನಾಟಕದಲ್ಲಿ ಜಾನುವಾರು ಉತ್ಪನ್ನಗಳ ಒಟ್ಟು ಅಂದಾಜು ಮೌಲ್ಯ ರೂ. 49834.6 ಕೋಟಿಗಳು ಇತ್ತು. ಆದರೆ ಕಾಯ್ದೆ ಜಾರಿಯಿಂದ ಇದರಲ್ಲಿ ಬಹುತೇಕ ಕುಸಿತ ಕಂಡಿದೆ. ಕಾಯ್ದೆಯು ಪೊಲೀಸರಿಗೆ ಮತ್ತು ಸ್ವಯಂ ನೇಮಕಗೊಂಡ ಗೋ ರಕ್ಷಕರಿಗೆ ಅನಿಯಮಿತ ಅಧಿಕಾರವನ್ನು ನೀಡಿದ್ದು, ನಿತ್ಯ ಕಿರುಕುಳ ಮತ್ತು ಹಣ ಸುಲಿಗೆ ನಡೆಯುತ್ತಿದೆ. ಕಾಯ್ದೆಯ ಅನುಷ್ಠಾನವಾದ ನಾಲ್ಕು ತಿಂಗಳೊಳಗೆ 29 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ; ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿವೆ ಎಂದು ವರದಿ ಹೇಳಿದೆ.

ಜಾನುವಾರು ವ್ಯಾಪಾರವನ್ನು ಅವಲಂಬಿಸಿರುವ ಇಡೀ ಆರ್ಥಿಕ ಮೌಲ್ಯ ಸರಪಳಿಯಲ್ಲಿ, ಟ್ಯಾಲೋ ವ್ಯಾಪಾರಿಗಳು, ಕ್ಲೀನರ್‌ಗಳು, ಲೋಡರ್‌ಗಳು, ಟೆಂಪೋ ಡ್ರೈವರ್‌ಗಳು, ಅಂಗಡಿ ಕೆಲಸಗಾರರು, ಬೀದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು ಮತ್ತು ಕಸಾಯಿಖಾನೆಗಳಲ್ಲಿ ಕೆಲಸ ಮಾಡುವವರು ಕೆಲಸ ಕಳೆದುಕೊಂಡಿದ್ದಾರೆ ಮತ್ತು ಇವರಿಗೆ ಮೂಲ ಜೀವನೋಪಾಯಕ್ಕೂ ಸರಕಾರದಿಂದ ಯಾವುದೇ ರೀತಿಯ ಬೆಂಬಲ ಸಿಕ್ಕಿಲ್ಲ ವರದಿ ತಿಳಿಸಿದೆ.

ಬೆಂಗಳೂರಿನ ದೇವರಜೀವನಹಳ್ಳಿಯ ಚರ್ಮ ಸಂಸ್ಕರಣ ಘಟಕ ಮುಚ್ಚಿಹೋಗಿರುವುದು

2018-19ರಲ್ಲಿ ಕರ್ನಾಟಕದಲ್ಲಿ ಉತ್ಪಾದನೆಯಾಗುವ ದನ ಮತ್ತು ಎಮ್ಮೆ ಮಾಂಸದ ಅಂದಾಜು ಮಾರುಕಟ್ಟೆ ಮೌಲ್ಯ ಕ್ರಮವಾಗಿ 270.6 ಕೋಟಿ ಮತ್ತು 185.5 ಕೋಟಿ ಇತ್ತು. ಅದೇ ರೀತಿ 2018-19 ರಲ್ಲಿ ಕರ್ನಾಟಕದಲ್ಲಿ ಉತ್ಪಾದಿಸಲಾದ ದನ ಮತ್ತು ಎಮ್ಮೆಗಳ ಚರ್ಮದ ಅಂದಾಜು ಮೌಲ್ಯವನ್ನು 8.26 ಮತ್ತು 4.84 ಕೋಟಿ ಎಂದು ಅಂದಾಜಿಸಲಾಗಿದೆ. ಚರ್ಮೋದ್ಯಮದ ಅತ್ಯಂತ ಕೀಳು ಉದ್ಯೋಗದಲ್ಲಿ ತೊಡಗಿರುವ ಹೆಚ್ಚಿನ ಜನರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಮತ್ತು ಈ ಕಾಯಿದೆಯಿಂದಾಗಿ ತೀವ್ರ ಸಂಕಷ್ಟವನ್ನು ಅನುಭವಿಸಿದ್ದಾರೆ. ಚರ್ಮಗಳ ಪೂರೈಕೆಯು ಕಡಿಮೆಯಾಗಿದೆ; ಇದರಿಂದಾಗಿ ಉದ್ಯಮವನ್ನು ಅವಲಂಬಿಸಿಕೊಂಡಿದ್ದವರ ಜೀವನೋಪಾಯದ ಮೇಲೆ ಗಣನೀಯವಾಗಿ ಪರಿಣಾಮ ಬೀರಿದೆ. ಸ್ಪಷ್ಟವಾಗಿ, ‘ಮೇಲ್ಜಾತಿ’ ಹಿಂದೂಗಳ ನಂಬಿಕೆಗಳಿಗಾಗಿ, ರಾಜ್ಯದ ಅಂಚಿನಲ್ಲಿರುವ ಸಮುದಾಯಗಳ ಮೇಲೆ ದೊಡ್ಡ ಹೊರೆ ಹಾಕಲಾಗುತ್ತಿದೆ. ದಲಿತ ಸಮುದಾಯವನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಚರ್ಮದ ವ್ಯಾಪಾರವನ್ನು ಆಧುನೀಕರಿಸಲು ಮೂಲಸೌಕರ್ಯ ಮತ್ತು ಯಂತ್ರೋಪಕರಣಗಳಲ್ಲಿ ಹೂಡಿಕೆ ಮಾಡುವ ಬದಲು, ಈಗಿರುವ ಜೀವನೋಪಾಯವನ್ನು ಸಹ ಕಸಿದುಕೊಳ್ಳಲಾಗುತ್ತಿದೆ; ಇದು ಒಂದು ರೀತಿಯ ಜಾತಿ ತಾರತಮ್ಯವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕಾಯ್ದೆಯಿಂದ ಒಂದೇ ಗುಂಪಿಗೆ ಲಾಭ

ಸಂದರ್ಶಿಸಿದ ಹೆಚ್ಚಿನ ಜನರು ಜಾನುವಾರು ಹತ್ಯೆ ನಿಷೇಧದಿಂದ ಪ್ರಯೋಜನ ಪಡೆಯುತ್ತಿರುವವರು ದೊಡ್ಡ ದನದ ಮಾಂಸ ರಫ್ತು ಕಂಪನಿಗಳು ಎಂದು ಒಕ್ಕೊರಲಲ್ಲಿ ಹೇಳುತ್ತಾರೆ. ಅವರು ಕೆಲವೊಮ್ಮೆ ತಮ್ಮ ಸಂಸ್ಥೆಗಳಿಗೆ ಮುಸ್ಲಿಂ ಹೆಸರುಗಳನ್ನು ಬಳಸುತ್ತಾರೆ. ಸತೀಶ್ ಸಬರ್ವಾಲ್ ಅವರ ಕಂಪನಿಯ ಹೆಸರು ಅಲ್ ಕಬೀರ್ ಎಕ್ಸ್‌ಪೋರ್ಟ್ಸ್ ಎಂದಾಗಿದೆ. ಅದೇ ರೀತಿ ಸುನಿಲ್ ಕಪೂರ್ ಒಡೆತನದ ಅರೇಬಿಯನ್ ಎಕ್ಸ್‌ಪೋರ್ಟ್ಸ್, ಸುನಿಲ್ ಸೂದ್ ಒಡೆತನದ ಅಲ್ ನೂರ್ ಎಕ್ಸ್‌ಪೋರ್ಟ್ಸ್ ಎಂಬ ಹೆಸರುಗಳಿವೆ ಎಂದು ವರದಿ ಹೇಳಿದೆ.

15% (ಅಥವಾ 18 ಕೋಟಿ) ಭಾರತೀಯರು, ಇದರಲ್ಲಿ ದಲಿತರು, ಮುಸ್ಲಿಮರು, ಕ್ರಿಶ್ಚಿಯನ್ನರು, ಇತರ ಹಿಂದುಳಿದ ಜಾತಿಗಳು ಮತ್ತು ಆದಿವಾಸಿಗಳು ದನಮಾಂಸವನ್ನು ಸೇವಿಸುತ್ತಾರೆ. ದನಮಾಂಸವು ಅಗ್ಗದ ಪೌಷ್ಟಿಕಾಂಶದ ದಟ್ಟವಾದ ಆಹಾರಗಳಲ್ಲಿ ಒಂದಾಗಿದೆ. 100 ಗ್ರಾಂ ಲೀನ್ ದನಮಾಂಸವು ದೈನಂದಿನ ಪ್ರೋಟೀನ್ ಅಗತ್ಯದ 54% ಅನ್ನು ಒದಗಿಸುತ್ತದೆ ಮತ್ತು ದನಮಾಂಸದಲ್ಲಿ ಲಭ್ಯವಿರುವ ಪೋಷಕಾಂಶಗಳು ಅರಗಬಲ್ಲವಾಗುತ್ತದೆ ಮತ್ತು ಚೆನ್ನಾಗಿ ಹೀರಲ್ಪಡುತ್ತವೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೀಫ್‌ ಬೆಲೆ 250 ರೂ ಇತ್ತು. ಕಾಯ್ದೆ ಜಾರಿಯಾದ ನಂತರ 300ರಿಂದ 350ರವರೆಗೆ ತಲುಪಿದೆ. ಅದೇ ರೀತಿಯ ಕರ್ನಾಟಕದ ಇತರ ಜಿಲ್ಲೆಗಳಲ್ಲಿ 150-200 ರೂ ಇದ್ದ ಬೀಫ್ ಬೆಲೆಯು 250-275 ರೂ ವರೆಗೆ ತಲುಪಿದೆ. ಇದು ಗ್ರಾಹಕರ ಮೇಲೆ ಹೊರೆ ಬಿದ್ದಿದೆ ಎಂದು ವರದಿ ಹೇಳಿದೆ.

ಮಾಂಸದಂಗಡಿ

ಕೀಳು ಮಟ್ಟದ ಚಿಂತನೆಯಿಂದ ರೂಪುಗೊಂಡಿರುವ ಈ ಕಾಯಿದೆಯಿಂದ ಜೀವನೋಪಾಯ, ಪೋಷಣೆ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಅಗಾಧವಾದ ಹಾನಿಯನ್ನು ಅರಿತುಕೊಂಡು ಜನರಿಂದ ಜನರಿಗಾಗಿ ರಚನೆಗೊಂಡಿರುವ ಸರ್ಕಾರವು ಈ ಕಾಯಿದೆಯನ್ನು ಅದರ ಪ್ರಸ್ತುತ ಸ್ವರೂಪದಲ್ಲಿ ಹಿಂಪಡೆಯಬೇಕು. ಜಾನುವಾರು ವ್ಯವಹಾರದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಮುದಾಯವು ಅವರ ಔದ್ಯೋಗಿಕ, ಸಾಂಸ್ಕೃತಿಕ ಅಥವಾ ಪೌಷ್ಟಿಕಾಂಶದ ಆಯ್ಕೆಗಳಿಗಾಗಿ ಕಿರುಕುಳ, ಬೆದರಿಕೆ ಅಥವಾ ಕೀಳ್ಬಳಕೆಗೆ ಒಳಗಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಈ ಕಾಯಿದೆಯಿಂದಾಗಿ ತೊಂದರೆಗೊಳಗಾದ ಕರ್ನಾಟಕದ ನಾಗರಿಕರಿಗೆ ನ್ಯಾಯದ ಹಿತದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ನೀಡಬೇಕು. ದನಗಳ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಅಪರಾಧೀಕರಣಗೊಳಿಸಬೇಕೆ ವಿನಃ ಜನರ ಜೀವನೋಪಾಯ ಮತ್ತು ಆಹಾರದ ಆಯ್ಕೆಗಳನ್ನಲ್ಲ ಎಂದು ವರದಿಯು ಒತ್ತಾಯಿಸಿದೆ.

ಪೂರ್ತಿ ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...