Homeಮುಖಪುಟನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ಕಳೆದ ವರ್ಷ ಸುಶಾಂತ್‌ ಸಿಂಗ್‌ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಕುಟುಂಬವು ಈ ನೋವಿನಲ್ಲಿ ಇರುವಾಗಲೇ ಮತ್ತೆ ಆಘಾತಕ್ಕೆ ಒಳಗಾಗಿದೆ.

- Advertisement -
- Advertisement -

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ ನಟ ಸುಶಾಂತ್‌ ಸಿಂಗ್ ರಜಪೂತ್‌ ಅವರ ಕುಟುಂಬಕ್ಕೆ ಸೇರಿದ ಕನಿಷ್ಠ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ತೀವ್ರ ಗಾಯಗೊಂಡಿರುವ ಬಾಲ್‌ಮುಕುಂದ್ ಸಿಂಗ್ ಮತ್ತು ದಿಲ್‌ಖುಷ್‌ ಸಿಂಗ್ ಅವರನ್ನು ಪಾಟ್ನಾಕ್ಕೆ ಕರೆದೊಯ್ಯಲಾಗಿದ್ದು, ಬಾಲ್ಮಿಕಿ ಸಿಂಗ್‌ ಹಾಗೂ ತೋನು ಸಿಂಗ್ ಅವರನ್ನು ಲಖಿಸರಾಯ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಹಾರದ ಲಖಿಸರಾಯ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333ರಲ್ಲಿ ಮಂಗಳವಾರ ಬೆಳಿಗ್ಗೆ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದಾಗ ವಾಹನವು ಟ್ರಕ್‌ಗೆ ಡಿಕ್ಕಿಯಾಗಿದ್ದು ಐವರು ಮೃತಪಟ್ಟಿದ್ದಾರೆ.

ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಒಪಿ ಸಿಂಗ್ ಅವರ ಸಹೋದರಿ ಗೀತಾ ದೇವಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪಾಟ್ನಾದಿಂದ ವಾಪಾಸ್ಸಾಗುತ್ತಿದ್ದರು. ಓಪಿ ಸಿಂಗ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಮಾವನಾಗಿದ್ದಾರೆ. ಸುಶಾಂತ್ ಸಿಂಗ್ ಅವರು 2020ರ ಜೂನ್‌ 14ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾದ ಪ್ರೌಢಶಾಲೆ ಬಳಿ ಅಪಘಾತ ಸಂಭವಿಸಿದೆ. ಲಖಿಸರಾಯ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಕುಮಾರ್, “ಟ್ರಕ್ ಮತ್ತು ಸುಮೋ [ಎಸ್‌ಯುವಿ] ನಡುವೆ ಭಾರಿ ಡಿಕ್ಕಿ ಸಂಭವಿಸಿದ್ದು, ಹತ್ತು ಜನರು ಪಾಟ್ನಾದಿಂದ ಹಿಂತಿರುಗುತ್ತಿದ್ದರು. ಸುಮೋ ಚಾಲಕ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಾಳುಗಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಗಾಯಗೊಂಡಿರುವ ಬಾಲ್‌ಮುಕುಂದ್‌‌ ಸಿಂಗ್ ಮತ್ತು ದಿಲ್ ಖುಷ್ ಸಿಂಗ್ ಇಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದ್ದು, ಉಳಿದ ಇಬ್ಬರಾದ ಬಾಲ್ಮಿಕಿ ಸಿಂಗ್ ಮತ್ತು ತೋನು ಸಿಂಗ್ ಅವರನ್ನು ಲಖಿಸರಾಯ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರನ್ನು ಲಾಲ್ಜಿತ್ ಸಿಂಗ್ (ಒಪಿ ಸಿಂಗ್ ಅವರ ಸೋದರ ಸಂಬಂಧಿ), ಅವರ ಇಬ್ಬರು ಮಕ್ಕಳಾದ ಅಮಿತ್ ಶೇಖರ್ ಅಲಿಯಾಸ್ ನೇಮಾನಿ ಸಿಂಗ್ ಮತ್ತು ರಾಮಚಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಉಳಿದವರನ್ನು ಬೇಬಿದೇವಿ, ಅನಿತಾದೇವಿ ಮತ್ತು ಚಾಲಕ ಪ್ರೀತಂ ಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೀಡಾಗಿರುವ ಕುಮಾರ್, ಇದೇ ಕುಟುಂಬದವರೇ ಎಂಬುದು ಖಚಿತವಾಗಿಲ್ಲ.

ಜಮುಯಿ ಜಿಲ್ಲೆಯ ಭಂಡಾರ್ ಗ್ರಾಮದಲ್ಲಿನ ತಮ್ಮ ಮನೆಗೆ ಕುಟುಂಬವು ಹಿಂದಿರುಗುತ್ತಿದ್ದಾಗ ಅವರ ವಾಹನವು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಆತ್ಮಹತ್ಯೆಗೆ ಶರಣಾಗಿದ್ದ ಸುಶಾಂತ್‌; ನೋವಿನಲ್ಲಿರುವ ಕುಟುಂಬಕ್ಕೆ ಮತ್ತೆ ಆಘಾತ

2020ರಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವು ಅನುಮಾನಗಳಿಗೆ ಎಡೆ ಮಾಡಿತ್ತು. ಆದರೆ ನಂತರದಲ್ಲಿ ನಡೆದ ತನಿಖೆಗಳು, ಊಹಾಪೋಹಗಳಿಗೆ ತೆರೆ ಎಳೆದಿದ್ದವು.

ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿತ್ತು. “ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ” ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಹೇಳಿದ್ದರು.

“34 ವರ್ಷದ ಬಾಲಿವುಡ್ ತಾರೆ ಸುಶಾಂತ್ ಸಿಂಗ್ ಅನ್ನು ಹತ್ಯೆ ಮಾಡಲಾಗಿದೆ ಎನ್ನುವ ಕುಟುಂಬದ ಹೇಳಿಕೆಗೆ ಯಾವುದೇ ಪುರಾವೆಗಳಿಲ್ಲ” ಎಂದು ಏಮ್ಸ್ ತಿಳಿಸಿತ್ತು. ಇದು ಸುಶಾಂತ್ ಕುಟುಂಬ ಮತ್ತು ಅವರ ವಕೀಲರಿಂದ ಬರುತ್ತಿರುವ ಆರೋಪಗಳಷ್ಟೆ ಎಂದು ತಳ್ಳಿಹಾಕಿತ್ತು.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ವಕೀಲ ವಿಕಾಸ್ ಸಿಂಗ್ ಅವರು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡು, “ಇವರು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸುವುದರ ಮೂಲಕ ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದರು.

ಸುಶಾಂತ್ ಸಿಂಗ್ ರಜಪೂತ್ ಅವರ ಜೀವನವನ್ನು ಆಧರಿಸಿ ತಯಾರಿಸಿರುವ ‘ನ್ಯಾಯ್: ದಿ ಜಸ್ಟೀಸ್’ ಚಿತ್ರವೂ ನಿರ್ಮಾಣವಾಗಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡದಂತೆ ತಡೆಯಾಜ್ಞೆ ತರುವ ಪ್ರಯತ್ನವೂ ನಡೆದಿತ್ತು. ಮೊದಲೇ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಗಿದೆ.


ಇದನ್ನೂ ಓದಿರಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...