Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಯುವತಿಗೆ ಕಿರುಕುಳ ನೀಡಿರುವ ದುರ್ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುರತ್ಕಲ್ ಬಳಿಯ ಮುಕ್ಕಾ ಶ್ರೀನಿವಾಸ ಕಾಲೇಜಿನಲ್ಲಿ ಕೇರಳ ಮೂಲದ ಮೊಹಮ್ಮದ್ ಯಾಸಿನ್ ಎಂಬ 20 ವರ್ಷದ ಯುವಕ ವಿದ್ಯಾಭ್ಯಾಸ ಮಾಡುತ್ತಿದ್ದರು. ಅದೇ ಕಾಲೇಜಿನ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅವರ ಸಹಪಾಠಿ ಗೆಳತಿಯೊಬ್ಬರು ಮುಕ್ಕಾದಿಂದ ಸುರತ್ಕಲ್‌ಗೆ ಮನೆ ಬದಲಿಸುತ್ತಿದ್ದರು. ರಾತ್ರಿ ವೇಳೆ ಆಟೋ ಸಿಗದಿದ್ದರಿಂದ ಅವರನ್ನು ಮೊಹಮ್ಮದ್ ಯಾಸಿನ್ ಡ್ರಾಪ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಹಿಂಬಾಲಿಸಿ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್‌ಮೆಂಟ್ ಬಳಿ ಹಲ್ಲೆ ನಡೆಸಿದ್ದಾರೆ.

“ನಿನ್ನೆ ರಾತ್ರಿ 9.30 ರ ಸಮಯದಲ್ಲಿ ಆಟೋ ಸಿಗದಿದ್ದ ಗೆಳತಿಯನ್ನು ಮುಕ್ಕಾದಿಂದ ಸುರತ್ಕಲ್‌ಗೆ ಡ್ರಾಪ್ ಮಾಡುತ್ತಿದ್ದೆ. ಇಬ್ಬರು ಮುಕ್ಕಾದಿಂದಲೇ ನಮ್ಮನ್ನು ಹಿಂಬಾಲಿಸುತ್ತಿದ್ದರು. ನಾವು ಗೊಂದಲದಿಂದ ಸುರತ್ಕಲ್‌ನಲ್ಲಿ ಬೇರೊಂದು ಅಪಾರ್ಟ್‌ಮೆಂಟ್ ತಲುಪಿದ್ದೆವು. ಅಷ್ಟರಲ್ಲಿ ಅಪಾರ್ಟ್‌ಮೆಂಟ್‌ ಪಾರ್ಕಿಂಗ್ ಬಳಿಯಿದ್ದ ಮಹಿಳೆಯೊಬ್ಬರು ಹೊರಬರಬೇಡಿ, ಕೆಲ ಯುವಕರ ಗುಂಪು ನಿಮ್ಮ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿಸಿದರು. ಆದರೆ ಒಳಬಂದ ಯುವಕರು ನನ್ನ ಐಡಿ ಕಾರ್ಡ್ ನೋಡಿ, ಹೆಸರು ಕೇಳಿ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಗೆಳತಿಯನ್ನು ನಿಂದಿಸಿ, ನೂಕಾಡಿ ಕಿರುಕುಳ ನೀಡಿದರು” ಎಂದು ಹಲ್ಲೆಗೊಳಗಾದ ಮೊಹಮ್ಮದ್ ಯಾಸಿನ್ ದಿ ನ್ಯೂಸ್‌ ಮಿನಿಟ್‌ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸ್‌ರಿಗೆ ಫೋನ್ ಮೂಲಕ ದೂರು ನೀಡಿದ ನಂತರ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್ ಆಚಾರ್ಯ, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತರಾದ ಮೊಹಮ್ಮದ್ ಯಾಸಿನ್ ಮತ್ತು ಅವರ ಗೆಳತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ರಾಜ್ಯದಲ್ಲಿ ಮತೀಯ ಗೂಂಡಾಗಿರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಹಿಂದೂ ವ್ಯಕ್ತಿಯೊಬ್ಬ ತನ್ನ ಕಚೇರಿಯ ಮುಸ್ಲಿಂ ಮಹಿಳೆಗೆ ಡ್ರಾಪ್ ಕೊಡುತ್ತಿದ್ದಾಗ ಮುಸ್ಲಿಂ ಯುವಕರ ಗುಂಪೊಂದು ಅವರನ್ನು ರಸ್ತೆಯಲ್ಲಿ ತಡೆದು ಕಿರುಕುಳ ನೀಡಿದ್ದರು. ನಿಂದಿಸಿ, ಮಹಿಳೆಯನ್ನು ಆಟೋ ಹತ್ತಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಇದನ್ನು ಖಂಡಿಸಿದ್ದ ಸಿಎಂ ಬೊಮ್ಮಾಯಿಯವರು ಆರೋಪಿಗಳನ್ನು ಬಂಧಿಸಲು ಆದೇಶಿಸಿದ್ದರು. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಆದರೆ ತದನಂತರ ನಡೆದ ಮತೀಯ ಗೂಂಡಾಗಿರಿಗಳನ್ನು ಸಿಎಂ ಬೊಮ್ಮಾಯಿಯವರು ಖಂಡಿಸಿಲ್ಲ ಮಾತ್ರವಲ್ಲ ಅವುಗಳನ್ನು ಸಮರ್ಥಿಸುವಂತೆ ಹೇಳಿಕೆ ನೀಡಿದ್ದರು. ಮಂಗಳೂರಿಗೆ ಅವರು ಆಗಮಿಸಿದ್ದಾಗ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಮಾತನಾಡಿಸಿದ್ದರು. ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ” ಎಂದಿದ್ದರು. ಅಲ್ಲಿಂದೀಚೆಗೆ ಸರಣಿ ರೀತಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿವೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ ನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 17 ರಂದು ಜರುಗಿತ್ತು.

ಮಂಗಳೂರಿನ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 22 ನಡೆದಿದೆ.

ಒಟ್ಟಿನಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮುಖ್ಯಮಂತ್ರಿಗಳೇ ಅದನ್ನು ಸಮರ್ಥಿಸಿ ಮಾತಾಡಿರುವುದರಿಂದ ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲ. ಇದರ ವಿರುದ್ಧ ಪ್ರಜ್ಞಾವಂತರು, ಮಾನವ ಹಕ್ಕು ಕಾರ್ಯಕರ್ತರು ಮತ್ತು ವಕೀಲರು ನಿರಂತರವಾಗಿ ದನಿಯೆತ್ತುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿದ್ದಲ್ಲಿ ರಾಜ್ಯ ಅಶಾಂತಿಯ ಗೂಡಾಗುವ ಆತಂಕ ಎದುರಾಗಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...