Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಯುವತಿಗೆ ಕಿರುಕುಳ ನೀಡಿರುವ ದುರ್ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುರತ್ಕಲ್ ಬಳಿಯ ಮುಕ್ಕಾ ಶ್ರೀನಿವಾಸ ಕಾಲೇಜಿನಲ್ಲಿ ಕೇರಳ ಮೂಲದ ಮೊಹಮ್ಮದ್ ಯಾಸಿನ್ ಎಂಬ 20 ವರ್ಷದ ಯುವಕ ವಿದ್ಯಾಭ್ಯಾಸ ಮಾಡುತ್ತಿದ್ದರು. ಅದೇ ಕಾಲೇಜಿನ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅವರ ಸಹಪಾಠಿ ಗೆಳತಿಯೊಬ್ಬರು ಮುಕ್ಕಾದಿಂದ ಸುರತ್ಕಲ್‌ಗೆ ಮನೆ ಬದಲಿಸುತ್ತಿದ್ದರು. ರಾತ್ರಿ ವೇಳೆ ಆಟೋ ಸಿಗದಿದ್ದರಿಂದ ಅವರನ್ನು ಮೊಹಮ್ಮದ್ ಯಾಸಿನ್ ಡ್ರಾಪ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಹಿಂಬಾಲಿಸಿ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್‌ಮೆಂಟ್ ಬಳಿ ಹಲ್ಲೆ ನಡೆಸಿದ್ದಾರೆ.

“ನಿನ್ನೆ ರಾತ್ರಿ 9.30 ರ ಸಮಯದಲ್ಲಿ ಆಟೋ ಸಿಗದಿದ್ದ ಗೆಳತಿಯನ್ನು ಮುಕ್ಕಾದಿಂದ ಸುರತ್ಕಲ್‌ಗೆ ಡ್ರಾಪ್ ಮಾಡುತ್ತಿದ್ದೆ. ಇಬ್ಬರು ಮುಕ್ಕಾದಿಂದಲೇ ನಮ್ಮನ್ನು ಹಿಂಬಾಲಿಸುತ್ತಿದ್ದರು. ನಾವು ಗೊಂದಲದಿಂದ ಸುರತ್ಕಲ್‌ನಲ್ಲಿ ಬೇರೊಂದು ಅಪಾರ್ಟ್‌ಮೆಂಟ್ ತಲುಪಿದ್ದೆವು. ಅಷ್ಟರಲ್ಲಿ ಅಪಾರ್ಟ್‌ಮೆಂಟ್‌ ಪಾರ್ಕಿಂಗ್ ಬಳಿಯಿದ್ದ ಮಹಿಳೆಯೊಬ್ಬರು ಹೊರಬರಬೇಡಿ, ಕೆಲ ಯುವಕರ ಗುಂಪು ನಿಮ್ಮ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿಸಿದರು. ಆದರೆ ಒಳಬಂದ ಯುವಕರು ನನ್ನ ಐಡಿ ಕಾರ್ಡ್ ನೋಡಿ, ಹೆಸರು ಕೇಳಿ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಗೆಳತಿಯನ್ನು ನಿಂದಿಸಿ, ನೂಕಾಡಿ ಕಿರುಕುಳ ನೀಡಿದರು” ಎಂದು ಹಲ್ಲೆಗೊಳಗಾದ ಮೊಹಮ್ಮದ್ ಯಾಸಿನ್ ದಿ ನ್ಯೂಸ್‌ ಮಿನಿಟ್‌ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸ್‌ರಿಗೆ ಫೋನ್ ಮೂಲಕ ದೂರು ನೀಡಿದ ನಂತರ ಸುರತ್ಕಲ್ ಪೊಲೀಸರು ಪ್ರಶಾಂತ್, ಗುರುಪ್ರಸಾದ್, ಪ್ರಹ್ಲಾದ್, ಪ್ರತೀಶ್ ಆಚಾರ್ಯ, ಸುಖೇಸ್ ಮತ್ತು ಭರತ್ ಎಂಬ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತರಾದ ಮೊಹಮ್ಮದ್ ಯಾಸಿನ್ ಮತ್ತು ಅವರ ಗೆಳತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ರಾಜ್ಯದಲ್ಲಿ ಮತೀಯ ಗೂಂಡಾಗಿರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಹಿಂದೂ ವ್ಯಕ್ತಿಯೊಬ್ಬ ತನ್ನ ಕಚೇರಿಯ ಮುಸ್ಲಿಂ ಮಹಿಳೆಗೆ ಡ್ರಾಪ್ ಕೊಡುತ್ತಿದ್ದಾಗ ಮುಸ್ಲಿಂ ಯುವಕರ ಗುಂಪೊಂದು ಅವರನ್ನು ರಸ್ತೆಯಲ್ಲಿ ತಡೆದು ಕಿರುಕುಳ ನೀಡಿದ್ದರು. ನಿಂದಿಸಿ, ಮಹಿಳೆಯನ್ನು ಆಟೋ ಹತ್ತಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಇದನ್ನು ಖಂಡಿಸಿದ್ದ ಸಿಎಂ ಬೊಮ್ಮಾಯಿಯವರು ಆರೋಪಿಗಳನ್ನು ಬಂಧಿಸಲು ಆದೇಶಿಸಿದ್ದರು. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಆದರೆ ತದನಂತರ ನಡೆದ ಮತೀಯ ಗೂಂಡಾಗಿರಿಗಳನ್ನು ಸಿಎಂ ಬೊಮ್ಮಾಯಿಯವರು ಖಂಡಿಸಿಲ್ಲ ಮಾತ್ರವಲ್ಲ ಅವುಗಳನ್ನು ಸಮರ್ಥಿಸುವಂತೆ ಹೇಳಿಕೆ ನೀಡಿದ್ದರು. ಮಂಗಳೂರಿಗೆ ಅವರು ಆಗಮಿಸಿದ್ದಾಗ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಮಾತನಾಡಿಸಿದ್ದರು. ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ” ಎಂದಿದ್ದರು. ಅಲ್ಲಿಂದೀಚೆಗೆ ಸರಣಿ ರೀತಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿವೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ ನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 17 ರಂದು ಜರುಗಿತ್ತು.

ಮಂಗಳೂರಿನ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಅಕ್ಟೋಬರ್ 22 ನಡೆದಿದೆ.

ಒಟ್ಟಿನಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮುಖ್ಯಮಂತ್ರಿಗಳೇ ಅದನ್ನು ಸಮರ್ಥಿಸಿ ಮಾತಾಡಿರುವುದರಿಂದ ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲ. ಇದರ ವಿರುದ್ಧ ಪ್ರಜ್ಞಾವಂತರು, ಮಾನವ ಹಕ್ಕು ಕಾರ್ಯಕರ್ತರು ಮತ್ತು ವಕೀಲರು ನಿರಂತರವಾಗಿ ದನಿಯೆತ್ತುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿದ್ದಲ್ಲಿ ರಾಜ್ಯ ಅಶಾಂತಿಯ ಗೂಡಾಗುವ ಆತಂಕ ಎದುರಾಗಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...