Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...