Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...