Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...