Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...