Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...