Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....