Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...