Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...