Homeಕರ್ನಾಟಕ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

- Advertisement -
- Advertisement -

ಮಾಂಸಾಹಾರವನ್ನು ‘ಅನಿಷ್ಠ’ ಎಂದು ಬಿಂಬಿಸುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ. ಈ ಸಂಬಂಧ #ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಹ್ಯಾಶ್‌ಟ್ಯಾಗ್‌ ಚಳವಳಿ ಪ್ರಾರಂಭವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರನ್ನು ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಂಸಲೇಖ ಕ್ಷಮೆ ಕೇಳಿದ ನಂತರವು ಸಾಮಾಜಿಕ ಜಾಲತಾಣದಲ್ಲಿ ಅವರ ತೇಜೋವಧೆ ಮುಂದುವರೆದಿತ್ತು. ಇಷ್ಟೇ ಅಲ್ಲದೆ ಮಾಂಸಾಹಾರ ಮತ್ತು ಕುರಿ ರಕ್ತದ ಫ್ರೈ ಜೊತೆಗೆ ಮಾಂಸ ತಿನ್ನುವವರ ಬಗ್ಗೆಯು ಅವಹೇಳನದ ಮಾತುಗಳನ್ನು ಆಡಲಾಗಿತ್ತು. ಮಾಂಸವನ್ನು ‘ಅಸಹ್ಯ’ ಮತ್ತು ‘ಅನಿಷ್ಠ’ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ಮಾಂಸ ತಿನ್ನುವವರನ್ನು ‘ರಾಕ್ಷಸರು’, ‘ಕ್ರೂರಿಗಳು’ ಎಂದು ಹೇಳಿ ಅವಮಾನಿಸಲಾಗಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಮಾಂಸಾಹಾರಿಗಳು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈಗಾಗಲೆ ಹಲವಾರು ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಸ್ಯಾಹಾರದಂತೆಯೆ ಮಾಂಸಾಹಾರ ಕೂಡಾ ಆಹಾರವೇ ಆಗಿದೆ. ಅದನ್ನು ಅನಿಷ್ಠ ಮತ್ತು ಅಸಹ್ಯ ಎಂಬಂತೆ ಬಿಂಬಿಸುವುದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ದೇಶದ 90% ಜನರು ತಿನ್ನುವ ಮಾಂಸಾಹಾರವನ್ನು ಅವಮಾನಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಹಾಕಲಾಗಿದೆ.

ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

#ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಅಭಿಯಾನವು ಮುಂದಿನ ಒಂದು ವಾರ ನಡೆಯಲಿದ್ದು, ತಮ್ಮ ಮಾಂಸದೂಟದ ಜೊತೆಗೆ ಸೆಲ್ಫಿಯನ್ನು ಕ್ಲಿಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸೇರಬಹುದಾಗಿದೆ. ಇಷ್ಟೇ ಅಲ್ಲದೆ ಅಭಿಯಾನದಲ್ಲಿ ಸೇರಬಯಸುವವರು ತಮ್ಮ ಕನಿಷ್ಠ ಐವರು ಸ್ನೇಹಿತರಿಗೆ ಖೋ ಕೊಟ್ಟು ಅವರು ಅಭಿಯಾನಕ್ಕೆ ಸೇರುವಂತೆ ಮಾಡಬೇಕು ಎಂದು ಅಭಿಯಾನದ ಪೋಸ್ಟರ್‌ ಒಂದು ಹೇಳುತ್ತದೆ.

ಈಗಾಗಲೆ ಹಲವಾರು ಜನರು ಈ ಅಭಿಯಾನದಲ್ಲಿ ಸೇರಿದ್ದು ಅವುಗಳ ಕೆಲವು ಝಲಕ್‌ಗಳು ಇಲ್ಲಿವೆ.

ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...