Homeಕರ್ನಾಟಕ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

- Advertisement -
- Advertisement -

ಮಾಂಸಾಹಾರವನ್ನು ‘ಅನಿಷ್ಠ’ ಎಂದು ಬಿಂಬಿಸುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ. ಈ ಸಂಬಂಧ #ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಹ್ಯಾಶ್‌ಟ್ಯಾಗ್‌ ಚಳವಳಿ ಪ್ರಾರಂಭವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರನ್ನು ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಂಸಲೇಖ ಕ್ಷಮೆ ಕೇಳಿದ ನಂತರವು ಸಾಮಾಜಿಕ ಜಾಲತಾಣದಲ್ಲಿ ಅವರ ತೇಜೋವಧೆ ಮುಂದುವರೆದಿತ್ತು. ಇಷ್ಟೇ ಅಲ್ಲದೆ ಮಾಂಸಾಹಾರ ಮತ್ತು ಕುರಿ ರಕ್ತದ ಫ್ರೈ ಜೊತೆಗೆ ಮಾಂಸ ತಿನ್ನುವವರ ಬಗ್ಗೆಯು ಅವಹೇಳನದ ಮಾತುಗಳನ್ನು ಆಡಲಾಗಿತ್ತು. ಮಾಂಸವನ್ನು ‘ಅಸಹ್ಯ’ ಮತ್ತು ‘ಅನಿಷ್ಠ’ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ಮಾಂಸ ತಿನ್ನುವವರನ್ನು ‘ರಾಕ್ಷಸರು’, ‘ಕ್ರೂರಿಗಳು’ ಎಂದು ಹೇಳಿ ಅವಮಾನಿಸಲಾಗಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಮಾಂಸಾಹಾರಿಗಳು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈಗಾಗಲೆ ಹಲವಾರು ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಸ್ಯಾಹಾರದಂತೆಯೆ ಮಾಂಸಾಹಾರ ಕೂಡಾ ಆಹಾರವೇ ಆಗಿದೆ. ಅದನ್ನು ಅನಿಷ್ಠ ಮತ್ತು ಅಸಹ್ಯ ಎಂಬಂತೆ ಬಿಂಬಿಸುವುದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ದೇಶದ 90% ಜನರು ತಿನ್ನುವ ಮಾಂಸಾಹಾರವನ್ನು ಅವಮಾನಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಹಾಕಲಾಗಿದೆ.

ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

#ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಅಭಿಯಾನವು ಮುಂದಿನ ಒಂದು ವಾರ ನಡೆಯಲಿದ್ದು, ತಮ್ಮ ಮಾಂಸದೂಟದ ಜೊತೆಗೆ ಸೆಲ್ಫಿಯನ್ನು ಕ್ಲಿಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸೇರಬಹುದಾಗಿದೆ. ಇಷ್ಟೇ ಅಲ್ಲದೆ ಅಭಿಯಾನದಲ್ಲಿ ಸೇರಬಯಸುವವರು ತಮ್ಮ ಕನಿಷ್ಠ ಐವರು ಸ್ನೇಹಿತರಿಗೆ ಖೋ ಕೊಟ್ಟು ಅವರು ಅಭಿಯಾನಕ್ಕೆ ಸೇರುವಂತೆ ಮಾಡಬೇಕು ಎಂದು ಅಭಿಯಾನದ ಪೋಸ್ಟರ್‌ ಒಂದು ಹೇಳುತ್ತದೆ.

ಈಗಾಗಲೆ ಹಲವಾರು ಜನರು ಈ ಅಭಿಯಾನದಲ್ಲಿ ಸೇರಿದ್ದು ಅವುಗಳ ಕೆಲವು ಝಲಕ್‌ಗಳು ಇಲ್ಲಿವೆ.

ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...