Homeಕರ್ನಾಟಕ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

- Advertisement -
- Advertisement -

ಮಾಂಸಾಹಾರವನ್ನು ‘ಅನಿಷ್ಠ’ ಎಂದು ಬಿಂಬಿಸುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ. ಈ ಸಂಬಂಧ #ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಹ್ಯಾಶ್‌ಟ್ಯಾಗ್‌ ಚಳವಳಿ ಪ್ರಾರಂಭವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರನ್ನು ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಂಸಲೇಖ ಕ್ಷಮೆ ಕೇಳಿದ ನಂತರವು ಸಾಮಾಜಿಕ ಜಾಲತಾಣದಲ್ಲಿ ಅವರ ತೇಜೋವಧೆ ಮುಂದುವರೆದಿತ್ತು. ಇಷ್ಟೇ ಅಲ್ಲದೆ ಮಾಂಸಾಹಾರ ಮತ್ತು ಕುರಿ ರಕ್ತದ ಫ್ರೈ ಜೊತೆಗೆ ಮಾಂಸ ತಿನ್ನುವವರ ಬಗ್ಗೆಯು ಅವಹೇಳನದ ಮಾತುಗಳನ್ನು ಆಡಲಾಗಿತ್ತು. ಮಾಂಸವನ್ನು ‘ಅಸಹ್ಯ’ ಮತ್ತು ‘ಅನಿಷ್ಠ’ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ಮಾಂಸ ತಿನ್ನುವವರನ್ನು ‘ರಾಕ್ಷಸರು’, ‘ಕ್ರೂರಿಗಳು’ ಎಂದು ಹೇಳಿ ಅವಮಾನಿಸಲಾಗಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಮಾಂಸಾಹಾರಿಗಳು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈಗಾಗಲೆ ಹಲವಾರು ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಸ್ಯಾಹಾರದಂತೆಯೆ ಮಾಂಸಾಹಾರ ಕೂಡಾ ಆಹಾರವೇ ಆಗಿದೆ. ಅದನ್ನು ಅನಿಷ್ಠ ಮತ್ತು ಅಸಹ್ಯ ಎಂಬಂತೆ ಬಿಂಬಿಸುವುದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ದೇಶದ 90% ಜನರು ತಿನ್ನುವ ಮಾಂಸಾಹಾರವನ್ನು ಅವಮಾನಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಹಾಕಲಾಗಿದೆ.

ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

#ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಅಭಿಯಾನವು ಮುಂದಿನ ಒಂದು ವಾರ ನಡೆಯಲಿದ್ದು, ತಮ್ಮ ಮಾಂಸದೂಟದ ಜೊತೆಗೆ ಸೆಲ್ಫಿಯನ್ನು ಕ್ಲಿಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸೇರಬಹುದಾಗಿದೆ. ಇಷ್ಟೇ ಅಲ್ಲದೆ ಅಭಿಯಾನದಲ್ಲಿ ಸೇರಬಯಸುವವರು ತಮ್ಮ ಕನಿಷ್ಠ ಐವರು ಸ್ನೇಹಿತರಿಗೆ ಖೋ ಕೊಟ್ಟು ಅವರು ಅಭಿಯಾನಕ್ಕೆ ಸೇರುವಂತೆ ಮಾಡಬೇಕು ಎಂದು ಅಭಿಯಾನದ ಪೋಸ್ಟರ್‌ ಒಂದು ಹೇಳುತ್ತದೆ.

ಈಗಾಗಲೆ ಹಲವಾರು ಜನರು ಈ ಅಭಿಯಾನದಲ್ಲಿ ಸೇರಿದ್ದು ಅವುಗಳ ಕೆಲವು ಝಲಕ್‌ಗಳು ಇಲ್ಲಿವೆ.

ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....