Homeಮುಖಪುಟಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

ಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

- Advertisement -
- Advertisement -

ಬಿಟ್‌ ಕಾಯಿನ್‌ ಥರದ ಕ್ರಿಪ್ಟೋ ಕರೆನ್ಸಿಗಳನ್ನು ಲೀಗಲ್ ಟೆಂಡರ್‌‌ ಮಾಡುತ್ತಾರೆಯೇ ಎಂಬ ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಕ್ರಿಫ್ಟೋ ಕರೆನ್ಸಿಯನ್ನು ವರ್ಚ್ಯೂಯಲ್‌ ಹಣವಾಗಿ ಬಳಸಬೇಕೆ, ವಸ್ತುವಾಗಿ ಪರಿಗಣಿಸಬೇಕೆ ಅಥವಾ ಆಸ್ತಿಯಾಗಿ ಪರಿಗಣಿಸಬೇಕೆ ಎಂಬ ಕುರಿತು ಸರ್ಕಾರ ನಿರ್ಧರಿಸಲು ಮುಂದಾಗಿದೆ.

ಅನಿಯಂತ್ರಿತ ಕ್ರಿಫ್ಟೋ ಕರೆನ್ಸಿ ಮನಿ ಲ್ಯಾಂಡರಿಂಗ್‌ ಹಾಗೂ ಭಯೋತ್ಪಾದನೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳುತ್ತಿರುವ ಸರ್ಕಾರವು, ಕ್ರಿಫ್ಟೋ ಕರೆನ್ಸಿ ಸಂಬಂಧ ಒಂದು ನಿಲುವನ್ನು ತಾಳಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಚರ್ಚೆಗಳು ನಡೆದಿವೆ.

ವಹಿವಾಟುಗಳಿಗೆ ಅಥವಾ ಪಾವತಿಗಳನ್ನು ಮಾಡಲು ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ಕೇಂದ್ರ ಸರ್ಕಾರ ನಿರ್ಬಂಧಿಸಬಹುದು. ಆದರೆ ಅವುಗಳನ್ನು ಚಿನ್ನ, ಷೇರುಗಳು ಅಥವಾ ಬಾಂಡ್‌ಗಳಂತಹ ಸ್ವತ್ತುಗಳಾಗಿ ಇರಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಎಕನಾಮಿಕ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಹೊಸ ಹೂಡಿಕೆದಾರರನ್ನು ಆಕರ್ಷಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಎಕ್ಸ್‌ಚೆಂಜ್‌ಗಳು ಮತ್ತು ಫ್ಲಾಟ್‌ಫಾರ್ಮ್‌‌ಗಳನ್ನ ಒಳಗೊಂಡಂತೆ ಕ್ರಿಪ್ಟೋ ಕಂಪನಿಗಳನ್ನು ನಿಯಂತ್ರಿಸಲು ಸರ್ಕಾರವು ಉತ್ಸುಕವಾಗಿದ್ದು, ಈಗ ಕೈಗೊಂಡಿರುವ  ನಿರ್ಧಾರವು ಸಂಪೂರ್ಣ ನಿಷೇಧವನ್ನು ತಪ್ಪಿಸುತ್ತದೆ ಎಂದು ಮೂಲಗಳು ಹೇಳಿವೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI)ವನ್ನು ನಿಯಂತ್ರಕ ಸಂಸ್ಥೆ ಎಂದು ಗೊತ್ತುಪಡಿಸಬಹುದು. ಆದರೂ ಅದನ್ನು ಅಂತಿಮಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರೆನ್ಸಿಗಿಂತ ಹೆಚ್ಚಾಗಿ ಸ್ವತ್ತು ಎಂದು ವರ್ಗೀಕರಿಸಲು, ಸ್ವೀಕಾರವನ್ನು ಪಡೆಯಲು ಮತ್ತು ನಿಷೇಧವನ್ನು ತಪ್ಪಿಸಲು ಹಲವಾರು ಪ್ರಯತ್ನಗಳನ್ನು ಕ್ರಿಪ್ಟೋ ಸಮುದಾಯ ಮಾಡಿದೆ.

ಭಾರತ ಮತ್ತು ಕ್ರಿಪ್ಟೋ: ಕಳೆದ ಕೆಲವು ವರ್ಷಗಳಲ್ಲಿ ಭಾರತವು ಡಿಜಿಟಲ್ ಕರೆನ್ಸಿಗಳೊಂದಿಗೆ ಸಂಬಂಧವನ್ನು ಹೊಂದಿದೆ. 2018ರಲ್ಲಿ ಕ್ರಿಪ್ಟೋ ವಹಿವಾಟುಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಮಾರ್ಚ್ 2020ರಲ್ಲಿ ನಿರ್ಬಂಧವನ್ನು ರದ್ದುಗೊಳಿಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಇದುವರೆಗೆ ಕ್ರಿಪ್ಟೋ ಕರೆನ್ಸಿಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಆರ್ಥಿಕ ಸ್ಥಿರತೆ ಮತ್ತು ಬಂಡವಾಳ ನಿಯಂತ್ರಣಗಳ ಸಂಭವನೀಯ ಅಪಾಯಗಳ ಬಗ್ಗೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಕ್ರಿಪ್ಟೋಕರೆನ್ಸಿಗಳ ವಿಷಯದ ಬಗ್ಗೆ ಭಾರತಕ್ಕೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಪುಟದ ಅನುಮೋದನೆಗಾಗಿ ಸರ್ಕಾರವು ಕ್ರಿಪ್ಟೋ ಮಸೂದೆಯನ್ನು ತರಬಹುದು. ನವೆಂಬರ್ 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಬಹುದು ಎಂದು ವರದಿ ಹೇಳಿದೆ.

‘ಕ್ರಿಪ್ಟೋಕರೆನ್ಸಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಹೇರಿ’: ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೂಪದಲ್ಲಾದರೂ ಅವಕಾಶ ನೀಡಿದರೆ, ಅದು ಸಂಪತ್ತು ಬಂಡವಾಳಶಾಹಿಗಳಲ್ಲಿ ಶೇಖರವಾಗಬಹುದು ಎಂಬ ಆತಂಕಗಳು ವ್ಯಕ್ತವಾಗಿವೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...