Homeಮುಖಪುಟಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

ಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

- Advertisement -
- Advertisement -

ಬಿಟ್‌ ಕಾಯಿನ್‌ ಥರದ ಕ್ರಿಪ್ಟೋ ಕರೆನ್ಸಿಗಳನ್ನು ಲೀಗಲ್ ಟೆಂಡರ್‌‌ ಮಾಡುತ್ತಾರೆಯೇ ಎಂಬ ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಕ್ರಿಫ್ಟೋ ಕರೆನ್ಸಿಯನ್ನು ವರ್ಚ್ಯೂಯಲ್‌ ಹಣವಾಗಿ ಬಳಸಬೇಕೆ, ವಸ್ತುವಾಗಿ ಪರಿಗಣಿಸಬೇಕೆ ಅಥವಾ ಆಸ್ತಿಯಾಗಿ ಪರಿಗಣಿಸಬೇಕೆ ಎಂಬ ಕುರಿತು ಸರ್ಕಾರ ನಿರ್ಧರಿಸಲು ಮುಂದಾಗಿದೆ.

ಅನಿಯಂತ್ರಿತ ಕ್ರಿಫ್ಟೋ ಕರೆನ್ಸಿ ಮನಿ ಲ್ಯಾಂಡರಿಂಗ್‌ ಹಾಗೂ ಭಯೋತ್ಪಾದನೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳುತ್ತಿರುವ ಸರ್ಕಾರವು, ಕ್ರಿಫ್ಟೋ ಕರೆನ್ಸಿ ಸಂಬಂಧ ಒಂದು ನಿಲುವನ್ನು ತಾಳಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಚರ್ಚೆಗಳು ನಡೆದಿವೆ.

ವಹಿವಾಟುಗಳಿಗೆ ಅಥವಾ ಪಾವತಿಗಳನ್ನು ಮಾಡಲು ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ಕೇಂದ್ರ ಸರ್ಕಾರ ನಿರ್ಬಂಧಿಸಬಹುದು. ಆದರೆ ಅವುಗಳನ್ನು ಚಿನ್ನ, ಷೇರುಗಳು ಅಥವಾ ಬಾಂಡ್‌ಗಳಂತಹ ಸ್ವತ್ತುಗಳಾಗಿ ಇರಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಎಕನಾಮಿಕ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಹೊಸ ಹೂಡಿಕೆದಾರರನ್ನು ಆಕರ್ಷಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಎಕ್ಸ್‌ಚೆಂಜ್‌ಗಳು ಮತ್ತು ಫ್ಲಾಟ್‌ಫಾರ್ಮ್‌‌ಗಳನ್ನ ಒಳಗೊಂಡಂತೆ ಕ್ರಿಪ್ಟೋ ಕಂಪನಿಗಳನ್ನು ನಿಯಂತ್ರಿಸಲು ಸರ್ಕಾರವು ಉತ್ಸುಕವಾಗಿದ್ದು, ಈಗ ಕೈಗೊಂಡಿರುವ  ನಿರ್ಧಾರವು ಸಂಪೂರ್ಣ ನಿಷೇಧವನ್ನು ತಪ್ಪಿಸುತ್ತದೆ ಎಂದು ಮೂಲಗಳು ಹೇಳಿವೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI)ವನ್ನು ನಿಯಂತ್ರಕ ಸಂಸ್ಥೆ ಎಂದು ಗೊತ್ತುಪಡಿಸಬಹುದು. ಆದರೂ ಅದನ್ನು ಅಂತಿಮಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರೆನ್ಸಿಗಿಂತ ಹೆಚ್ಚಾಗಿ ಸ್ವತ್ತು ಎಂದು ವರ್ಗೀಕರಿಸಲು, ಸ್ವೀಕಾರವನ್ನು ಪಡೆಯಲು ಮತ್ತು ನಿಷೇಧವನ್ನು ತಪ್ಪಿಸಲು ಹಲವಾರು ಪ್ರಯತ್ನಗಳನ್ನು ಕ್ರಿಪ್ಟೋ ಸಮುದಾಯ ಮಾಡಿದೆ.

ಭಾರತ ಮತ್ತು ಕ್ರಿಪ್ಟೋ: ಕಳೆದ ಕೆಲವು ವರ್ಷಗಳಲ್ಲಿ ಭಾರತವು ಡಿಜಿಟಲ್ ಕರೆನ್ಸಿಗಳೊಂದಿಗೆ ಸಂಬಂಧವನ್ನು ಹೊಂದಿದೆ. 2018ರಲ್ಲಿ ಕ್ರಿಪ್ಟೋ ವಹಿವಾಟುಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಮಾರ್ಚ್ 2020ರಲ್ಲಿ ನಿರ್ಬಂಧವನ್ನು ರದ್ದುಗೊಳಿಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಇದುವರೆಗೆ ಕ್ರಿಪ್ಟೋ ಕರೆನ್ಸಿಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಆರ್ಥಿಕ ಸ್ಥಿರತೆ ಮತ್ತು ಬಂಡವಾಳ ನಿಯಂತ್ರಣಗಳ ಸಂಭವನೀಯ ಅಪಾಯಗಳ ಬಗ್ಗೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಕ್ರಿಪ್ಟೋಕರೆನ್ಸಿಗಳ ವಿಷಯದ ಬಗ್ಗೆ ಭಾರತಕ್ಕೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಪುಟದ ಅನುಮೋದನೆಗಾಗಿ ಸರ್ಕಾರವು ಕ್ರಿಪ್ಟೋ ಮಸೂದೆಯನ್ನು ತರಬಹುದು. ನವೆಂಬರ್ 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಬಹುದು ಎಂದು ವರದಿ ಹೇಳಿದೆ.

‘ಕ್ರಿಪ್ಟೋಕರೆನ್ಸಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಹೇರಿ’: ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೂಪದಲ್ಲಾದರೂ ಅವಕಾಶ ನೀಡಿದರೆ, ಅದು ಸಂಪತ್ತು ಬಂಡವಾಳಶಾಹಿಗಳಲ್ಲಿ ಶೇಖರವಾಗಬಹುದು ಎಂಬ ಆತಂಕಗಳು ವ್ಯಕ್ತವಾಗಿವೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...