Homeಕರ್ನಾಟಕರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

- Advertisement -
- Advertisement -

ರಾಜ್ಯಕ್ಕೆ ಹವಾಮಾನ ಬದಲಾವಣೆಯ ಹೊಂದಾಣಿಕೆ ಮತ್ತು ವೈಪರೀತ್ಯ ತಡೆಯುವ ಕಾರ್ಯಗಳಿಗಾಗಿ 2025 ರ ವೇಳೆಗೆ 20,88,041.23 ಕೋಟಿ ರೂಪಾಯಿ ಬೇಕಾಗುತ್ತದೆ. 2030 ರ ವೇಳೆಗೆ 52,82,744.32 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಣವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಬೇಕಾಗುತ್ತದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಅಂದಾಜಿಸಿದೆ.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ 2015ರ ವರದಿಯ ಎರಡನೇ ಆವೃತ್ತಿಯಾದ ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ-2 ರಲ್ಲಿ ಈ ವೆಚ್ಚದ ಅಂದಾಜು ರಚಿಸಲಾಗಿದೆ. ವರದಿಯ ಅನುಮೋದನೆ ಮತ್ತು ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ.

ಇದನ್ನು ತಯಾರಿಸಲು 15 ಹವಾಮಾನ ಮಾದರಿಗಳನ್ನು ಬಳಸಲಾಗಿದೆ. 2015ರ ವರದಿಯಲ್ಲಿ ಮಾಡಿದ ಶಿಫಾರಸುಗಳ ಮೇಲೆ ಮಾಡಲಾಗಿರುವ ಸಾಧನೆಗಳು ಮತ್ತು ಕಾರ್ಯಗಳನ್ನು ಮೌಲ್ಯಮಾಪನವನ್ನು ಪರಿಸರ ಮತ್ತು ಶಿಕ್ಷಣ ಕೇಂದ್ರವು ನಡೆಸುತ್ತಿದೆ ಎಂದು EMPRI ಮಹಾನಿರ್ದೇಶಕ ಜಗಮೋಹನ್ ಶರ್ಮಾ ಮಂಗಳವಾರ ಹೇಳಿದ್ದಾರೆ.

ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಬೆಂಗಳೂರು ಹವಾಮಾನ ಬದಲಾವಣೆ ಉಪಕ್ರಮ-ಕರ್ನಾಟಕ ಆಯೋಜಿಸಿದ್ದ “COP-26 ಗ್ಲಾಸ್ಗೋ, ಹವಾಮಾನ ಬದಲಾವಣೆ ಶಿಫಾರಸುಗಳು ಮತ್ತು ಕರ್ನಾಟಕದ ಮೇಲೆ ಪರಿಣಾಮ” ಕುರಿತ ಚರ್ಚೆಯಲ್ಲಿ ಮಾತನಾಡಿದ ಶರ್ಮಾ ಅವರು, ಬೇಸಿಗೆ ಮತ್ತು ಚಳಿಗಾಲದ ತಾಪಮಾನವು 0.5 ರಿಂದ 2.5 ಡಿಗ್ರಿ ಸೆಲ್ಸಿಯಸ್‌ಗೆ ಬದಲಾಗುತ್ತದೆ ಮತ್ತು ಮಳೆಯ ದಿನಗಳು ಹೆಚ್ಚಾಗುತ್ತದೆ. ಇದು ರಬಿ ಮತ್ತು ಖಾರಿಫ್ ಬೆಳೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಅಂದಾಜಿಸಿದೆ ಎಂದು ಹೇಳಿದ್ದಾರೆ.

“ಹವಾಮಾನ ಬದಲಾವಣೆಯನ್ನು ಪರಿಹರಿಸುವ ಯೋಜನೆಗಳಿಗೆ ಹಣವನ್ನು ನೀಡಲಾಗುವುದು ಎಂದು ವಿಶ್ವಬ್ಯಾಂಕ್ ಹೇಳಿದೆ. ಹೀಗಾಗಿ, ಕರ್ನಾಟಕ ಮತ್ತು ಭಾರತ ಅಂತಹ ಯೋಜನೆಗಳನ್ನು ಸಿದ್ಧಪಡಿಸಲು ಪ್ರಾರಂಭಿಸಬೇಕು. ಆಗ ಮಾತ್ರ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಪರಿಸರ ಪ್ರಭಾವವನ್ನು ಪರಿಹರಿಸಲು ಹಣ ಬರುತ್ತದೆ” ಎಂದು ವಿಶ್ವಸಂಸ್ಥೆ ಸಮಿತಿಯ ಸದಸ್ಯ ಡಾ.ಎಚ್.ಎನ್.ರವೀಂದ್ರನಾಥ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕಾರ್ಯಗತಗೊಳಿಸುವ ಸಣ್ಣ ಯೋಜನೆಗಳು ಪ್ರಮುಖವಾಗಿ ಪರಿಸರ ಮತ್ತು ಪರಿಸರ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುತ್ತವೆ. ಸೌರಶಕ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಶೇ.80ರಷ್ಟು ಸೌರ ಫಲಕಗಳು ಚೀನಾದಲ್ಲಿ ತಯಾರಾಗಿರುವುದು ಅನೇಕರಿಗೆ ತಿಳಿದಿಲ್ಲ. ಒಮ್ಮೆ ಅವುಗಳನ್ನು ಭಾರತದಲ್ಲಿ ತಯಾರಿಸಿದರೆ, ಡೈನಾಮಿಕ್ಸ್ ಬದಲಾಗುತ್ತದೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

ಹವಾಮಾನ ಬದಲಾವಣೆ ಸಮ್ಮೇಳನ (COP-26) ದಲ್ಲಿ ಭಾರತವು ದ್ವೀಪ ರಾಷ್ಟ್ರಗಳಿಗೆ ಸಹಾಯ ಮಾಡಲು ಬದ್ಧವಾಗಿದೆ. ಆದರೆ, ಕರ್ನಾಟಕದಲ್ಲಿ 94 ದ್ವೀಪಗಳು ಮತ್ತು ಕರಾವಳಿ ಪ್ರದೇಶಗಳು ಈಗಾಗಲೇ ಮಣ್ಣಿನ ಸವೆತಕ್ಕೆ ಸಾಕ್ಷಿಯಾಗುತ್ತಿವೆ, ಅದರ ಬಗ್ಗೆ ಚರ್ಚಿಸಲಾಗಿಲ್ಲ ಎಂಬುದನ್ನು ಗುರುತಿಸಿದ್ದಾರೆ.


ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...