Homeಕರ್ನಾಟಕರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

- Advertisement -
- Advertisement -

ರಾಜ್ಯಕ್ಕೆ ಹವಾಮಾನ ಬದಲಾವಣೆಯ ಹೊಂದಾಣಿಕೆ ಮತ್ತು ವೈಪರೀತ್ಯ ತಡೆಯುವ ಕಾರ್ಯಗಳಿಗಾಗಿ 2025 ರ ವೇಳೆಗೆ 20,88,041.23 ಕೋಟಿ ರೂಪಾಯಿ ಬೇಕಾಗುತ್ತದೆ. 2030 ರ ವೇಳೆಗೆ 52,82,744.32 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಣವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಬೇಕಾಗುತ್ತದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಅಂದಾಜಿಸಿದೆ.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ 2015ರ ವರದಿಯ ಎರಡನೇ ಆವೃತ್ತಿಯಾದ ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ-2 ರಲ್ಲಿ ಈ ವೆಚ್ಚದ ಅಂದಾಜು ರಚಿಸಲಾಗಿದೆ. ವರದಿಯ ಅನುಮೋದನೆ ಮತ್ತು ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ.

ಇದನ್ನು ತಯಾರಿಸಲು 15 ಹವಾಮಾನ ಮಾದರಿಗಳನ್ನು ಬಳಸಲಾಗಿದೆ. 2015ರ ವರದಿಯಲ್ಲಿ ಮಾಡಿದ ಶಿಫಾರಸುಗಳ ಮೇಲೆ ಮಾಡಲಾಗಿರುವ ಸಾಧನೆಗಳು ಮತ್ತು ಕಾರ್ಯಗಳನ್ನು ಮೌಲ್ಯಮಾಪನವನ್ನು ಪರಿಸರ ಮತ್ತು ಶಿಕ್ಷಣ ಕೇಂದ್ರವು ನಡೆಸುತ್ತಿದೆ ಎಂದು EMPRI ಮಹಾನಿರ್ದೇಶಕ ಜಗಮೋಹನ್ ಶರ್ಮಾ ಮಂಗಳವಾರ ಹೇಳಿದ್ದಾರೆ.

ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಬೆಂಗಳೂರು ಹವಾಮಾನ ಬದಲಾವಣೆ ಉಪಕ್ರಮ-ಕರ್ನಾಟಕ ಆಯೋಜಿಸಿದ್ದ “COP-26 ಗ್ಲಾಸ್ಗೋ, ಹವಾಮಾನ ಬದಲಾವಣೆ ಶಿಫಾರಸುಗಳು ಮತ್ತು ಕರ್ನಾಟಕದ ಮೇಲೆ ಪರಿಣಾಮ” ಕುರಿತ ಚರ್ಚೆಯಲ್ಲಿ ಮಾತನಾಡಿದ ಶರ್ಮಾ ಅವರು, ಬೇಸಿಗೆ ಮತ್ತು ಚಳಿಗಾಲದ ತಾಪಮಾನವು 0.5 ರಿಂದ 2.5 ಡಿಗ್ರಿ ಸೆಲ್ಸಿಯಸ್‌ಗೆ ಬದಲಾಗುತ್ತದೆ ಮತ್ತು ಮಳೆಯ ದಿನಗಳು ಹೆಚ್ಚಾಗುತ್ತದೆ. ಇದು ರಬಿ ಮತ್ತು ಖಾರಿಫ್ ಬೆಳೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಅಂದಾಜಿಸಿದೆ ಎಂದು ಹೇಳಿದ್ದಾರೆ.

“ಹವಾಮಾನ ಬದಲಾವಣೆಯನ್ನು ಪರಿಹರಿಸುವ ಯೋಜನೆಗಳಿಗೆ ಹಣವನ್ನು ನೀಡಲಾಗುವುದು ಎಂದು ವಿಶ್ವಬ್ಯಾಂಕ್ ಹೇಳಿದೆ. ಹೀಗಾಗಿ, ಕರ್ನಾಟಕ ಮತ್ತು ಭಾರತ ಅಂತಹ ಯೋಜನೆಗಳನ್ನು ಸಿದ್ಧಪಡಿಸಲು ಪ್ರಾರಂಭಿಸಬೇಕು. ಆಗ ಮಾತ್ರ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಪರಿಸರ ಪ್ರಭಾವವನ್ನು ಪರಿಹರಿಸಲು ಹಣ ಬರುತ್ತದೆ” ಎಂದು ವಿಶ್ವಸಂಸ್ಥೆ ಸಮಿತಿಯ ಸದಸ್ಯ ಡಾ.ಎಚ್.ಎನ್.ರವೀಂದ್ರನಾಥ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕಾರ್ಯಗತಗೊಳಿಸುವ ಸಣ್ಣ ಯೋಜನೆಗಳು ಪ್ರಮುಖವಾಗಿ ಪರಿಸರ ಮತ್ತು ಪರಿಸರ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುತ್ತವೆ. ಸೌರಶಕ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಶೇ.80ರಷ್ಟು ಸೌರ ಫಲಕಗಳು ಚೀನಾದಲ್ಲಿ ತಯಾರಾಗಿರುವುದು ಅನೇಕರಿಗೆ ತಿಳಿದಿಲ್ಲ. ಒಮ್ಮೆ ಅವುಗಳನ್ನು ಭಾರತದಲ್ಲಿ ತಯಾರಿಸಿದರೆ, ಡೈನಾಮಿಕ್ಸ್ ಬದಲಾಗುತ್ತದೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

ಹವಾಮಾನ ಬದಲಾವಣೆ ಸಮ್ಮೇಳನ (COP-26) ದಲ್ಲಿ ಭಾರತವು ದ್ವೀಪ ರಾಷ್ಟ್ರಗಳಿಗೆ ಸಹಾಯ ಮಾಡಲು ಬದ್ಧವಾಗಿದೆ. ಆದರೆ, ಕರ್ನಾಟಕದಲ್ಲಿ 94 ದ್ವೀಪಗಳು ಮತ್ತು ಕರಾವಳಿ ಪ್ರದೇಶಗಳು ಈಗಾಗಲೇ ಮಣ್ಣಿನ ಸವೆತಕ್ಕೆ ಸಾಕ್ಷಿಯಾಗುತ್ತಿವೆ, ಅದರ ಬಗ್ಗೆ ಚರ್ಚಿಸಲಾಗಿಲ್ಲ ಎಂಬುದನ್ನು ಗುರುತಿಸಿದ್ದಾರೆ.


ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...