Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....