Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...