Homeಮುಖಪುಟಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಅಕ್ಷಯ್ ಯಾದವ್ ಎಂಬುವವರು ತಮ್ಮ ಅಂಗಡಿ ಸ್ಥಳದಲ್ಲಿ ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ 8 ರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿದೆ. ತದನಂತರ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ.

ಗುರುಗ್ರಾಮ್ ಸಬ್ಜಿ ಮಂಡಿಯಲ್ಲಿರುವ ಶ್ರೀ ಗುರು ಸಿಂಗ್ ಸಭಾದ ಅಧ್ಯಕ್ಷರಾದ ಶೆರ್ದಿಲ್ ಸಿಂಗ್ ಸಿಧು ಮಾತನಾಡಿ, “ಗುರುದ್ವಾರವೆಂದರೆ ಗುರುವಿನ ಮನೆ ಎಂದರ್ಥ. ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಲು ಆಹ್ವಾನವಿದೆ. ಮುಸ್ಲಿಮರಿಗೆ ನಿಗಧಿಪಡಿಸಿದ ಪ್ರದೇಶಗಳಲ್ಲಿ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತಿದ್ದಲ್ಲಿ ಅವರು ಗುರುದ್ವಾರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಬಹುದು. ಎಲ್ಲರಿಗೂ ಗುರುದ್ವಾರದ ಬಾಗಿಲು ಸದಾ ತೆರೆದಿರುತ್ತವೆ” ಎಂದು ತಿಳಿಸಿದ್ದಾರೆ.

ಸೆಕ್ಟರ್ 39ರ ಸರ್ದಾರ್ ಬಜಾರ್‌ನಿಂದ ಆರಂಭವಾಗಿ ಸೆಕ್ಟರ್ 46ರ ಮಾಡೆಲ್ ಟೌನ್‌ವರೆಗೂ 5 ಗುರುದ್ವಾರಗಳಿವೆ. ಈ ಗುರುದ್ವಾರಗಳು 2000 ಜನರನ್ನು ಒಳಗೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಕೋವಿಡ್ ಕಾರಣದಿಂದ ಸಣ್ಣ ಸಣ್ಣ ಗುಂಪುಗಳಲ್ಲಿ ಜನರು ಬಂದು ದೈಹಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದು. ಅದಕ್ಕೆ ಅಧಿಕಾರಗಳ ಅನುಮತಿ ಬೇಕಾದರೆ ಅದನ್ನು ಕೂಡ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸುವ ಆಹ್ವಾನವನ್ನು ಜಮಾತ್ ಉಲಾಮದ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಸಲೀಂ ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬುಧವಾರ ಗುರುದ್ವಾರದ ಅಧಿಕಾರಗಳನ್ನು ಭೇಟಿಯಾದ ಅವರು ಪ್ರಾರ್ಥನೆ ಮಾಡುವುದಾಗಿ ತಿಳಿಸಿ ಅವಕಾಶಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದ್ದು, ದೀರ್ಘಕಾಲೀನವಾಗಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಆಹ್ವಾನಗಳನ್ನು ಗುರುಗ್ರಾಮ್ ಮುಸ್ಲಿಂ ಕೌನ್ಸಿಲ್‌ನ ಸ್ಥಾಪಕರಾದ ಅಲ್ತಾಫ್ ಅಹ್ಮದ್ ಪ್ರಶಂಸಿದ್ದಾರೆ. “ಕಳೆದ ಎರಡು ತಿಂಗಳಿನಿಂದ ಗುರ್ಗಾಂವ್‌ನಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಬಹು ಧರ್ಮಗಳ ಜನರು ಮುಂದೆ ಬಂದಿರುವುದು ಸಹೋದರತ್ವದ ನಿಜವಾದ ಉದಾಹರಣೆಯಾಗಿದೆ” ಎಂದಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...