Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು.

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕಗಳ ಪ್ರಕಟಣೆ, ಪ್ರಸಾರ ಮತ್ತು ಮಾರಾಟವನ್ನು ತಡೆಯಿಡಿಯಲು ಸಾಧ್ಯವಿಲ್ಲ ಎಂದಿರುವ ದೆಹಲಿ ಕೋರ್ಟ್ ಈ ಕುರಿತು ಹಿಂದುತ್ವವಾದಿ ನಾಯಕನೊಬ್ಬ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.

ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತ ಎಂಬುವವರು ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಲ್ಮಾನ್ ಖುರ್ಷಿದ್ ಅವರ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಪುಸ್ತಕ ಪ್ರಕಟಣೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪುಸ್ತಕ ಬಿಡುಗಡೆ ಮಾಡಿರುವುದು ರಾಜ್ಯದ ಅಲ್ಪಸಂಖ್ಯಾತರ ಮತಗಳನ್ನು ಧ್ರುವೀಕರಣಗೊಳಿಸುವ ಮತ್ತು ಗಳಿಸುವ ಗುರಿಯನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರೀತಿ ಪರೇವಾರವರು, “ಅರ್ಜಿದಾರರ ವಾದದಂತೆ ಪ್ರಾಥಮಿಕ ಸಾಕ್ಷಿಯಾಗಲಿ ಇತರ ಸಾಕ್ಷಿಗಳು ಪೂರಕವಾಗಿಲ್ಲ. ಹಾಗಾಗಿ ಪುಸ್ತಕಕ್ಕೆ ತಡೆಯಾಜ್ಞೆ ಸಾಧ್ಯವಿಲ್ಲ. ಅದು ಪ್ರಕಾಶಕರಿಗೆ ಹಣಕಾಸಿನ ತೊಂದರೆಗೆ ಕಾರಣವಾಗುತ್ತದೆ ಮತ್ತು ಲೇಖಕರ ಭಾಷಣ ಮತ್ತು ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿಯೇ ಹಲವು ಹಿಂದುತ್ವವಾದಿಗಳು ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿನ ಮನೆಗೆ ಬೆಂಕಿ ಹಚ್ಚಿದ್ದರು.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಅರ್ಜಿ ಕುರಿತು ನ್ಯಾಯಾಧೀಶರು “ಅರ್ಜಿದಾರರು ಯಾವಾಗಲೂ ಪುಸ್ತಕದ ವಿರುದ್ಧ ಪ್ರಚಾರ ಮಾಡಬಹುದು ಮತ್ತು ಅವರ ಭಾವನೆಗಳಗೆ ಘಾಸಿಗೊಳಿಸಿರುವ ಆಪಾದಿತ ಪ್ಯಾರಾಗಳಿಗೆ ಖಂಡನೆಯನ್ನು ಸಹ ಪ್ರಕಟಿಸಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...