Homeಮುಖಪುಟ‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು...

‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ

- Advertisement -
- Advertisement -

ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಆರೋಪಿಗಳನ್ನು ಶಿಕ್ಷಿಸಲು, ‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿರಬೇಕು’ ಎಂಬ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ಪೋಕ್ಸೊ ಕಾಯಿದೆಯಡಿ ಲೈಂಗಿಕ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಮುಖ್ಯ ಅಂಶ, ‘ಲೈಂಗಿಕ ಉದ್ದೇಶವೇ ಹೊರತು ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿದೆಯೆ ಎಂಬುವುದಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕವಿಲ್ಲದೆ” ಮುಟ್ಟುವುದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್‌, 12 ವರ್ಷದ ಮಗುವನ್ನು ‘ತಡವಿ’ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎನ್ನಲಾಗಿದ್ದ ಆರೋಪಿಯ ಮೇಲಿನ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದದಿಂದ ಖುಲಾಸೆಗೊಳಿಸಿತ್ತು.

ಇದನ್ನೂ ಓದಿ: ಮಕ್ಕಳ ಮೇಲಿನ ಲೈಂಗಿಕ ಹಿಂಸಾಚಾರ; ಮುಂಬೈ ಹೈಕೋರ್ಟ್ ತೀರ್ಪಿನ ‘ಡಬಲ್ ಧಮಾಕಾ’!!

ನಾಲ್ಕು ವಾರಗಳಲ್ಲಿ ಶರಣಾಗುವಂತೆ ಮತ್ತು ವಿಶೇಷ ಪೋಕ್ಸೊ ನ್ಯಾಯಾಲಯವು ನೀಡಿದ ಮೂರು ವರ್ಷ ಮತ್ತು ಐದು ವರ್ಷಗಳ ಸಜೆಯನ್ನು ಅನುಭವಿಸುವಂತೆ ಆರೋಪಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಜನವರಿಯಲ್ಲಿ, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ನಾಲ್ಕು ವರ್ಷಗಳ ಹಿಂದೆ 12 ವರ್ಷದ ಬಾಲಕಿಯನ್ನು ತಡವಿದ್ದಕ್ಕಾಗಿ ಪೋಕ್ಸೊ ಕಾಯ್ದೆಯಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ ವ್ಯಕ್ತಿಯ ಶಿಕ್ಷೆಯನ್ನು ರದ್ದುಗೊಳಿಸಿತ್ತು.

ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕವಿಲ್ಲದೆ ಅಪ್ರಾಪ್ತ ವಯಸ್ಕ ಮಗುವಿನ ಎದೆ ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಬಾಂಬೆ ಹೈಕೋರ್ಟ್‌ ಜನವರಿ 19 ರಂದು ವಿವಾದಾತ್ಮಕ ತೀರ್ಪು ನೀಡಿತ್ತು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಆದೇಶವನ್ನು ತಡೆಹಿಡಿದಿತ್ತು. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...