HomeUncategorizedಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಾವು ತನ್ನ ಎರಡನೇ ಗ್ರಾಮವನ್ನು ನಿರ್ಮಿಸಿರುವುದು ಹೊಸ ಉಪಗ್ರಹ ಚಿತ್ರಗಳ ಮೂಲಕ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಗ್ರಾಮದಲ್ಲಿ ಕನಿಷ್ಠ 60 ಕಟ್ಟಡಗಳನ್ನು ಚೀನಾ ನಿರ್ಮಿಸಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2019 ರಲ್ಲಿ ತೆಗೆಯಲಾದ ಉಪಗ್ರಹ ಚಿತ್ರಗಳಲ್ಲಿ ಈ ಹೊಸ ಗ್ರಾಮ ಇರಲಿಲ್ಲ. ಆದರೆ ಒಂದು ವರ್ಷದ ನಂತರ ತೆಗೆಯಲಾದ ಉಪಗ್ರಹದ ಚಿತ್ರದಲ್ಲಿ ಇದನ್ನು ಕಾಣಬಹುದಾಗಿದೆ. ಈ ಹೊಸ ಗ್ರಾಮವು ಚೀನಾ ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಿದ್ದ ಗ್ರಾಮಕ್ಕಿಂತ 93 ಕಿಮೀ ದೂರದಲ್ಲಿದೆ. ಚೀನಾ ಭಾರತದ ಭೂಭಾಗದೊಳಗೆ ಒಂದು ದೊಡ್ಡ ಗ್ರಾಮವನ್ನೇ ನಿರ್ಮಿಸಿದೆ ಎಂದು ಕಳೆದ ಜನವರಿಯಲ್ಲಿ ವರದಿಯಾಗಿತ್ತು. ಈ ವರದಿಯನ್ನು ಕೆಲವು ದಿನಗಳ ಹಿಂದೆ ಅಮೆರಿಕಾ ಭದ್ರತಾ ಆಯೋಗ ಕೂಡಾ ದೃಢಪಡಿಸಿತ್ತು.

ಚೀನಾ ನಿರ್ಮಿಸಿರುವ ಎರಡನೇ ಗ್ರಾಮವು ಭಾರತದೊಳಗೆ ‘ವಾಸ್ತವ ನಿಂಯಂತ್ರಣ ರೇಖೆ’ (LAC) ಮತ್ತು ಅಂತರಾಷ್ಟ್ರೀಯ ಗಡಿರೇಖೆಯ ನಡುವಿನ ಪ್ರದೇಶದ ಸುಮಾರು 6 ಕಿಲೋಮೀಟರ್ ದೂರದಲ್ಲಿದೆ. ಈ ಪ್ರದೇಶವನ್ನು ಭಾರತವು ಹಿಂದಿನಿಂದಲೂ ತನ್ನ ಸ್ವಂತ ಪ್ರದೇಶವೆಂದು ಹೇಳಿಕೊಂಡಿದೆ. ಈ ಚಿತ್ರಗಳು ಯಾವ ಪ್ರದೇಶದಲ್ಲಿವೆ ಎಂದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಪ್ರಸ್ತುತ ಸ್ಥಳವು ಚೀನಾದ ಭೂಪ್ರದೇಶದ ವಾಸ್ತವ ನಿಯಂತ್ರಣ ರೇಖೆಯ ಉತ್ತರದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಸೇನೆಯ ಈ ಹೇಳಿಕೆಯು ಭಾರತೀಯ ಭೂಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸುವ ಬಗ್ಗೆ ನಿರಾಕರಿಸುತ್ತಿಲ್ಲ ಎಂದು ಎನ್‌ಡಿಟಿವಿ ಹೇಳಿದ್ದು, ಗ್ರಾಮವು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶದೊಳಗೆ ಇದೆ ಎಂದು ವರದಿ ತಿಳಿಸಿದೆ.

ಚೀನಾ ನಿರ್ಮಿಸಿರುವ ಹೊಸ ಗ್ರಾಮವು, ವಿಶ್ವದ ಎರಡು ಪ್ರಮುಖ ಉಪಗ್ರಹ ಚಿತ್ರಣ ಪೂರೈಕೆದಾರರಾದ ಮ್ಯಾಕ್ಸರ್ ಟೆಕ್ನಾಲಜೀಸ್ ಮತ್ತು ಪ್ಲಾನೆಟ್ ಲ್ಯಾಬ್‌ಗಳ ಚಿತ್ರಗಳ ಮೂಲಕ ದೃಢೀಕರಿಸಲಾಗಿದೆ. ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯ ಈ ಚಿತ್ರಗಳು ಕೇವಲ ಡಜನ್‌ಗಟ್ಟಲೆ ಕಟ್ಟಡಗಳನ್ನು ಮಾತ್ರ ತೋರಿಸುವುದಲ್ಲದೆ, ಛಾವಣಿಯ ಮೇಲ್ಭಾಗದಲ್ಲಿ ಚಿತ್ರಿಸಲಾಗಿರುವ ಚೀನಾದ ಧ್ವಜವನ್ನು ಹೊಂದಿರುವ ರಚನೆಯನ್ನೂ ತೋರಿಸುತ್ತದೆ. ಈ ಚಿತ್ರವು ಸ್ಪಷ್ಟವಾಗಿ ಕಾಣುತ್ತಿದ್ದು, ದೈತ್ಯ ಧ್ವಜವು ಈ ಪ್ರದೇಶವು ಚೀನಾಗೆ ಸೇರಿದ್ದು ಎಂದು ಪ್ರತಿಪಾದಿಸುವಂತಿದೆ.

ಭಾರತ ಸರ್ಕಾರದ ಆನ್‌ಲೈನ್ ನಕ್ಷೆ ಸೇವೆಯಾದ ಭಾರತ್‌ಮ್ಯಾಪ್ಸ್‌ನಲ್ಲಿ ಹೊಸ ಗ್ರಾಮದ ನಿಖರವಾದ ಸ್ಥಳವನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಭಾರತದ ಡಿಜಿಟಲ್ ನಕ್ಷೆ, ಭಾರತದ ಸರ್ವೇಯರ್ ಜನರಲ್‌ನಿಂದ ಈ ಸ್ಥಳವು ಭಾರತದೊಳಗೆ ಇದೆ ಎಂದು ಖಚಿತಪಡಿಸುತ್ತದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!“ಭಾರತೀಯ ಸಮೀಕ್ಷೆಯ ಅಧಿಕೃತ ವೆಬ್‌ಸೈಟ್‌ನಿಂದ ಪಡೆದ GIS [ಭೌಗೋಳಿಕ ಮಾಹಿತಿ ವ್ಯವಸ್ಥೆ] ದತ್ತಾಂಶವನ್ನು ಆಧರಿಸಿ, ಈ ಹಳ್ಳಿಯ ಸ್ಥಳವು ನಿಜವಾಗಿಯೂ ಭಾರತೀಯ ಪ್ರಾದೇಶಿಕ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ಮಾಹಿತಿಯನ್ನು ಒದಗಿಸುವ ಯುರೋಪ್ ಮೂಲದ ಫೋರ್ಸ್ ಅನಾಲಿಸಿಸ್‌ನ ಮುಖ್ಯ ಮಿಲಿಟರಿ ವಿಶ್ಲೇಷಕ ಸಿಮ್ ಟಾಕ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಭಾರತೀಯ ತಜ್ಞರು ಇದನ್ನು ಖಚಿತಪಡಿಸಿದ್ದು, “ಭಾರತ್‌ಮ್ಯಾಪ್‌ನಲ್ಲಿ ಈ ಪ್ರದೇಶವು ಅಂತರರಾಷ್ಟ್ರೀಯ ಗಡಿಯಿಂದ 7 ಕಿಲೋಮೀಟರ್‌ಗಳ ಒಳಗೆ ಇದೆ ಎಂದು ತೋರಿಸುತ್ತದೆ. ಭಾರತದ ಸರ್ವೇ ಜನರಲ್ ವ್ಯಾಖ್ಯಾನಿಸಿದಂತೆ, ಅವರ ಅಧಿಕಾರ ವ್ಯಾಪ್ತಿಯಲ್ಲಿ ಭಾರತದ ಗಡಿಗಳನ್ನು ಎಲ್ಲಾ ಅಧಿಕೃತ ನಕ್ಷೆಗಳಲ್ಲಿ ಚಿತ್ರಿಸಲಾಗಿದೆ” ಎಂದು ಉಪಗ್ರಹ-ಇಮೇಜಿಂಗ್ ತಂತ್ರಜ್ಞಾನದಲ್ಲಿ ದಶಕಗಳ ಅನುಭವ ಹೊಂದಿರುವ ಅರೂಪ್ ದಾಸ್‌ಗುಪ್ತ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಈ ಗ್ರಾಮದ ಛಾಯಾಚಿತ್ರವನ್ನು ಈ ವರ್ಷದ ಜುಲೈನಲ್ಲಿ ಚೀನಾದ ಸರ್ಕಾರಿ ಪತ್ರಿಕಾ ಸಂಸ್ಥೆಯಾದ ಕ್ಸಿನ್ಹುವಾ ನ್ಯೂಸ್ ಏಜೆನ್ಸಿ ಪ್ರಕಟಿಸಿದೆ. ಚೀನಾದ ಅಧ್ಯಕ್ಷ ಕ್ಸಿ ಕ್ಸಿನ್‌ಪಿಂಗ್ ಅವರು ಅದೇ ಪ್ರದೇಶಕ್ಕೆ ಭೇಟಿ ನೀಡಿ ಅರುಣಾಚಲದ ಗಡಿಯಲ್ಲಿ ಹೊಸ, ಆಯಕಟ್ಟಿನ ಪ್ರಮುಖ ರೈಲು ಮಾರ್ಗವನ್ನು ಪರಿಶೀಲಿಸಿದ್ದರು. ಹೊಸದಾಗಿ ನಿರ್ಮಿಸಲಾದ ಚೈನೀಸ್ ಗ್ರಾಮವು ವಿಮಾನ ನಿಲ್ದಾಣದ ದಕ್ಷಿಣಕ್ಕೆ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ.

“ಭಾರತದ ಹಿಮಾಲಯದ ಗಡಿಭಾಗವನ್ನು ಚೀನಾ ಹೇಗೆ ಕಚ್ಚಿ ತಿನ್ನುತ್ತಿದೆ ಎಂಬುದನ್ನು ಹೊಸ ಗ್ರಾಮ ತೋರಿಸುತ್ತದೆ. ಹೊಳೆಯುತ್ತಿರುವ ಹೊಸ ಹಳ್ಳಿಯ ಚಿತ್ರಗಳು ಚೀನಾದ ಕೃತಕ ಸ್ವಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸಾಂಪ್ರದಾಯಿಕವಾಗಿ ಯಾರೂ ಚೈನೀಸ್ ಮಾತನಾಡದ ಪ್ರದೇಶದಲ್ಲಿ ನೆಲೆಗೊಂಡಿರುವ ಹಳ್ಳಿಗೆ ಚೀನಾವು ಚೀನೀ ಹೆಸರನ್ನು ಸಹ ಇಟ್ಟಿದೆ” ಎಂದು ಭಾರತ-ಚೀನಾದ ಪ್ರಮುಖ ಕಾರ್ಯತಂತ್ರದ ವಿಶ್ಲೇಷಕರಲ್ಲಿ ಒಬ್ಬರಾದ ಬ್ರಹ್ಮ ಚೆಲ್ಲಾನೆ ಹೇಳಿದ್ದಾರೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...