Homeಮುಖಪುಟಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕಗಳನ್ನು ಗಳಿಸಿ, ಕಾಲೇಜಿನ ಮ್ಯಾಗಜಿನ್‌ನ ಮುಖಪುಟದಲ್ಲಿ ಮೂರನೇ ರ್‍ಯಾಂಕ್ ಹೋಲ್ಡರ್ ಆಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿನಿ ಇಂದು ಕೂಲಿ ಕೆಲಸ ಮಾಡುತ್ತಿರುವ ಘಟನೆ ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೈದರಾಬಾದ್‌ನ ಜವಾಹರನಗರದ ಡಂಪ್ ಯಾರ್ಡ್ ಬಳಿಯಿರುವ ಗಿರಿ ಪ್ರಸಾದ್ ನಗರದ ನಿವಾಸಿ 17 ವರ್ಷದ ತಿರುಪತಮ್ಮ, ಕಷ್ಟಗಳ ನಡುವೆಯೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕ ಗಳಿಸಿದ್ದಾರೆ. ಆದರೆ, ಕಾಲೇಜು ಶುಲ್ಕ ಕಟ್ಟಲಾಗದೇ ಕೆಲವೇ ದಿನಗಳಲ್ಲಿ ವಿದ್ಯಾಭ್ಯಾಸ ಬಿಟ್ಟು ಕೂಲಿ ಕೆಲಸಕ್ಕೆ ಇಳಿದಿದ್ದಾರೆ.

ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕಂಪನಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿರುವ ತಿರುಪತಮ್ಮ ಕಾಲೇಜಿನಲ್ಲಿ ಇನ್ನೂ 8,000 ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿರುವುದರಿಂದ ಆಕೆಯ ಪ್ರಮಾಣಪತ್ರಗಳನ್ನು ನೀಡಲು ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ನಿರಾಕರಿಸಿದೆ. ಈ ಕಾರಣಕ್ಕೆ ಆಕೆ ದಿನಗೂಲಿ ಕಾರ್ಮಿಕರಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

“ನಾನು ಇಲ್ಲಿಯವರೆಗೆ ಕಾಲೇಜಿಗೆ 14,000 ರೂ. ಪಾವತಿಸಿದ್ದೇನೆ. ಇನ್ನೂ 8,000 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದೆ. ಹೀಗಾಗಿ ಕಾಲೇಜಿನವರು ನನ್ನ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ. ಲಾಕ್‌ಡೌನ್, ಕೆಲಸದ ಕೊರತೆ ಮತ್ತು ಅನಾರೋಗ್ಯದ ಕಾರಣದಿಂದಾಗಿ ನನ್ನ ಕುಟುಂಬದವರಿಂದ ಊಟಕ್ಕೆ ಹಣ ಸಂಪಾದಿಸಲು ಕೂಡ ಸಾಧ್ಯವಾಗುತ್ತಿಲ್ಲ” ಎಂದು ತಿರುಪತಮ್ಮ ಹೇಳಿದ್ದಾರೆ.

ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ತಿರುಪತಮ್ಮಗೆ ವರ್ಗಾವಣೆ ಮತ್ತು ನಡವಳಿಕೆ ಪ್ರಮಾಣಪತ್ರಗಳು ಮತ್ತು 10 ನೇ ತರಗತಿಯ ಅಂಕಪಟ್ಟಿ ನೀಡಲು ನಿರಾಕರಿಸಿದೆ.

ತಿರುಪತಮ್ಮ ಅವರ ತಂದೆ ಮತ್ತು 21 ವರ್ಷದ ಸಹೋದರ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಇತರ ಅನೇಕ ಬಡ ಕಾರ್ಮಿಕರಂತೆ ಇವರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದರು. ಈಗ ಇಬ್ಬರೂ ಈಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿನಿಯ ತಾಯಿ ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾರೆ.

“ಈಗ ನಾನು ಮತ್ತು ನನ್ನ ತಾಯಿ ಇಬ್ಬರೂ ಕೆಲಸ ಮಾಡದಿದ್ದರೆ ನಮಗೆ ಊಟವಿಲ್ಲ ಎಂಬ ಹಂತಕ್ಕೆ ಬಂದಿದೆ. ನನ್ನ ಅಣ್ಣನ ಆರೋಗ್ಯ ಚೆನ್ನಾಗಿದ್ದಿದ್ದರೇ ಆತ ಎರಡು ತಿಂಗಳಲ್ಲಿ 8,000 ರೂ.ವರೆಗೆ ಸಂಪಾದಿಸಿ ನನ್ನ ಪ್ರಮಾಣಪತ್ರಗಳನ್ನು ತಂದುಕೊಡುತ್ತಿದ್ದರು” ಎಂದು ವಿದ್ಯಾರ್ಥಿನಿ ನೋವಿನಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿ ತಿರುಪತಮ್ಮ ಶೀಘ್ರದಲ್ಲೇ ಪ್ರಮಾಣಪತ್ರಗಳನ್ನು ಪಡೆಯದಿದ್ದರೆ ಆಕೆ ಬಿಎಸ್ಸಿ ನರ್ಸಿಂಗ್‌ಗೆ ಸೇರಲು ಸಾಧ್ಯವಾಗುವುದಿಲ್ಲ. ಜೊತೆಗೆ ಆಕೆಯ ಒಂದು ವರ್ಷ ಹಾಳಾಗಿ ಆಕೆ ಶಾಶ್ವತವಾಗಿ ಕೂಲಿ ಕಾರ್ಮಿಕಳಾಗಿಯೇ ಉಳಿಯಬಹುದು.

“ನಾವು ನಮ್ಮ ಗಮನಕ್ಕೆ ಬಂದ ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸುತ್ತಿದ್ದೇವೆ. ನಾವು ಈ ಪ್ರಕರಣವನ್ನೂ ಸಹ ಪರಿಶೀಲಿಸುತ್ತೇವೆ.” ಎಂದು ಮೇಡ್ಚಲ್ ಶಿಕ್ಷಣ ಕಚೇರಿಯ ಅಧಿಕಾರಿಯೊಬ್ಬರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...