Homeಕರ್ನಾಟಕಬಿಟ್ ಕಾಯಿನ್ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ- ಡಿ.ಕೆ. ಶಿವಕುಮಾರ್

ಬಿಟ್ ಕಾಯಿನ್ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ- ಡಿ.ಕೆ. ಶಿವಕುಮಾರ್

- Advertisement -
- Advertisement -

ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕೃಷ್ಣನನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಡಿ.ಕೆ. ಶಿವಕುಮಾರ್, “ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ. ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ” ಎಂದು ಟೀಕಿಸಿದ್ದಾರೆ.

ಆರೋಪಿ ಶ್ರೀಕೃಷ್ಣನನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ತಮಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದರು.

“ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ. ಆಮೇಲೆ ಯೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ಆರೋಪಿ ಜೈಲಿನಲ್ಲಿದ್ದ ಬಗ್ಗೆ ಪ್ರಸ್ತಾಪಿಸಿರುವ ಮಾಧ್ಯಮದವರಿಗೆ, ’ಅದಕ್ಕೆ ನಾನು ಹೇಳಿದ್ದು ಹೋಮ್ ಮಿನಿಸ್ಟರ್ ಒಬ್ಬ ಹುಚ್ಚ ಎಂದು. ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ನಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಪರಿವೆಯೇ ಇಲ್ಲ. ಹೀಗಾಗಿ ಅವರನ್ನು ಮೊದಲು ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕಿದೆ’ ಎಂದಿದ್ದಾರೆ.

“ಆರೋಪಿ ಶ್ರೀಕೃಷ್ಣನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಎಂದು ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ ಅದನ್ನು ಮಾಡಿಲ್ಲ. ಕೋವಿಡ್ ನೆಪವೊಡ್ಡಿ ಬೇರೆ ಕಡೆ ಪರೀಕ್ಷೆ ಮಾಡಲಾಗಿದೆ. ಕೋರ್ಟ್ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಯಾಕಾಗಿ ಬೇರೆ ಕಡೆ ಪರೀಕ್ಷೆ ಮಾಡಿಸಿದರು..? ಯಾರು ಇದಕ್ಕೆ ಜವಾಬ್ದಾರರು..? ಯಾವ ಮಂತ್ರಿಗಳು ಜವಾಬ್ದಾರರು..? ಯಾರೆಲ್ಲ ಇದಕ್ಕೆ ಹೊಣೆಗಾರರು ಎಂಬುದು ಹೊರಬರಬೇಕಲ್ಲವೇ..? ಆದರೆ ಅಪ್ರಬುದ್ಧ, ಜ್ಞಾನವೇ ಇಲ್ಲದ ಗೃಹ ಸಚಿವರು ಶಾಲಾ ಬಾಲಕನಂತೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...