Homeಕರ್ನಾಟಕಬಿಟ್ ಕಾಯಿನ್ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ- ಡಿ.ಕೆ. ಶಿವಕುಮಾರ್

ಬಿಟ್ ಕಾಯಿನ್ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ- ಡಿ.ಕೆ. ಶಿವಕುಮಾರ್

- Advertisement -
- Advertisement -

ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕೃಷ್ಣನನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಡಿ.ಕೆ. ಶಿವಕುಮಾರ್, “ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ. ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ” ಎಂದು ಟೀಕಿಸಿದ್ದಾರೆ.

ಆರೋಪಿ ಶ್ರೀಕೃಷ್ಣನನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ತಮಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದರು.

“ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ. ಆಮೇಲೆ ಯೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ಆರೋಪಿ ಜೈಲಿನಲ್ಲಿದ್ದ ಬಗ್ಗೆ ಪ್ರಸ್ತಾಪಿಸಿರುವ ಮಾಧ್ಯಮದವರಿಗೆ, ’ಅದಕ್ಕೆ ನಾನು ಹೇಳಿದ್ದು ಹೋಮ್ ಮಿನಿಸ್ಟರ್ ಒಬ್ಬ ಹುಚ್ಚ ಎಂದು. ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ನಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಪರಿವೆಯೇ ಇಲ್ಲ. ಹೀಗಾಗಿ ಅವರನ್ನು ಮೊದಲು ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕಿದೆ’ ಎಂದಿದ್ದಾರೆ.

“ಆರೋಪಿ ಶ್ರೀಕೃಷ್ಣನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಎಂದು ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ ಅದನ್ನು ಮಾಡಿಲ್ಲ. ಕೋವಿಡ್ ನೆಪವೊಡ್ಡಿ ಬೇರೆ ಕಡೆ ಪರೀಕ್ಷೆ ಮಾಡಲಾಗಿದೆ. ಕೋರ್ಟ್ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಯಾಕಾಗಿ ಬೇರೆ ಕಡೆ ಪರೀಕ್ಷೆ ಮಾಡಿಸಿದರು..? ಯಾರು ಇದಕ್ಕೆ ಜವಾಬ್ದಾರರು..? ಯಾವ ಮಂತ್ರಿಗಳು ಜವಾಬ್ದಾರರು..? ಯಾರೆಲ್ಲ ಇದಕ್ಕೆ ಹೊಣೆಗಾರರು ಎಂಬುದು ಹೊರಬರಬೇಕಲ್ಲವೇ..? ಆದರೆ ಅಪ್ರಬುದ್ಧ, ಜ್ಞಾನವೇ ಇಲ್ಲದ ಗೃಹ ಸಚಿವರು ಶಾಲಾ ಬಾಲಕನಂತೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...