Homeಕರ್ನಾಟಕಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಮೈಸೂರಿನಲ್ಲಿ ದಸಂಸ ಪ್ರತಿಭಟನೆ ನಡೆಸಿ ಚಿತ್ರ ಸಾಹಿತಿಯ ಹೇಳಿಕೆಯನ್ನು ಬೆಂಬಲಿಸಿದೆ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿ, ಬಲಪಂಥೀಯರು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಅವರಿಗೆ ಸೂಕ್ತ ರೀತಿಯ ಭದ್ರತೆ ಒದಗಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಗುರುವಾರದಂದು ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದೆ. ಜೊತೆಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೂಡಾ ದಲಿತ ಸಂಘರ್ಷ ಸಮಿತಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ದಾಖಲಿಸಿ ಹಂಸಲೇಖ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 1,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳನ್ನು ಮುಚ್ಚುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಮುಖ್ಯವಾಗಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಿಂದ ಪ್ರಾರಂಭಗೊಂಡ ರ್‍ಯಾಲಿ, ಅಂಬೇಡ್ಕರ್ ಕೇಂದ್ರ ಗ್ರಂಥಾಲಯದ ಮೂಲಕ ಸಾಗಿ, ಎಲ್ಲಾ ವಿಭಾಗಗಳಿಗೆ ಭೇಟಿ ಕೊಟ್ಟು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರನ್ನೂ ಒಳಗೊಂಡು ಆಡಳಿತ ಕಚೇರಿಯ ಮುಂದೆ ಇರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಾರ್ವಜನಿಕ ಜಾಗೃತಿ ನಡೆಸಲಾಯಿತು” ಎಂದು ಪ್ರತಿಭಟನೆಯ ಸಂಚಾಲಕರಲ್ಲೊಬ್ಬರಾದ ಲೋಕೇಶ್‌ ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕೂಪದ ವಿರಾಟ್‌ರೂಪವನ್ನು ಬಿಚ್ಚಿಟ್ಟ ಹಂಸಲೇಖ ಘಟನೆ!

“ಪ್ರಜಾತ್ಪಾತ್ಕಕ ವ್ಯವಸ್ಥೆಯಲ್ಲಿ ಜನರ ಮೂಲಭೂತ ಹಕ್ಕುಗಳಾದ ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುತ್ತು ಬರುತ್ತಿರುವುದು ಆತಂಕಕಾರಿ ಮತ್ತು ಅಪಾಯಕಾರಿ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣ್ಯವನ್ನು ಕುರಿತು ಸತ್ಯವನ್ನು ಮಾತನಾಡುವುದು, ಬರೆಯುವುದು ಮಹಾ ಅಪರಾಧವಾಗಿ ಬಿಂಬಿತವಾಗುತ್ತಿದೆ. ಹಂಸಲೇಖರವರು ಅಸ್ಪಶ್ಯತೆಯ ನಿರ್ಮೂಲನೆಗೆ ಸಂಬಂಧಿಸಿದಂತೆ ದಲಿತರು ಮತ್ತು ಶೂದ್ರ ಸಮುದಾಯದ ಆಹಾರ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡಿರುವುದು ಸಾ೦ದರ್ಭಿಕವಾದರೂ ಸಾರ್ವಕಾಲಿಕ ಮತ್ತು ಸಂವಿಧಾನಾತ್ಮಕವಾಗಿದೆ” ಎಂದು ಒಕ್ಕೂಟ ಹೇಳಿದೆ.

“ಈ ದೇಶದ ಮನುವಾದಿಗಳಿಗೆ ಅಪರೂಪಕ್ಕಾದರು ಸತ್ಯವನ್ನು ಸಹಿಸಿಕೊಳ್ಳುವ, ಸತ್ಯವನ್ನು ಒಪ್ಪಿಕೊಳ್ಳುವ, ತಾವು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ, ತಪ್ಪುಗಳನ್ನು ತಿದ್ದಿದವರಿಗೆ ಕೃತಜ್ಞತೆ ಸಲ್ಲಿಸುವ ದೊಡ್ಡ ಗುಣ ಇಲ್ಲಿಯವರೆವಿಗೂ ಬಾರದೆ ಇರುವುದು ದುರದೃಷ್ಟಕರ” ಎಂದು ಒಕ್ಕೂಟವು ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾ ರ್‍ಯಾಲಿಯಲ್ಲಿ ವಿದ್ಯಾರ್ಥಿ ಮುಖಂಡರಾದ ವೆಂಕಟೇಶ್‌ ವಿ.ಎಸ್., ಗೋಪಾಲ್ ಜಿ., ಲೋಕೇಶ್‌ ಎನ್‌.ಆರ್‌., ಸತೀಶ್‌‌ ಜಿ.ಕೆ., ಲೋಕೇಶ್‌ ಎನ್., ಚಂದ್ರು ಪೆರಿಯಾರ್‌, ಯಲ್ಲಪ್ಪ ಕೆ.ಜಿ., ಈಶ್ವರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೈಸೂರಿನಲ್ಲೂ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ಅವರ ಮೇಲಿನ ದಾಳಿಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು.

“ಹಂಸಲೇಖರವರ ಸಮಾನತೆ ಪರ, ಭ್ರಾತೃತ್ವದ ಪರವಾದ ಮಾತುಗಳು ಬ್ರಾಹ್ಮಣಶಾಹಿ ಮನಸ್ಸುಗಳ ಎದೆಯನ್ನು ಇರಿದಂತಿದೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಕ್ಷಮೆಯಾಚಿಸುವಂತೆ ಒತ್ತಡ ಹೇರಿ, ಭಯದ ವಾತಾವರಣವನ್ನು ನಿರ್ಮಿಸಲಾಗಿದೆ” ಎಂದು ಸಂಘರ್ಷ ಸಮಿತಿಯು ಹೇಳಿದೆ.

ಇಷ್ಟೇ ಅಲ್ಲದೆ, ಇತ್ತೀಚೆಗೆ ರಾಜಕೀಯ ಚರ್ಚಾ ವಿಷಯ ಆಗಿರುವ ಬಿಟ್‌ ಕಾಯಿನ್‌ ವಿಚಾರದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿ, ಕೋಮು ದ್ವೇಷವನ್ನು ಕಾರಿದ್ದರು. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ವಿರೋಧಿಸಿಯು ಬೆಂಗಳೂರು ಮತ್ತು ಮೈಸೂರಿನ ಪ್ರತಿಭಟನೆಗಳಲ್ಲಿ ಆಕ್ರೋಶದ ಧ್ವನಿ ವ್ಯಕ್ತವಾಗಿತ್ತು.

“ಹಗರಣದ ಕುರಿತಂತೆ ಪ್ರಿಯಾಂಕ್‌ ಖರ್ಗೆಯವರು ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರಕ್ಕೆ ಉತ್ತರಿಸಲಾಗುತ್ತಿಲ್ಲ. ಹೀಗಾಗಿ ಸರ್ಕಾರ ವ್ಯರ್ಥವಾಗಿ ತಮ್ಮ ಅಂಧಾಭಿಮಾನಿಗಳ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ತಂತ್ರ ಹೂಡುತ್ತಿದೆ. ಹಾಗಾಗಿಯೆ ಹಂಸಲೇಖ ಅವರ ನ್ಯಾಯಯುತವಾದ ಹೇಳಿಕೆಯನ್ನು ನೆಪವಾಗಿಟ್ಟುಕೊಂಡು ಹಿಂದುಳಿದ ಶೋಷಿತ ಸಮುದಾಯಗಳ ಭಾವನೆಗಳ ವಿರುದ್ಧವಾಗಿ ಹೇಳಿಕೆಯನ್ನು ನೀಡುವುದು, ದೂರು ದಾಖಲಿಸುವುದು, ಹಲ್ಲೆ ನಡೆಸುವುದು, ಭಯ ಹುಟ್ಟಿಸುವುದು ಸೇರಿದಂತೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ನಡೆಯನ್ನು ಅನುಸರಿಸುತ್ತಿದೆ” ಎಂದು ದಲಿತ ಸಂಘರ್ಷ ಸಮಿತಿಯು ಕಿಡಿಕಾರಿದೆ.

ಇದನ್ನೂ ಓದಿ: ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

ಜೊತೆಗೆ ಪ್ರಚೋದನಕಾರಿ, ಸಂವಿಧಾನ ವಿರೋಧಿ ಕಾನೂನುಬಾಹಿರ ಹೇಳಿಕೆಗಳನ್ನು ನೀಡುತ್ತಾ ಕೋಮುದ್ವೇಷ ಹರಡುವ ಮತ್ತು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಸಂಸ ಸರ್ಕಾರಕ್ಕೆ ಒತ್ತಾಯಿಸಿದೆ.

ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರ ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು. ಕ್ಷಮೆ ಕೇಳಿದ ನಂತರವು ಅವರ ತೇಜೋವಧೆ ಮುಂದುವರೆದಿದ್ದು, ಅವರ ಮಾತಿನ ತಾತ್ಪರ್ಯವನ್ನು ಬದಲಾಯಿಸಿ ಬಲಪಂಥೀಯರು ಅವರನ್ನು ಅವಹೇಳನ ಮಾಡುತ್ತಿದೆ.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...