Homeಮುಖಪುಟಅಖಿಲೇಶ್ ಯಾದವ್ ’ಚಿಲ್ಲಂಜೀವಿ’ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ಅಖಿಲ ಭಾರತೀಯ ಸಂತ ಸಮಿತಿ

ಅಖಿಲೇಶ್ ಯಾದವ್ ’ಚಿಲ್ಲಂಜೀವಿ’ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ಅಖಿಲ ಭಾರತೀಯ ಸಂತ ಸಮಿತಿ

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ “ಚಿಲ್ಲಂಜೀವಿ” ಹೇಳಿಕೆಗೆ ಹಿಂದೂ ಧರ್ಮದರ್ಶಿಗಳ ಸಂಯುಕ್ತ ಸಂಸ್ಥೆಯಾದ ಅಖಿಲ ಭಾರತೀಯ ಸಂತ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಖಿಲೇಶ್ ಯಾದವ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಬುಧವಾರ (ನ.17) ಗಾಜಿಪುರದಲ್ಲಿ ತಮ್ಮ ಮಿತ್ರಪಕ್ಷಗಳೊಂದಿಗೆ ಲಕ್ನೋಗೆ ಜಂಟಿ ರಥಯಾತ್ರೆಯನ್ನು ಪ್ರಾರಂಭಿಸಿದ ಅಖಿಲೇಶ್ ಯಾದವ್, ಬಿಜೆಪಿ ವಿರುದ್ಧ ನಡೆಸಿದ ವಾಗ್ದಾಳಿ ನಡೆಸುವ ವೇಳೆ ಕೇಸರಿ ಧರಿಸಿದ ಸಂತರನ್ನು “ಚಿಲ್ಲಂಜೀವಿ”ಎಂದು ಕರೆದಿದ್ದರು.

ಚಿಲ್ಲಮ್ (Chillum ) ಎಂದರೆ ತಂಬಾಕು ಅಥವಾ ಗಾಂಜಾದಂತಹ ವಸ್ತುಗಳನ್ನು ಧೂಮಪಾನ ಮಾಡಲು ಬಳಸುವ ಒಂದು ಸಣ್ಣ ಪೈಪ್.

ಅಖಿಲ ಭಾರತೀಯ ಸಂತ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರಾನಂದ ಸರಸ್ವತಿ ಮಾತನಾಡಿ, “ಅಖಿಲೇಶ್ ಯಾದವ್ ಅವರ ಈ ಅನಿಯಂತ್ರಿತ ಹೇಳಿಕೆಯಿಂದ ದೇಶಾದ್ಯಂತದ ಎಲ್ಲಾ ಸಂತರು ಒಗ್ಗಟ್ಟಿನ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಎಲ್ಲಾ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಧರ್ಮ, ಭಗವಂತ ಮತ್ತು ಸಂತರನ್ನು ತಮ್ಮ ಕ್ಷುಲ್ಲಕ ರಾಜಕಾರಣದಲ್ಲಿ ಎಳೆದು ತರಬಾರದು” ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಅಖಿಲೇಶ್‌ ಯಾದವ್‌

ಸನಾತನ ಹಿಂದೂಗಳು ಮತ್ತು ಅವರ ಸಂಪ್ರದಾಯಗಳ ಬಗ್ಗೆ ನಿರಂತರವಾಗಿ ಹತೋಟಿಯಿಲ್ಲದ ಹೇಳಿಕೆಗಳನ್ನು ನೀಡುತ್ತಿರುವ ಇಂತಹ ಹುಸಿ ಸಮಾಜವಾದಿಗಳು ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಸಂತ ಸಮಾಜವು ಉತ್ತರ ಪ್ರದೇಶದಲ್ಲಿ ಮನೆ-ಮನೆಗೆ ತೆರಳಿ ಜನಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಅಖಿಲೇಶ್ ಯಾದವ್ ಮತ್ತು ರಾಹುಲ್ ಗಾಂಧಿಯಂತಹ ನಾಯಕರು ಅಲ್ಪಸಂಖ್ಯಾತರ ಓಲೈಕೆಗಾಗಿ ಸನಾತನ ಧರ್ಮದ ವಿರುದ್ಧ ಇಂತಹ ಸಣ್ಣ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಸ್ವಾಮಿ ಜಿತೇಂದ್ರಾನಂದ ಸರಸ್ವತಿ ಆರೋಪಿಸಿದ್ದಾರೆ.

“ಅಖಿಲೇಶ್ ಯಾದವ್ ಮತ್ತು ಅವರ ವಕ್ತಾರರು ಸಂತರನ್ನು ಅವಮಾನಿಸಿದಕ್ಕಾಗಿ ಸಂತರು ಮತ್ತು ಸನಾತನ ಸಮಾಜದವರಲ್ಲಿ ತಕ್ಷಣವೇ ಕ್ಷಮೆಯಾಚಿಸಬೇಕು. ಕ್ಷಮೆ ಯಾಚಿಸದಿದ್ದರೆ ಸಂತ ಸಮಾಜ ದೇಶಾದ್ಯಂತ ಸಕ್ರಿಯವಾಗಿ ಮನೆ ಮನೆಗೆ ತೆರಳಿ ಅವರ ವಿರುದ್ಧ ಸಾರ್ವಜನಿಕ ಬೆಂಬಲಕ್ಕಾಗಿ ಮನವಿ ಮಾಡಲಿದೆ” ಎಂದು ಸ್ವಾಮಿ ಜಿತೇಂದ್ರಾನಂದ ಸರಸ್ವತಿ ಹೇಳಿದ್ದಾರೆ.


ಇದನ್ನೂ ಓದಿ: ಪಂಚರಾಜ್ಯ ಚುನಾವಣೆಗೆ ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 252 ಕೋಟಿ ರೂಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...