Homeರಾಜಕೀಯಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಭಾರತೀಯ ಸೇನೆಯ ಲೆಫ್ಟಿನೆಂಟ್ ‘ವಿದೇಶಿ.. ಬಂಧನದಲ್ಲೀಗ ಅವರು ‘ಪರದೇಶಿ’...

- Advertisement -
- Advertisement -

ರಾಷ್ಟ್ರೀಯ ನಾಗರೀಕತ್ವ ನೋಂದಣಿ (ಎನ್‍ಆರ್‍ಸಿ) ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಬಿಜೆಪಿಯ ಮ್ರಮುಖ ಚುನಾವಣಾ ವಿಷಯವಾಗಿತ್ತು. ಈ ಹಿಂದೆಯೇ ಅಸ್ಸಾಂನಂತಹ ರಾಜ್ಯದಲ್ಲಿ ಈ ಪ್ರಯೋಗ ಆರಂಭವಾಗಿದೆ. ಇದರ ಅಡಿಯಲ್ಲಿ ಭಾರತೀಯ ಸೇನೆಯಲ್ಲಿ 30 ಬರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಲೆಫ್ಟಿನೆಂಟ್ ಒಬ್ಬರನ್ನು ವಿದೇಶಿ ಎಂದು ಗುರುತಿಸಿ ಬಂಧಿಸಲಾಗಿದೆ. ಅವರು ಮುಸ್ಲಿಂ ಎನ್ನುವುದು ಕಾಕತಾಳೀಯವಲ್ಲ…
ಎನ್‍ಆರ್‍ಸಿ ಮುಂದೆ ಸೃಷ್ಟಿಸಲಿರುವ ಅನಾಹುತಗಳಿಗೆ ಸಾಕ್ಷಿಯಾಗಿ ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಹಲವಾರು ಜನರನ್ನು ವಿದೇಶಿ ವಲಸಿಗರು ಎಂದು ಗುರುತಿಸುವ ಸಂಚು ಶುರುವಾಗಿದೆ. ಮೊನ್ನೆ ಮೇ 29ರಂದು ಅಸ್ಸಾಂ ಪೊಲೀಸರು ಮೊಹಮ್ಮದ್ ಸನಾವುಲ್ಲಾ ಎಂಬ ನಿವೃತ್ತ ಗೌರವಾನ್ವಿತ ಲೆಫ್ಟಿನೆಂಟ್‍ರನ್ನು ವಶಕ್ಕೆ ಪಡೆದಿದ್ದಾರೆ. ‘ಬೋಕೊ ಫಾರಿನರ್ಸ್ ಟ್ರಿಬ್ಯುನಲ್’ ಅವರನ್ನು ವಿದೇಶಿಯೆಂದು ಗುರುತಿಸಿದೆ.
ಇದೇನೂ ಮೊದಲಲ್ಲ. ಹಲವಾರು ನಿವೃತ್ತ ಸೇನಾಧಿಕಾರಿಗಳು ಈಗಾಗಲೇ ವಿಚಾರಣೆ ಹೆಸರಲ್ಲಿ ಕಿರುಕುಳ ಅನುಭವಿಸಿದ್ದಾರೆ. ದೇಶಕ್ಕೆ ಅವರು ನೀಡಿದ ಕೊಡುಗೆಯೂ ಈ ಭಯಾನಕ ಎನ್‍ಆರ್‍ಸಿ ಮುಂದೆ ನಗಣ್ಯ. ಹೀಗಾದರೆ ಅಲ್ಲಿನ ಜನಸಾಮಾನ್ಯರ ಪರಿಸ್ಥಿತಿಯನ್ನು ಊಹಿಸಿ.
ಈ ಸಲದ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಲವಾರು ಕಡೆ ಎನ್‍ಆರ್‍ಸಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಎಲ್ಲ ಕಡೆ ಎನ್‍ಆರ್‍ಸಿ ಬಳಸಿ ನುಸುಳುಕೋರರನ್ನು ದೇಶದಿಂದ ಹೊರ ಹಾಕುತ್ತೇವೆ. ಇದರಲ್ಲಿ ಹಿಂದೂ ನಿರಾಶ್ರಿತರಿದ್ದರೆ ಅವರಿಗೆ ಇಲ್ಲಿಯ ನಾಗರಿಕತ್ವ ನೀಡುತ್ತೇವೆ. ಉಳಿದವರನ್ನು ಎತ್ತಿ ಬಿಸಾಡುತ್ತೇವೆ’ ಎಂದು ಪ್ರಚೊದನಾಜಾರ ಭಾಷಣಗಳನ್ನು ಮಾಡಿದ್ದರು. ಅವರ ಗುರಿ ಬಾಂಗ್ಲಾ ಮೂಲದ ಮುಸ್ಲಿಂರೇ ಎಂಬುದು ಸ್ಪಷ್ಟ. ಇದನ್ನು ದೇಶಾದ್ಯಂತ ವಿಸ್ರಿಸಿದರೆ ಘನಘೋರ ದೌರ್ಜನ್ಯಗಳಾಗುವುದಂತೂ ಸತ್ಯ. ಹಿಂದೊಮ್ಮೆ ಬಾಂಗ್ಲಾ ವಲಸಿಗರನ್ನು ಇದೇ ಶಾ ಕ್ರಿಮಿಕೀಟಗಳಿಗೆ ಹೋಲಿಸಿದ್ದರು. ಈ ಪುಣ್ಯಾತ್ಮನಿಗೆ ಗೃಹ ಖಾತೆ ನೀಡಿದರಂತೂ ಪರಿಸ್ಥಿತಿ ಅಧ್ವಾನವಾಗಲಿದೆ.
51 ವರ್ಷದ ಸನಾವುಲ್ಲಾ ಭಾರತೀಯ ಸೇನೆಗೆ ಸಾಮಾನ್ಯ ಸೈನಿಕನಾಗಿ ಸೇವೆಗೆ ಸೇರಿ, ಜಮ್ಮು-ಕಾಶ್ಮೀರ ಮತ್ತು ಮಣಿಪುರಗಳಲ್ಲಿ ಆಂತರಿಕ ಸಶಸ್ತ್ರ ಬಂಡಾಯಗಳ ವಿರುದ್ಧದ ಹೋರಾಟದಲ್ಲಿ ಪಾಲೊಂಡಿದ್ದಾರೆ. ಅವರ ಸೇವೆ ಮನ್ನಿಸಿ 2014ರಲ್ಲಿ ರಾಷ್ಟ್ಪತಿ ಅವರಿಗೆ ಜೂನಿಯರ್ ಕಮೀಚನ್ ಅಧಿಕಾರಿ ದರ್ಜಗೆ ಬಡ್ತಿ ನೀಡಿದ್ದಾರೆ.
ನಿವೃತ್ತಿ ನಂತರ ಅವರು ಅಸ್ಸಾಂ ಗಡಿ ಭದ್ರತಾ ಪಡೆಗೆ ಎಸ್‍ಐ ಎಂದು ನೇಮಕಗೊಂಡಿದ್ದರು. ಈಗ ಫಾರಿನರ್ಸ್ ಟ್ರಿಬ್ಯುನಲ್ (ಎಫ್‍ಟಿ) ಸೂಚನೆಯ ಮೇರೆಗೆ ಅದೇ ಪೊಲೀಸರೇ ಅವರನ್ನು ಅರೆಸ್ಟಟ ಮಾಡಿದ್ದಾರೆ. ಅವರನ್ನು ಈಗ ಗೋಲ್‍ಪಾರಾ ಡಿಟೆನ್ಸನ್ ಕೇಂದ್ರದಲ್ಲಿ ಇಡಲಾಗಿದೆ. ಸನಾವುಲ್ಲಾ ಬಂಧನದ ವಿರುದ್ಧ ಹೈಕೋರ್ಟಿಗೆ ಹೋಗಲಿರುವ ವಕೀಲ ಅಮಾನ್ ವಡುದ್ ‘ಕ್ವಿಂಟ್’ನೊಂದಿಗೆ ಮಾತನಾಡಿ, ಫಾರಿನರ್ಸ್ ಟ್ರಿಬ್ಯುನಲ್ ಸರಿಯಾದ ತನಿಖೆ ಮಾಡದೇ ಸನಾವುಲ್ಲಾ ಅವರನ್ನು ವಿದೇಶಿ ನಾಗರಿಕ ಎಂದು ಹೇಳಿರುವುದು ಅಕ್ಷಮ್ಯ, 30 ವರ್ಷ ಈ ದೇಶದ ಸೇನೆಯ ಭಾಗವಾಗಿದ್ದವರಿಗೇ ಈ ಸ್ಥಿತಿಯಾದರೆ ಜನಸಾಮಾನ್ಯರ ಪಾಡೇನು? ಎಂದು ಪ್ರಶ್ನಿಸಿದ್ದಾರೆ.
ಅಸ್ಸಾಂ ಗಡಿ ಭದ್ರತಾ ಪೊಲೀಸರ5ನ್ನೂ ದೂರಿರುವ ಅವರು, ವೆರಿಫಿಕೆಷನ್ ರಿಪೋರ್ಟಿನಲ್ಲಿ ಸನಾವುಲ್ಲಾ ಒಬ್ಬ ದಿನಗೂಲಿ ಕಾರ್ಮಿಕ ಎಂದು ಉಲ್ಲೇಖಿಸಿದ್ದಾರೆ ಎಂದೂ ತಿಳಿಸಿದ್ದಾರೆ. ಎಫ್‍ಟಿ ವರದಿಯಲ್ಲಿ ಸನಾವುಲ್ಲಾ ವಿದೇಶಿ ಎಂದು ನಿರ್ಧರಿಸಲು, ‘1986ರ ಮತದಾರರ ಪಟ್ಟಿಯಲ್ಲಿ 20 ವರ್ಷದವರಾಗಿದ್ದ ಅವರು ತಮ್ಮ ಹೆಸರನ್ನು ನೋಂದಾಯಿಸಿರಲಿಲ್ಲ’ ಎಂಬ ವಿಚುತ್ರ ಕಾರಣವನ್ನೂ ನೀಡಲಾಗಿದೆ. ಆದರೆ, ಮತದಾನದ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿದ್ದು 1989ರಲ್ಲಿ ಎಂಬ ವಾಸ್ತವವನ್ನೂ ಕಡೆಗಣಿಸಲಾಗಿದೆ.
‘ಕೋರ್ಟಿನ ಆದೇಶದ ಮೇರೆಗೆ ಸನಾವುಲ್ಲಾ ಅವರನ್ನು ನಾವು ಬಂಧಿಸಿದ್ದೇವೆ. ಎಫ್‍ಟಿ ವರದಿಯೇ ನಮಗೆ ಫೈನಲ್/ ಸನಾವುಲ್ಲಾ ಅವರು ಕೋರ್ಟಿಗೆ ಹೋಗಲು ಅವಕಾಶಗಳಿವೆ’ ಎಂದು ಅನಿನ್‍ಗಾಂವ್‍ನ ಹೆಚ್ಚುವರಿ ಎಸ್‍ಪಿ ಸಂಜೀಬ್ ಸೈಕಿಯಾ ತಿಳಿಸಿದ್ದಾರೆ.
ಕಳೆದ ವರ್ಷವೇ ಈ ಬಗ್ಗೆ ನೋಟಿಸ್ ಬಂದಾದ ಮೇಲೆ ಸನಾವುಲ್ಲಾ ವಿವಿಧ ಪೊಲೀಸ್ ಠಾಣೆಗಳಿಗೆ ತೆರಳಿ ವಿವರ ಪರಿಶೀಲಿಸಿದ್ದಾರೆ. ಆದರೆ, ಬೋಕೊ ಎಫ್‍ಟಿ ವರದಿಯಲ್ಲಿ ಆಗಿಚ್ಯಾ ಗ್ರಾಮದ ಮೊಹಮ್ಮದ್ ಸಮಸ್ಯಲ್ ಹಕ್ ಎಂಬುವರ ಹೆಸರಿದ್ದು, ಅದನ್ನೇ ತಪ್ಪಾಗಿ ನನ್ನ ಮೇಲೆ ಕೇಸಉ ಹೂಡಲು ಎಫ್‍ಟಿ ಬಳಸಿಕೊಂಡಿದ್ದಾರೆ…. 30 ವರ್ಷ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನನಗೆ ವಿದೇಶಿ ಪಟ್ಟ ಕಟ್ಟಿ ಬಂಧನದಲ್ಲಿ ಇಡುವ ಉಡುಗೊರೆಯನ್ನು ನೀಡಲಾಗುತ್ತಿದೆ’ ಎಂದು ಸ್ವತ: ಸನಾವುಲ್ಲಾ ನ್ಯೂಸ್ 18 ಮಾಧ್ಯಮದ ಮುಂದೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...