Homeರಾಜಕೀಯಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಭಾರತೀಯ ಸೇನೆಯ ಲೆಫ್ಟಿನೆಂಟ್ ‘ವಿದೇಶಿ.. ಬಂಧನದಲ್ಲೀಗ ಅವರು ‘ಪರದೇಶಿ’...

- Advertisement -
- Advertisement -

ರಾಷ್ಟ್ರೀಯ ನಾಗರೀಕತ್ವ ನೋಂದಣಿ (ಎನ್‍ಆರ್‍ಸಿ) ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಬಿಜೆಪಿಯ ಮ್ರಮುಖ ಚುನಾವಣಾ ವಿಷಯವಾಗಿತ್ತು. ಈ ಹಿಂದೆಯೇ ಅಸ್ಸಾಂನಂತಹ ರಾಜ್ಯದಲ್ಲಿ ಈ ಪ್ರಯೋಗ ಆರಂಭವಾಗಿದೆ. ಇದರ ಅಡಿಯಲ್ಲಿ ಭಾರತೀಯ ಸೇನೆಯಲ್ಲಿ 30 ಬರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಲೆಫ್ಟಿನೆಂಟ್ ಒಬ್ಬರನ್ನು ವಿದೇಶಿ ಎಂದು ಗುರುತಿಸಿ ಬಂಧಿಸಲಾಗಿದೆ. ಅವರು ಮುಸ್ಲಿಂ ಎನ್ನುವುದು ಕಾಕತಾಳೀಯವಲ್ಲ…
ಎನ್‍ಆರ್‍ಸಿ ಮುಂದೆ ಸೃಷ್ಟಿಸಲಿರುವ ಅನಾಹುತಗಳಿಗೆ ಸಾಕ್ಷಿಯಾಗಿ ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಹಲವಾರು ಜನರನ್ನು ವಿದೇಶಿ ವಲಸಿಗರು ಎಂದು ಗುರುತಿಸುವ ಸಂಚು ಶುರುವಾಗಿದೆ. ಮೊನ್ನೆ ಮೇ 29ರಂದು ಅಸ್ಸಾಂ ಪೊಲೀಸರು ಮೊಹಮ್ಮದ್ ಸನಾವುಲ್ಲಾ ಎಂಬ ನಿವೃತ್ತ ಗೌರವಾನ್ವಿತ ಲೆಫ್ಟಿನೆಂಟ್‍ರನ್ನು ವಶಕ್ಕೆ ಪಡೆದಿದ್ದಾರೆ. ‘ಬೋಕೊ ಫಾರಿನರ್ಸ್ ಟ್ರಿಬ್ಯುನಲ್’ ಅವರನ್ನು ವಿದೇಶಿಯೆಂದು ಗುರುತಿಸಿದೆ.
ಇದೇನೂ ಮೊದಲಲ್ಲ. ಹಲವಾರು ನಿವೃತ್ತ ಸೇನಾಧಿಕಾರಿಗಳು ಈಗಾಗಲೇ ವಿಚಾರಣೆ ಹೆಸರಲ್ಲಿ ಕಿರುಕುಳ ಅನುಭವಿಸಿದ್ದಾರೆ. ದೇಶಕ್ಕೆ ಅವರು ನೀಡಿದ ಕೊಡುಗೆಯೂ ಈ ಭಯಾನಕ ಎನ್‍ಆರ್‍ಸಿ ಮುಂದೆ ನಗಣ್ಯ. ಹೀಗಾದರೆ ಅಲ್ಲಿನ ಜನಸಾಮಾನ್ಯರ ಪರಿಸ್ಥಿತಿಯನ್ನು ಊಹಿಸಿ.
ಈ ಸಲದ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಲವಾರು ಕಡೆ ಎನ್‍ಆರ್‍ಸಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಎಲ್ಲ ಕಡೆ ಎನ್‍ಆರ್‍ಸಿ ಬಳಸಿ ನುಸುಳುಕೋರರನ್ನು ದೇಶದಿಂದ ಹೊರ ಹಾಕುತ್ತೇವೆ. ಇದರಲ್ಲಿ ಹಿಂದೂ ನಿರಾಶ್ರಿತರಿದ್ದರೆ ಅವರಿಗೆ ಇಲ್ಲಿಯ ನಾಗರಿಕತ್ವ ನೀಡುತ್ತೇವೆ. ಉಳಿದವರನ್ನು ಎತ್ತಿ ಬಿಸಾಡುತ್ತೇವೆ’ ಎಂದು ಪ್ರಚೊದನಾಜಾರ ಭಾಷಣಗಳನ್ನು ಮಾಡಿದ್ದರು. ಅವರ ಗುರಿ ಬಾಂಗ್ಲಾ ಮೂಲದ ಮುಸ್ಲಿಂರೇ ಎಂಬುದು ಸ್ಪಷ್ಟ. ಇದನ್ನು ದೇಶಾದ್ಯಂತ ವಿಸ್ರಿಸಿದರೆ ಘನಘೋರ ದೌರ್ಜನ್ಯಗಳಾಗುವುದಂತೂ ಸತ್ಯ. ಹಿಂದೊಮ್ಮೆ ಬಾಂಗ್ಲಾ ವಲಸಿಗರನ್ನು ಇದೇ ಶಾ ಕ್ರಿಮಿಕೀಟಗಳಿಗೆ ಹೋಲಿಸಿದ್ದರು. ಈ ಪುಣ್ಯಾತ್ಮನಿಗೆ ಗೃಹ ಖಾತೆ ನೀಡಿದರಂತೂ ಪರಿಸ್ಥಿತಿ ಅಧ್ವಾನವಾಗಲಿದೆ.
51 ವರ್ಷದ ಸನಾವುಲ್ಲಾ ಭಾರತೀಯ ಸೇನೆಗೆ ಸಾಮಾನ್ಯ ಸೈನಿಕನಾಗಿ ಸೇವೆಗೆ ಸೇರಿ, ಜಮ್ಮು-ಕಾಶ್ಮೀರ ಮತ್ತು ಮಣಿಪುರಗಳಲ್ಲಿ ಆಂತರಿಕ ಸಶಸ್ತ್ರ ಬಂಡಾಯಗಳ ವಿರುದ್ಧದ ಹೋರಾಟದಲ್ಲಿ ಪಾಲೊಂಡಿದ್ದಾರೆ. ಅವರ ಸೇವೆ ಮನ್ನಿಸಿ 2014ರಲ್ಲಿ ರಾಷ್ಟ್ಪತಿ ಅವರಿಗೆ ಜೂನಿಯರ್ ಕಮೀಚನ್ ಅಧಿಕಾರಿ ದರ್ಜಗೆ ಬಡ್ತಿ ನೀಡಿದ್ದಾರೆ.
ನಿವೃತ್ತಿ ನಂತರ ಅವರು ಅಸ್ಸಾಂ ಗಡಿ ಭದ್ರತಾ ಪಡೆಗೆ ಎಸ್‍ಐ ಎಂದು ನೇಮಕಗೊಂಡಿದ್ದರು. ಈಗ ಫಾರಿನರ್ಸ್ ಟ್ರಿಬ್ಯುನಲ್ (ಎಫ್‍ಟಿ) ಸೂಚನೆಯ ಮೇರೆಗೆ ಅದೇ ಪೊಲೀಸರೇ ಅವರನ್ನು ಅರೆಸ್ಟಟ ಮಾಡಿದ್ದಾರೆ. ಅವರನ್ನು ಈಗ ಗೋಲ್‍ಪಾರಾ ಡಿಟೆನ್ಸನ್ ಕೇಂದ್ರದಲ್ಲಿ ಇಡಲಾಗಿದೆ. ಸನಾವುಲ್ಲಾ ಬಂಧನದ ವಿರುದ್ಧ ಹೈಕೋರ್ಟಿಗೆ ಹೋಗಲಿರುವ ವಕೀಲ ಅಮಾನ್ ವಡುದ್ ‘ಕ್ವಿಂಟ್’ನೊಂದಿಗೆ ಮಾತನಾಡಿ, ಫಾರಿನರ್ಸ್ ಟ್ರಿಬ್ಯುನಲ್ ಸರಿಯಾದ ತನಿಖೆ ಮಾಡದೇ ಸನಾವುಲ್ಲಾ ಅವರನ್ನು ವಿದೇಶಿ ನಾಗರಿಕ ಎಂದು ಹೇಳಿರುವುದು ಅಕ್ಷಮ್ಯ, 30 ವರ್ಷ ಈ ದೇಶದ ಸೇನೆಯ ಭಾಗವಾಗಿದ್ದವರಿಗೇ ಈ ಸ್ಥಿತಿಯಾದರೆ ಜನಸಾಮಾನ್ಯರ ಪಾಡೇನು? ಎಂದು ಪ್ರಶ್ನಿಸಿದ್ದಾರೆ.
ಅಸ್ಸಾಂ ಗಡಿ ಭದ್ರತಾ ಪೊಲೀಸರ5ನ್ನೂ ದೂರಿರುವ ಅವರು, ವೆರಿಫಿಕೆಷನ್ ರಿಪೋರ್ಟಿನಲ್ಲಿ ಸನಾವುಲ್ಲಾ ಒಬ್ಬ ದಿನಗೂಲಿ ಕಾರ್ಮಿಕ ಎಂದು ಉಲ್ಲೇಖಿಸಿದ್ದಾರೆ ಎಂದೂ ತಿಳಿಸಿದ್ದಾರೆ. ಎಫ್‍ಟಿ ವರದಿಯಲ್ಲಿ ಸನಾವುಲ್ಲಾ ವಿದೇಶಿ ಎಂದು ನಿರ್ಧರಿಸಲು, ‘1986ರ ಮತದಾರರ ಪಟ್ಟಿಯಲ್ಲಿ 20 ವರ್ಷದವರಾಗಿದ್ದ ಅವರು ತಮ್ಮ ಹೆಸರನ್ನು ನೋಂದಾಯಿಸಿರಲಿಲ್ಲ’ ಎಂಬ ವಿಚುತ್ರ ಕಾರಣವನ್ನೂ ನೀಡಲಾಗಿದೆ. ಆದರೆ, ಮತದಾನದ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿದ್ದು 1989ರಲ್ಲಿ ಎಂಬ ವಾಸ್ತವವನ್ನೂ ಕಡೆಗಣಿಸಲಾಗಿದೆ.
‘ಕೋರ್ಟಿನ ಆದೇಶದ ಮೇರೆಗೆ ಸನಾವುಲ್ಲಾ ಅವರನ್ನು ನಾವು ಬಂಧಿಸಿದ್ದೇವೆ. ಎಫ್‍ಟಿ ವರದಿಯೇ ನಮಗೆ ಫೈನಲ್/ ಸನಾವುಲ್ಲಾ ಅವರು ಕೋರ್ಟಿಗೆ ಹೋಗಲು ಅವಕಾಶಗಳಿವೆ’ ಎಂದು ಅನಿನ್‍ಗಾಂವ್‍ನ ಹೆಚ್ಚುವರಿ ಎಸ್‍ಪಿ ಸಂಜೀಬ್ ಸೈಕಿಯಾ ತಿಳಿಸಿದ್ದಾರೆ.
ಕಳೆದ ವರ್ಷವೇ ಈ ಬಗ್ಗೆ ನೋಟಿಸ್ ಬಂದಾದ ಮೇಲೆ ಸನಾವುಲ್ಲಾ ವಿವಿಧ ಪೊಲೀಸ್ ಠಾಣೆಗಳಿಗೆ ತೆರಳಿ ವಿವರ ಪರಿಶೀಲಿಸಿದ್ದಾರೆ. ಆದರೆ, ಬೋಕೊ ಎಫ್‍ಟಿ ವರದಿಯಲ್ಲಿ ಆಗಿಚ್ಯಾ ಗ್ರಾಮದ ಮೊಹಮ್ಮದ್ ಸಮಸ್ಯಲ್ ಹಕ್ ಎಂಬುವರ ಹೆಸರಿದ್ದು, ಅದನ್ನೇ ತಪ್ಪಾಗಿ ನನ್ನ ಮೇಲೆ ಕೇಸಉ ಹೂಡಲು ಎಫ್‍ಟಿ ಬಳಸಿಕೊಂಡಿದ್ದಾರೆ…. 30 ವರ್ಷ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನನಗೆ ವಿದೇಶಿ ಪಟ್ಟ ಕಟ್ಟಿ ಬಂಧನದಲ್ಲಿ ಇಡುವ ಉಡುಗೊರೆಯನ್ನು ನೀಡಲಾಗುತ್ತಿದೆ’ ಎಂದು ಸ್ವತ: ಸನಾವುಲ್ಲಾ ನ್ಯೂಸ್ 18 ಮಾಧ್ಯಮದ ಮುಂದೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...