Homeಕರ್ನಾಟಕಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಹಲವು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದೆ ರೈತರು ಕಂಗಾಲಾಗಿದ್ದಾರೆ.

- Advertisement -
- Advertisement -

ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆನಾಶದಿಂದಾಗಿ ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು ನಗರದ ಹಲವೆಡೆ ಮನೆಗೋಡೆಗಳು ಕುರಿದು ಬಿದ್ದಿವೆ. ಕಾಡುಗೋಡಿ ಸಮೀಪದ ರೈಲ್ವೆ ಹಳಿ ಸಮೀಪದ ಅಂಗಡಿಯೊಂದು ಕುಸಿದಿದ್ದು, ಕಟ್ಟಡದಲ್ಲೇ ಮಲಗಿದ್ದ ವೃದ್ಧರೊಬ್ಬರನ್ನು ಮುಂಜಾಗ್ರತೆ ವಹಿಸಿ ರಕ್ಷಿಸಲಾಗಿದೆ. ಶಂಕರಮಠ ವಾರ್ಡ್‌ನ ಆಂಜನೇಯ ಗುಡ್ಡ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಾದರಾಯನಪುರದ ಹರಿಶ್ಚಂದ್ರ ದೇವಸ್ಥಾನ ಸಮೀಪ ಮಂಜುಗಡ್ಡೆ ತಯಾರಿಕಾ ಕಾರ್ಖಾನೆಯ ಗೋದಾಮಿನ ಗೋಡೆ ನೆಲಕ್ಕುರುಳಿದ್ದು, ಪಕ್ಕದಲ್ಲಿದ್ದ ಆಟೋಗಳು ಜಖಂಗೊಂಡಿವೆ.  ಹಲವೆಡೆ ಮರಗಳು ಮುರಿದುಬಿದ್ದಿರುವ ವರದಿಗಳಾಗಿವೆ. ಕ್ವೀನ್‌ ರಸ್ತೆ, ಮಹಾವೀರ ರಸ್ತೆಯಲ್ಲಿ ವಾರ್ತಾ ಇಲಾಖೆ ಕಚೇರಿ ಸಮೀಪ, ಥಣಿಸಂದ್ರ, ಕೆ.ಆರ್‌‌.ಪುರದಿಂದ ಟಿ.ಸಿ.ಪಾಳ್ಯಕ್ಕೆ ರಸ್ತೆ, ಬನಶಂಕರಿ 2ನೇ ಹಂತದಲ್ಲಿ ಮರಗಳು ಮುರಿದುಬಿದ್ದಿವೆ. ಬಹುತೇಕ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರಾ ಮಳೆಗೆ ರಸ್ತೆಗಳು ಕಾಣದಂತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ತತ್ತರ

ಮೈಸೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿವೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕಳೆದ ಅಕ್ಟೋಬರ್‌ 19ರಂದು ಬೆಟ್ಟದ ನಂದಿ ಮಾರ್ಗದಲ್ಲಿ ಮೊದಲ ಬಾರಿಗೆ ಕುಸಿತ ಉಂಟಾಗಿತ್ತು. ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಭಾರಿಗೆ ಬೆಟ್ಟ ಕುಸಿದಿದೆ. ರಸ್ತೆ ಕುಸಿತದಿಂದಾಗಿ ಕೆಲವೆಡೆ ಮರಗಳು ನೆಲಕ್ಕುರುಳಿವೆ.

ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿ ಮನೆ ಛಾವಣಿ ಕುಸಿದಿದೆ. ಅಶೋಕರಸ್ತೆಯಲ್ಲಿ ಮಳಿಗೆಯ ಗೋಡೆ ಕುಸಿದಿದೆ. ಅಶೋಕ ರಸ್ತೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಸಮೀಪದಲ್ಲೇ ಇದ್ದವರಿಗೆ ಗೋಡೆ ಅಲುಗಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ಮನೆಗೋಡೆ ಕುಸಿದು, ಬಡ ಕುಟುಂಬ ಕಂಗಾಲಾಗಿದೆ.

ಬೆಳೆನಾಶ, ರೈತ ಕಂಗಾಲು

ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ರಾಗಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ. 14,500 ಹೆಕ್ಟೇರ್‌ ಬೆಳೆ ಕೈತಪ್ಪಿದೆ ಎಂದು ತುಮಕೂರು ಜಿಲ್ಲಾ ವರದಿ ಹೇಳಿದೆ. ಚಿಕ್ಕ ಬಳ್ಳಾಪುರದಲ್ಲಿ 905.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ.

ಕೋಲಾರ ಜಿಲ್ಲೆಯೊಂದರಲ್ಲಿಯೇ ರಾಗಿ 36 ಸಾವಿರ ಹೆಕ್ಟೇರ್‌ ರಾಗಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ. 5.78 ಕೋಟಿ ಮೌಲ್ಯದ ತರಕಾರಿ, ಸುಮಾರು 1,370 ಹೆಕ್ಟೇರ್‌ಗಳಲ್ಲಿ ಕೊಳೆತು ಹೋಗುತ್ತಿದೆ. ರಾಗಿ, ಮುಸುಕಿನ ಜೋಳ, ನೆಲಗಡಲೆ, ತೊಗರಿ, ಭತ್ತ ಸೇರಿದಂತೆ 34,554 ಹೆಕ್ಟೇರ್‌ ಬೆಳೆ ರೈತರ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಚೆನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆಗಳಲ್ಲಿ 2,150 ಹೆಕ್ಟೇ‌ರ್‌ ಪ್ರದೇಶದ ಭತ್ತ ರೈತರ ಕೈ ಸೇರುವುದು ಅನುಮಾನ. ಶಿವಮೊಗ್ಗ ಜಿಲ್ಲೆಯಲ್ಲಿ ಕಟಾವಿಗೆ ಅಡ್ಡಿಉಂಟಾಗಿದೆ. ಜಿಲ್ಲೆಯಲ್ಲಿನ ಕೃಷಿ ಭೂಮಿಯಲ್ಲಿ 78,100 ಹೆಕ್ಟೇರ್‌‌ನಲ್ಲಿ ಭತ್ತ, 52,000 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕಟಾವು ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಹಾಸನ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಾಗಿ ಮತ್ತು ಮೆಕ್ಕೆಜೋಳ ಬೆಳೆದಿದ್ದ ರೈತರು ಪರಿತಪಿಸುತ್ತಿದ್ದಾರೆ. 675 ಹೆಕ್ಟೇರ್‌‌ ಮೆಕ್ಕೆಜೋಳ, 19,403 ಹೆಕ್ಟೇರ್‌‌ ರಾಗಿ ನೆಲಕಚ್ಚಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಪರಿಸ್ಥಿತಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಅಂದರಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಾಮರಾಜನಗರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ನ.19, 20ರಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೂರು ದಶಕಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದ ಎಂದು ವರದಿಗಳು ಹೇಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿರಿ: ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...