Homeಕರ್ನಾಟಕಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಹಲವು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದೆ ರೈತರು ಕಂಗಾಲಾಗಿದ್ದಾರೆ.

- Advertisement -
- Advertisement -

ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆನಾಶದಿಂದಾಗಿ ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು ನಗರದ ಹಲವೆಡೆ ಮನೆಗೋಡೆಗಳು ಕುರಿದು ಬಿದ್ದಿವೆ. ಕಾಡುಗೋಡಿ ಸಮೀಪದ ರೈಲ್ವೆ ಹಳಿ ಸಮೀಪದ ಅಂಗಡಿಯೊಂದು ಕುಸಿದಿದ್ದು, ಕಟ್ಟಡದಲ್ಲೇ ಮಲಗಿದ್ದ ವೃದ್ಧರೊಬ್ಬರನ್ನು ಮುಂಜಾಗ್ರತೆ ವಹಿಸಿ ರಕ್ಷಿಸಲಾಗಿದೆ. ಶಂಕರಮಠ ವಾರ್ಡ್‌ನ ಆಂಜನೇಯ ಗುಡ್ಡ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಾದರಾಯನಪುರದ ಹರಿಶ್ಚಂದ್ರ ದೇವಸ್ಥಾನ ಸಮೀಪ ಮಂಜುಗಡ್ಡೆ ತಯಾರಿಕಾ ಕಾರ್ಖಾನೆಯ ಗೋದಾಮಿನ ಗೋಡೆ ನೆಲಕ್ಕುರುಳಿದ್ದು, ಪಕ್ಕದಲ್ಲಿದ್ದ ಆಟೋಗಳು ಜಖಂಗೊಂಡಿವೆ.  ಹಲವೆಡೆ ಮರಗಳು ಮುರಿದುಬಿದ್ದಿರುವ ವರದಿಗಳಾಗಿವೆ. ಕ್ವೀನ್‌ ರಸ್ತೆ, ಮಹಾವೀರ ರಸ್ತೆಯಲ್ಲಿ ವಾರ್ತಾ ಇಲಾಖೆ ಕಚೇರಿ ಸಮೀಪ, ಥಣಿಸಂದ್ರ, ಕೆ.ಆರ್‌‌.ಪುರದಿಂದ ಟಿ.ಸಿ.ಪಾಳ್ಯಕ್ಕೆ ರಸ್ತೆ, ಬನಶಂಕರಿ 2ನೇ ಹಂತದಲ್ಲಿ ಮರಗಳು ಮುರಿದುಬಿದ್ದಿವೆ. ಬಹುತೇಕ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರಾ ಮಳೆಗೆ ರಸ್ತೆಗಳು ಕಾಣದಂತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ತತ್ತರ

ಮೈಸೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿವೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕಳೆದ ಅಕ್ಟೋಬರ್‌ 19ರಂದು ಬೆಟ್ಟದ ನಂದಿ ಮಾರ್ಗದಲ್ಲಿ ಮೊದಲ ಬಾರಿಗೆ ಕುಸಿತ ಉಂಟಾಗಿತ್ತು. ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಭಾರಿಗೆ ಬೆಟ್ಟ ಕುಸಿದಿದೆ. ರಸ್ತೆ ಕುಸಿತದಿಂದಾಗಿ ಕೆಲವೆಡೆ ಮರಗಳು ನೆಲಕ್ಕುರುಳಿವೆ.

ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿ ಮನೆ ಛಾವಣಿ ಕುಸಿದಿದೆ. ಅಶೋಕರಸ್ತೆಯಲ್ಲಿ ಮಳಿಗೆಯ ಗೋಡೆ ಕುಸಿದಿದೆ. ಅಶೋಕ ರಸ್ತೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಸಮೀಪದಲ್ಲೇ ಇದ್ದವರಿಗೆ ಗೋಡೆ ಅಲುಗಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ಮನೆಗೋಡೆ ಕುಸಿದು, ಬಡ ಕುಟುಂಬ ಕಂಗಾಲಾಗಿದೆ.

ಬೆಳೆನಾಶ, ರೈತ ಕಂಗಾಲು

ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ರಾಗಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ. 14,500 ಹೆಕ್ಟೇರ್‌ ಬೆಳೆ ಕೈತಪ್ಪಿದೆ ಎಂದು ತುಮಕೂರು ಜಿಲ್ಲಾ ವರದಿ ಹೇಳಿದೆ. ಚಿಕ್ಕ ಬಳ್ಳಾಪುರದಲ್ಲಿ 905.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ.

ಕೋಲಾರ ಜಿಲ್ಲೆಯೊಂದರಲ್ಲಿಯೇ ರಾಗಿ 36 ಸಾವಿರ ಹೆಕ್ಟೇರ್‌ ರಾಗಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ. 5.78 ಕೋಟಿ ಮೌಲ್ಯದ ತರಕಾರಿ, ಸುಮಾರು 1,370 ಹೆಕ್ಟೇರ್‌ಗಳಲ್ಲಿ ಕೊಳೆತು ಹೋಗುತ್ತಿದೆ. ರಾಗಿ, ಮುಸುಕಿನ ಜೋಳ, ನೆಲಗಡಲೆ, ತೊಗರಿ, ಭತ್ತ ಸೇರಿದಂತೆ 34,554 ಹೆಕ್ಟೇರ್‌ ಬೆಳೆ ರೈತರ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಚೆನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆಗಳಲ್ಲಿ 2,150 ಹೆಕ್ಟೇ‌ರ್‌ ಪ್ರದೇಶದ ಭತ್ತ ರೈತರ ಕೈ ಸೇರುವುದು ಅನುಮಾನ. ಶಿವಮೊಗ್ಗ ಜಿಲ್ಲೆಯಲ್ಲಿ ಕಟಾವಿಗೆ ಅಡ್ಡಿಉಂಟಾಗಿದೆ. ಜಿಲ್ಲೆಯಲ್ಲಿನ ಕೃಷಿ ಭೂಮಿಯಲ್ಲಿ 78,100 ಹೆಕ್ಟೇರ್‌‌ನಲ್ಲಿ ಭತ್ತ, 52,000 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕಟಾವು ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಹಾಸನ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಾಗಿ ಮತ್ತು ಮೆಕ್ಕೆಜೋಳ ಬೆಳೆದಿದ್ದ ರೈತರು ಪರಿತಪಿಸುತ್ತಿದ್ದಾರೆ. 675 ಹೆಕ್ಟೇರ್‌‌ ಮೆಕ್ಕೆಜೋಳ, 19,403 ಹೆಕ್ಟೇರ್‌‌ ರಾಗಿ ನೆಲಕಚ್ಚಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಪರಿಸ್ಥಿತಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಅಂದರಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಾಮರಾಜನಗರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ನ.19, 20ರಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೂರು ದಶಕಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದ ಎಂದು ವರದಿಗಳು ಹೇಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿರಿ: ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...