“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.
ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.
ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”
"First they ignore you, then they laugh at you, then they fight you, and then you win."#FarmersProtest #FarmLaws pic.twitter.com/XX6hDX4OR9
— Advaid അദ്വൈത് (@Advaidism) November 19, 2021
ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!
ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.
“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.
देश के अन्नदाता ने सत्याग्रह से अहंकार का सर झुका दिया।
अन्याय के खिलाफ़ ये जीत मुबारक हो!जय हिंद, जय हिंद का किसान!#FarmersProtest https://t.co/enrWm6f3Sq
— Rahul Gandhi (@RahulGandhi) November 19, 2021
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.
My heartfelt congratulations to every single farmer who fought relentlessly and were not fazed by the cruelty with which @BJP4India treated you. This is YOUR VICTORY!
My deepest condolences to everyone who lost their loved ones in this fight.#FarmLaws
— Mamata Banerjee (@MamataOfficial) November 19, 2021
ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.
.@narendramodi & @BJP4India has withdrawn anti-farmer laws – a result of relentless opposition by farmers & @INCIndia.
My sincere thanks to all the farmers, Congress leaders & concerned citizens of our country.#FarmLaws
— Siddaramaiah (@siddaramaiah) November 19, 2021
ಡಿ.ಕೆ.ಶಿವಕುಮಾರ್: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”
“ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”
ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು. #FarmLaws
1/2
— DK Shivakumar (@DKShivakumar) November 19, 2021
ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಲಾಗಿದೆ.
CPIM congratulates and extends its warm greetings to Samyukt Kisan Morcha and lakhs of fighting Kisans!
Huge Victory for united Kisan movement led by SKM.
Every dirty trick by Modi Govt defeated.
Authoritarian Regime forced to withdraw the 3 black #FarmLaws pic.twitter.com/Fg611C3gjZ— CPI (M) (@cpimspeak) November 19, 2021
ಎಚ್.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್ಕೆಡಿ ಅವರ ಟ್ವೀಟ್ಗಳು ಹೀಗಿವೆ:
“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”
“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.”
“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”
“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”
ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ.1/4
— H D Kumaraswamy (@hd_kumaraswamy) November 19, 2021
“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
Huge Victory of Farmers' Movement! ?
Modi Govt has withdrawn the 3 black #FarmLaws fearing loss in the upcoming elections.
PM Modi should apologise to the families of all those farmers who've lost their lives in the struggle for justice!
— AAP (@AamAadmiParty) November 19, 2021


