Homeಚಳವಳಿರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

- Advertisement -
- Advertisement -

ರೈತ ಹೋರಾಟ ಆರಂಭವಾದಾಗಿನಿಂದ ರೈತರನ್ನು ಒಕ್ಕೂಟ ಸರ್ಕರ ದೂಷಿಸುತ್ತಲೇ ಇತ್ತು. ದಲ್ಲಾಳಿಗಳ ಹೋರಾಟ, ಖಲಿಸ್ತಾನಿಗಳ ಹೋರಾಟ, ಪಂಜಾಬ್ ರೈತರ ಹೋರಾಟ, ಸಿಖ್ಖರ ಹೋರಾಟ ಎಂದು ಚಳವಳಿಯನ್ನು ಹತ್ತಿಕ್ಕುವ ಕೆಲಸ ಮಾಡಿತ್ತು.

ಆದರೆ, ರೈತರು ಈ ಯಾವ ಷಡ್ಯಂತರಕ್ಕೂ ಹೆದರದೆ ಹೋರಾಟ ಮುಂದುವರೆಸಿದರು. ಇಂದು( ಶುಕ್ರವಾರ) ಅದಕ್ಕೆ ಪ್ರತಿಫಲ ಸಿಕ್ಕಿದ್ದು ರೈತ ಹೋರಾಟಕ್ಕೆ ಜಯ ಸಿಕ್ಕಿದೆ. ಮೂರು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಸರ್ಕಾರ ಘೋಷಿಸಿದೆ. ‌ಆದರೆ, ಈ ಹೋರಾಟಕ್ಕೆ ಬೆಂಬಲ ನೀಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾದವರರನ್ನು ಮರೆಯಬಾರದು. ಅವರಲ್ಲಿ ಆಯ್ದ ಕೆಲವರ ಪಟ್ಟಿ ಇಲ್ಲಿದೆ.

೧. ದಿಶಾ ರವಿ: ಬೆಂಗಳೂರಿನ ಇಪ್ಪತ್ತೊಂದು ವರ್ಷದ ಯುವ ಹೋರಾಟಗಾರ್ತಿ ದಿಶಾ ರವಿಯನ್ನು ದೇಶದ್ರೋಹ ಮುಂತಾದ ಗಂಭೀರ ಆರೋಪಗಳ ಮೇಲೆ ದೆಹಲಿ ಪೊಲೀಸರು ಬಂಧಿಸಿದ್ದರು. ರೈತ ಹೋರಾಟದ ಕುರಿತು ಹಾಗೂ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಳಸಿದ ಕೆಲವು ವಿಧಾನಗಳನ್ನು ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದು ಸಾರ್ವಜನಿಕ ಟೂಲ್‌ಕಿಟ್ ಜಾರಿಯಲ್ಲಿತ್ತು.

ಇದನ್ನು ದೇಶದ ವಿರುದ್ಧ ನಡೆಯುತ್ತಿರುವ ಅಂತಾರಾಷ್ಟ್ರೀಯ ಷಡ್ಯಂತ್ರವೆಂದು ಬಿಂಬಿಸಿ, ಆ ದಾಖಲೆಯನ್ನು ಸಂಪಾದಿಸಿದವರಲ್ಲೊಬ್ಬರಾದ ಕಾರಣಕ್ಕೆ ದಿಶಾ ಅವರನ್ನು ಬಂಧಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ವಿರುದ್ಧ ತೇಜೋವಧೆ ನಡೆಸಲಾಗಿತ್ತು.

ದಿಶಾ ರವಿ

೨. ಗ್ರೇಟಾ ಥನ್‌ಬರ್ಗ್‌:

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌‌ಬರ್ಗ್‌ ತನ್ನ ಟ್ವೀಟ್‌ನಲ್ಲಿ, “ಭಾರತೀಯ ರೈತರ ಹೋರಾಟದ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ” ಎಂದು ಎಂದು ಸಿಎನ್‌ಎನ್‌ ವರದಿಯನ್ನು ಹಂಚಿಕೊಂಡು ಹೋರಾಟಕ್ಕೆ ಬೆಂಬಲ ನೀಡಿದ್ದರು.

ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಇವರ ವಿರುದ್ದ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದರು. ಇಷ್ಟೇ ಅಲ್ಲದೆ ಅವರ ಹಳೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಿ ಮೆರೆದಿದ್ದರು.

೩. ರಿಹಾನ್ನಾ:

ಅಂತರರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.  ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದರು. ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟಕ್ಕೆ ಬೆಂಬಲ ಬರಲು ಕಾರಣವಾಗಿತ್ತು.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿತ್ತು. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಇನ್ನು ಕೆಲವರ ಆಕೆಯ ಕಾರ್ಯಕ್ರಮದ ವಿಡಿಯೋ, ಫೋಟೋಗಳನ್ನು ಟ್ವೀಟ್ ಮಾಡಿ ಟೀಕಿಸಿದ್ದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರಿಹಾನ್ನಾ
ಗ್ರೇಟಾ ಥನ್‌ಬರ್ಗ್‌ ಮತ್ತು ರಿಹಾನ್ನಾ

೪. ಲಿಲ್ಲಿಸಿಂಗ್: ಲಿಲ್ಲಿ ಸಿಂಗ್ ಕೆನಡಾ ಮೂಲದ ಯೂಟ್ಯೂಬರ್, ಹಾಸ್ಯನಟಿಯಾಗಿದ್ದಾರೆ. ಅಂತರಾಷ್ಟ್ರೀಯ ಖ್ಯಾತಿ ಹೊಂದಿರುವ ಲಿಲ್ಲಿ ಸಿಂಗ್ ರೈತ ಹೋರಾಟಕ್ಕೆ ಬೆಂಬಲ ನೀಡಿದ್ದರು. 63 ನೇ ಗ್ರ್ಯಾಮಿ ಪ್ರಶಸ್ತಿ ವೇದಿಕೆಯನ್ನು ಅವರು ರೈತ ಆಂದೋಲನವನ್ನು ಬೆಂಬಲಿಸಲು ಬಳಸಿಕೊಂಡರು. ಅವರು ಗ್ರ್ಯಾಮಿ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸುವಾಗ “ನಾನು ರೈತರ ಜೊತೆ ನಿಲ್ಲುತ್ತೇನೆ” ಎಂದು ಬರೆದಿರುವ ಮಾಸ್ಕ್‌ ಅನ್ನು ಧರಿಸಿದ್ದರು.

ಹೋರಾಟಕ್ಕೆ ಮತ್ತೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’
ಲಿಲ್ಲಿಸಿಂಗ್

೫. ಸ್ವರ ಭಾಸ್ಕರ್: 

ಬಾಲಿವುಡ್ ನಟಿ ಸ್ವರ ಭಾಸ್ಕರ್ ರೈತ ಹೋರಾಟದ ಆರಂಭದಿಂದಲೂ ಬೆಂಬಲ ನೀಡಿದ್ದರು. ಬೆಂಬಲ ನೀಡುವುದರ ಜೊತೆಗೆ ಸ್ವತಃ ಪ್ರತಿಭಟನಾ ನಿರತ ಸಿಂಘು ಗಡಿಗೆ ಭೇಟಿ ನೀಡಿ ರೈತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

೬. ತಾಪ್ಸಿ ಪನ್ನು:

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಖ್ಯಾತ ಬಾಲಿವುಡ್ ನಟಿ ತಾಪ್ಸಿ ಪನ್ನು ರೈತ ಹೋರಾಟಕ್ಕೂ ಬೆಂಬಲ ನೀಡಿದ್ದರು. ಗಾಯಕಿ ರಿಹಾನ್ನಾ ವಿರುದ್ಧದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದ ನಟಿ,  “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಅದರ ಬದಲು ಉಳಿದವರಿಗೆ ಪ್ರೊಪಗಂಡಾ ಕಲಿಸುವ ಟೀಚರ್‌ ಆಗಬೇಡಿ” ಎಂದು ತೀಕ್ಷ್ಣ ಪ್ರತ್ಯುತ್ತರ ನೀಡಿದ್ದರು.

ಇದರಿಂದ ನಟಿ ತಾಪ್ಸಿ ಪನ್ನು ಅವರ ಆಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

ಸ್ವರಾ ಭಾಸ್ಕರ್‌ ಮತ್ತು ತಾಪ್ಸಿ ಪನ್ನು

೭. ಸೋನಾಕ್ಷಿ ಸಿನ್ಹಾ:

ರೈತ ಹೋರಾಟದ ಬಗ್ಗೆ ವಿದೇಶಿಗರು ಮಾತನಾಡುತ್ತಿದ್ದಾರೆ ಇದು ಪ್ರೊಪಗಾಂಡ ಎಂದೆಲ್ಲ ಹೇಳುತ್ತಿದ್ದ ಸೆಲಬ್ರಿಟಿಗಳ ಮುಖಕ್ಕೆ ರಾಚುವಂತೆ ಬಾಲಿವುಡ್ ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದರು.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಹೇಳಿದ್ದರು.

Sonakshi Sinha Beautiful In Saree Hd Wallpapers - Sonakshi Sinha New Hd - 1600x1200 Wallpaper - teahub.io
ಸೋನಾಕ್ಷಿ ಸಿನ್ಹಾ

೮. ದಿಲ್ಜಿತ್ ದೋಸಾಂಜ್: 

ಬಾಲಿವುಡ್, ಪಂಜಾಬಿ ನಟ, ಗಾಯಕ ದಿಲ್ಜಿತ್ ದೋಸಾಂಜ್ ರೈತ ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿದ್ದಾರೆ. ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ. ನಟಿ ಕಂಗನಾ ರಣಾವತ್ ವಿರುದ್ಧ ದನಿ ಎತ್ತಿದವರಲ್ಲಿ ಪ್ರಮುಖರು.

ರೈತರಿಗೆ ಪಿಜ್ಜಾ ವಿರಣೆ ಬಗ್ಗೆ ಟೀಕೆಗಳು ವ್ಯಕ್ತವಾದಾಗ ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿ, “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದರು. ಜೊತೆಗೆ ಚಳಿಗಾಲದ ಹೊದಿಕೆಗಳಿಗಾಗಿ ರೈತರಿಗೆ 1 ಕೋಟಿ ರೂಪಾಯಿ ದಾನ ಮಾಡಿದ್ದರು.

ದಿಲ್ಜಿತ್ ದೋಸಾಂಜ್

ಇತ್ತ ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತಾ ಕಪೂರ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಡಳಿತಾರೂಡರ ಮರ್ಜಿಗೆ ಒಳಗಾಗದೆ, ರೈತರ ಹೋರಾಟವನ್ನು ಬೆಂಬಲಿಸಿದ ಇವರೆಲ್ಲರೂ ಧನ್ಯವಾದಗಳು.

  2. ಇವರ ಎಲ್ಲಾರ ಗುರುಗಳು ಭಯೋತ್ಪಾದಕ ಸಂಘಟನೆಯ ಅಂತಾರಾಷ್ಟ್ರೀಯ ಮುಖಂಡರು ಅನ್ನೋದು ಈಗ ಸಾಬೀತು ತಾವೇ ತಮ್ಮ ವರದಿ ಮೂಲಕ ತಿಳಿಸಿ ,ಬೆತ್ತಲು ಮಾಡಿದ್ದು ಒಳಿತೇ ಆಗಿದೆ .ಇದರಲ್ಲಿ ಬಹುಪಾಲು ವಿದೇಶಿ ಮೂಲದವರೇ ಇರೋದು ಸಾಬೀತು ತಾವೇ ಮಾಡಿದ್ದೀರಿ ,ಇವರಿಗೆ ಗುಲಾಮಗಿರಿ ಬೇಕೆ ವಿನಹ ದೇಶದ ಭದ್ರತೆ ,ಬೆಳವಣಿಗೆಯ ಅಗತ್ಯತೆ ಇಲ್ಲಾ,ಮುಂದಿನ ದಿನಗಳಲ್ಲಿ ನಿಮ್ಮಗಳ ಮತ್ತಷ್ಟು ಬಂಡವಾಳ ಹೊರಬರೋದು ಕಂಡಿತ ಆಗ ನಿಮಗೆ ಆಪ್ಘನ್,ಪಾಕ್ ,ಚೀನಾ ಗಳೇ ಗಟ್ಟಿ ,ಭಾರತದಲ್ಲಿ ದೇಶ ದ್ರೋಹಿಗಳಿಗೆ ಸ್ಥಳ ಇರಲ್ಲಾ .

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...