Homeಸಿನಿಮಾಕ್ರೀಡೆಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

ಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

- Advertisement -
- Advertisement -

ಐಪಿಎಲ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿದ್ದ ಬೆಂಗಳೂರಿಗರ ನೆಚ್ಚಿನ ಆಟಗಾರ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಇಂದು ಎಲ್ಲಾ ವಿಭಾಗದ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದು ಹಲವು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

360 ಡಿಗ್ರಿ ಆಟಗಾರ ಎಂದೇ ಖ್ಯಾತರಾದ ಡಿವಿಲಿಯರ್ಸ್ ಚೆಂಡನ್ನು ಅಂಗಳದ ಎಲ್ಲಾ ಮೂಲೆಗೂ ಅಟ್ಟುವುದರಲ್ಲಿ ಪ್ರಸಿದ್ದರಾಗಿದ್ದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಲೀಲಾಜಾಲವಾಗಿ ಬ್ಯಾಟ್ ಬೀಸಿ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಅವರು ಈಗ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಅಭಿಮಾನಿಗಳಿಗೆ ದೊಡ್ಡ ನಷ್ಟವಾಗಿದೆ.

ಎಬಿಡಿ ಎಂದೇ ಕರೆಯಲ್ಪಡುತ್ತಿದ್ದ ಅವರು ಬೆಂಗಳೂರು ಮತ್ತು ಕರ್ನಾಟಕದ ಜೊತೆಗೆ ವಿಶಿಷ್ಟ ನಂಟು ಹೊಂದಿದ್ದರು. ಅವರ ಅಭಿಮಾನಿಗಳು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ. ನಟ ಯೂಟ್ಯೂಬರ್ ದಾನಿಷ್ ಸೇಠ್ ಜೊತೆಗೆ ಎಬಿಡಿ ಕನ್ನಡದಲ್ಲಿ ಮಾತಾಡಿ, ಕನ್ನಡ ಹಾಡು ಹಾಡಿ ಗಮನ ಸೆಳೆದಿದ್ದರು.

ತಮ್ಮ ವಿದಾಯವನ್ನು ಟ್ವಿಟರ್‌ನಲ್ಲಿ ಘೋಷಿಸಿರುವ ಅವರು, “ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಅಂಗಳದಲ್ಲಿ ಆನಂದ ಮತ್ತು ಮಿತಿಯಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ನನ್ನೊಳಗಿನ ಜ್ವಾಲೆಯು ಅಷ್ಟು ಪ್ರಕಾಶಮಾನವಾಗಿಲ್ಲದಿರುವಾಗ ಈಗ 37 ನೇ ವಯಸ್ಸಿನಲ್ಲಿ ವಿದಾಯ ಘೋಷಿಸುತ್ತಿದ್ದೇನೆ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಹೇಳಿದ್ದಾರೆ.

“ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ, ಮತ್ತು ಅದು ಹಠಾತ್ತಾಗಿ ಕಂಡರೂ ಸಹ, ಅದಕ್ಕಾಗಿಯೇ ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ನಾನು ನನ್ನ ಸಮಯವನ್ನು ಅನುಭವಿಸಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಕರುಣೆ ತೋರಿದೆ. ಟೈಟಾನ್ಸ್, ಪ್ರೋಟೀಸ್, ಅಥವಾ RCB ಅಥವಾ ಪ್ರಪಂಚದಾದ್ಯಂತ ಯಾವುದೇ ಲೀಗ್‌ನಲ್ಲಿ ಆಡುತ್ತಿರಲಿ ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ ಮತ್ತು ಅದಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ಕೊನೆಯದಾಗಿ, ನನ್ನ ಕುಟುಂಬ – ನನ್ನ ಹೆತ್ತವರು, ನನ್ನ ಸಹೋದರರು, ನನ್ನ ಹೆಂಡತಿ ನನಗಾಗಿ ಬಹಳ ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 184 ಪಂದ್ಯಗಳಲ್ಲಿ 39.70 ಸರಾಸರಿಯಲ್ಲಿ 5,162 ರನ್ ಗಳಿಸುವ ಮೂಲಕ ಸಾರ್ವಕಾಲಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರ ಸ್ಟ್ರೈಕ್ ರೇಟ್ 151.68 ಆಗಿದ್ದು ಪಂದ್ಯಾವಳಿಯಲ್ಲಿ ಅಗ್ರ 20 ರನ್ ಗಳಿಸಿದವರಿಗಿಂತ ಉತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ 15 ಪಂದ್ಯಗಳನ್ನು ಆಡಿದರು, 31.30 ರ ಸರಾಸರಿಯಲ್ಲಿ 313 ರನ್ ಗಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...