Homeಸಿನಿಮಾಕ್ರೀಡೆಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

ಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

- Advertisement -
- Advertisement -

ಐಪಿಎಲ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿದ್ದ ಬೆಂಗಳೂರಿಗರ ನೆಚ್ಚಿನ ಆಟಗಾರ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಇಂದು ಎಲ್ಲಾ ವಿಭಾಗದ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದು ಹಲವು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

360 ಡಿಗ್ರಿ ಆಟಗಾರ ಎಂದೇ ಖ್ಯಾತರಾದ ಡಿವಿಲಿಯರ್ಸ್ ಚೆಂಡನ್ನು ಅಂಗಳದ ಎಲ್ಲಾ ಮೂಲೆಗೂ ಅಟ್ಟುವುದರಲ್ಲಿ ಪ್ರಸಿದ್ದರಾಗಿದ್ದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಲೀಲಾಜಾಲವಾಗಿ ಬ್ಯಾಟ್ ಬೀಸಿ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಅವರು ಈಗ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಅಭಿಮಾನಿಗಳಿಗೆ ದೊಡ್ಡ ನಷ್ಟವಾಗಿದೆ.

ಎಬಿಡಿ ಎಂದೇ ಕರೆಯಲ್ಪಡುತ್ತಿದ್ದ ಅವರು ಬೆಂಗಳೂರು ಮತ್ತು ಕರ್ನಾಟಕದ ಜೊತೆಗೆ ವಿಶಿಷ್ಟ ನಂಟು ಹೊಂದಿದ್ದರು. ಅವರ ಅಭಿಮಾನಿಗಳು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ. ನಟ ಯೂಟ್ಯೂಬರ್ ದಾನಿಷ್ ಸೇಠ್ ಜೊತೆಗೆ ಎಬಿಡಿ ಕನ್ನಡದಲ್ಲಿ ಮಾತಾಡಿ, ಕನ್ನಡ ಹಾಡು ಹಾಡಿ ಗಮನ ಸೆಳೆದಿದ್ದರು.

ತಮ್ಮ ವಿದಾಯವನ್ನು ಟ್ವಿಟರ್‌ನಲ್ಲಿ ಘೋಷಿಸಿರುವ ಅವರು, “ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಅಂಗಳದಲ್ಲಿ ಆನಂದ ಮತ್ತು ಮಿತಿಯಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ನನ್ನೊಳಗಿನ ಜ್ವಾಲೆಯು ಅಷ್ಟು ಪ್ರಕಾಶಮಾನವಾಗಿಲ್ಲದಿರುವಾಗ ಈಗ 37 ನೇ ವಯಸ್ಸಿನಲ್ಲಿ ವಿದಾಯ ಘೋಷಿಸುತ್ತಿದ್ದೇನೆ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಹೇಳಿದ್ದಾರೆ.

“ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ, ಮತ್ತು ಅದು ಹಠಾತ್ತಾಗಿ ಕಂಡರೂ ಸಹ, ಅದಕ್ಕಾಗಿಯೇ ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ನಾನು ನನ್ನ ಸಮಯವನ್ನು ಅನುಭವಿಸಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಕರುಣೆ ತೋರಿದೆ. ಟೈಟಾನ್ಸ್, ಪ್ರೋಟೀಸ್, ಅಥವಾ RCB ಅಥವಾ ಪ್ರಪಂಚದಾದ್ಯಂತ ಯಾವುದೇ ಲೀಗ್‌ನಲ್ಲಿ ಆಡುತ್ತಿರಲಿ ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ ಮತ್ತು ಅದಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ಕೊನೆಯದಾಗಿ, ನನ್ನ ಕುಟುಂಬ – ನನ್ನ ಹೆತ್ತವರು, ನನ್ನ ಸಹೋದರರು, ನನ್ನ ಹೆಂಡತಿ ನನಗಾಗಿ ಬಹಳ ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 184 ಪಂದ್ಯಗಳಲ್ಲಿ 39.70 ಸರಾಸರಿಯಲ್ಲಿ 5,162 ರನ್ ಗಳಿಸುವ ಮೂಲಕ ಸಾರ್ವಕಾಲಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರ ಸ್ಟ್ರೈಕ್ ರೇಟ್ 151.68 ಆಗಿದ್ದು ಪಂದ್ಯಾವಳಿಯಲ್ಲಿ ಅಗ್ರ 20 ರನ್ ಗಳಿಸಿದವರಿಗಿಂತ ಉತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ 15 ಪಂದ್ಯಗಳನ್ನು ಆಡಿದರು, 31.30 ರ ಸರಾಸರಿಯಲ್ಲಿ 313 ರನ್ ಗಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...