Homeಮುಖಪುಟದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು.

- Advertisement -
- Advertisement -

ಎಪ್ಪತ್ತೊಂದು ವರ್ಷದ ಈ ವ್ಯಕ್ತಿ ಒಂದು ಕಾಲದಲ್ಲಿ ವೈದ್ಯರು. ಅರಿವಳಿಕೆಯ ತಜ್ಞರಾಗಿ ರೋಗ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದರು. ಈಗಲೂ ಅರಿವಳಿಕೆ ಪಡೆದ ಸ್ಥಿತಿಯಲ್ಲಿರುವ ವ್ಯವಸ್ಥೆಗೆ ಮದ್ದು ನೀಡುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಕಳೆದ ವರ್ಷದಿಂದ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ಇವರ ಹೆಸರು ದರ್ಶನ್‌ ಪಾಲ್. ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಪಂಜಾಬ್‌ನ ಅಧ್ಯಕ್ಷರಾದ ಇವರು 2020ರ ಜೂನ್‌ ತಿಂಗಳಿಂದ ಕೃಷಿ ಕಾಯ್ದೆಗ ವಿರುದ್ಧ ರೈತರನ್ನು ಸಂಘಟಿಸುತ್ತಿದ್ದಾರೆ.

ಮೂಲತಃ ಪಟಿಯಾಲದವರಾದ ದರ್ಶನ್ ಪಾಲ್‌, ವೈದ್ಯರಾಗಿ ಸೇವೆ ಸಲ್ಲಿಸುತ್ತಲೇ ಹಲವು ರೈತ-ಕಾರ್ಮಿಕ ಸಮಸ್ಯೆಗಳ ಕುರಿತಾಗಿ ಹೋರಾಡಿದವರು. ರೈತರ ಸಾಲ ಮನ್ನಾಕ್ಕಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು.

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು. ಹಾಗೆಯೇ ಭಾರತೀಯ ಕಿಸಾನ್‌ ಯೂನಿಯನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. 2016ರಲ್ಲಿ ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಸೇರಿದ ಪಾಲ್‌ ಕಳೆದ 2019 ರಲ್ಲಿ ಯೂನಿಯನ್‌ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮಿತಿ ಸದಸ್ಯರೂ ಆಗಿರುವ ಪಾಲ್‌, ರೈತರ ಹೋರಾಟವನ್ನು ಪಂಜಾಬಿಗಷ್ಟೇ ಸೀಮಿತವಾಗಿಸದೆ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಸಂಘಟಿಸಿದ್ದಾರೆ.

ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ 3 ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿ ಹೋರಾಟಕ್ಕಿಳಿದರು. ಮುಖ್ಯವಾಗಿ ಪಂಜಾಬ್ ರಾಜ್ಯದಲ್ಲಿನ 31 ರೈತ-ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ, ಸಮನ್ವಯಕಾರರಾಗಿ ಹೋರಾಟ ಮುನ್ನಡೆಸಿದರು.

2020 ರ ನವೆಂಬರ್ 25-26 ರಂದು ರೈತರು ಪಂಜಾಬ್ ಮತ್ತು ಹರಿಯಾಣದಿಂದ ದೆಹಲಿಗೆ ರ್ಯಾಲಿ ಹೊರಟರು. ಕೇಂದ್ರ ಸರ್ಕಾರ ತನ್ನ ಪೊಲೀಸ್ ಬಲ ಬಳಸಿ ಅದನ್ನು ತಡೆಯಲು ಯತ್ನಿಸಿತು. ರೈತರ ಅಹಿಂಸಾತ್ಮಕ ಹೋರಾಟದೆದುರು ಅದು ಸೋತಿತು. ನಂತರ ದೆಹಲಿಯ ನಾಲ್ಕೈದು ಗಡಿಗಳಲ್ಲಿ ಲಕ್ಷಾಂತರ ರೈತರು ಬೀಡು ಬಿಟ್ಟು ಐತಿಹಾಸಿಕ ರೈತ ಹೋರಾಟ ಕಟ್ಟಿದರು.

ಈ ಹೋರಾಟವನ್ನು ಮುನ್ನೆಡೆಸುವ ಸಲುವಾಗಿ ಅಲ್ಲಿ ಸೇರಿದ್ದ ಪ್ರಮುಖ 37 ಸಂಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ಎಂಬ ವಿಶಾಲ ಒಕ್ಕೂಟವನ್ನು ಸ್ಥಾಪಿಸಿದರು. ದರ್ಶನ್ ಪಾಲ್‌ರವರನ್ನು ಅದರ ಸಂಚಾಲಕರನ್ನಾಗಿ ನೇಮಿಸಲಾಯಿತು. ಅಲ್ಲಿಂದ ಮುಂದೆ ಕೃಷಿ ಕಾಯ್ದೆಗಳ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ  ನಡುವೆ ನಡೆದ 11 ಸುತ್ತಿನ ಮಾತುಕತೆಗಳಲ್ಲಿ ದರ್ಶನ್ ಪಾಲ್ ಮುಂಚೋಣಿ ಪಾತ್ರ ವಹಿಸಿದರು. ದೆಹಲಿಯ ಗಡಿಗಳಲ್ಲಿ ಅಸಂಖ್ಯ ರೈತರದೊಂದಿಗೆ ಕೃಷಿ ಕೂಲಿ ಕಾರ್ಮಿಕರನ್ನು ಸೇರಿಸುವುದರಲ್ಲಿ ದರ್ಶನ್ ಪಾಲ್ ಪಾತ್ರವಿದೆ.

2021ರ ಮಾರ್ಚ್ 21 ರಂದು ರಾಜ್ಯದ ಶಿವಮೊಗ್ಗದಲ್ಲಿ ನಡೆದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಡಾ.ದರ್ಶನ್ ಪಾಲ್ ಭಾಗವಹಿಸಿದ್ದರು. ಶಾಂತ ಸ್ವಭಾವದ, ಮೃದು ದನಿಯ ಆದರೆ ದಿಟ್ಟತೆಯ ವ್ಯಕ್ತಿತ್ವ ಅವರದು. ಜನವರಿ 26ರ ಗಣರಾಜ್ಯೋತ್ಸವದ ಗದ್ದಲ, ಗಡಿಗಳಲ್ಲಿ ಪೊಲೀಸ್ ದೌರ್ಜನ್ಯ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ಅವರು ಬಹಳ ತಾಳ್ಮೆಯಿಂದ, ಪ್ರಜಾತಾಂತ್ರಿಕ ರೀತಿಯಲ್ಲಿ ನಿಭಾಯಿಸಿದ್ದಾರೆ.

ಈಗ ಒಕ್ಕೂಟ ಸರ್ಕಾರ ರೈತರ ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ಕ್ಷಮೆ ಕೇಳಿದ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ರೈತರು ದರ್ಶನ್ ಪಾಲ್ ನೇತೃತ್ವದಲ್ಲಿ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ:  ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...