Homeಮುಖಪುಟದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು.

- Advertisement -
- Advertisement -

ಎಪ್ಪತ್ತೊಂದು ವರ್ಷದ ಈ ವ್ಯಕ್ತಿ ಒಂದು ಕಾಲದಲ್ಲಿ ವೈದ್ಯರು. ಅರಿವಳಿಕೆಯ ತಜ್ಞರಾಗಿ ರೋಗ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದರು. ಈಗಲೂ ಅರಿವಳಿಕೆ ಪಡೆದ ಸ್ಥಿತಿಯಲ್ಲಿರುವ ವ್ಯವಸ್ಥೆಗೆ ಮದ್ದು ನೀಡುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಕಳೆದ ವರ್ಷದಿಂದ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ಇವರ ಹೆಸರು ದರ್ಶನ್‌ ಪಾಲ್. ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಪಂಜಾಬ್‌ನ ಅಧ್ಯಕ್ಷರಾದ ಇವರು 2020ರ ಜೂನ್‌ ತಿಂಗಳಿಂದ ಕೃಷಿ ಕಾಯ್ದೆಗ ವಿರುದ್ಧ ರೈತರನ್ನು ಸಂಘಟಿಸುತ್ತಿದ್ದಾರೆ.

ಮೂಲತಃ ಪಟಿಯಾಲದವರಾದ ದರ್ಶನ್ ಪಾಲ್‌, ವೈದ್ಯರಾಗಿ ಸೇವೆ ಸಲ್ಲಿಸುತ್ತಲೇ ಹಲವು ರೈತ-ಕಾರ್ಮಿಕ ಸಮಸ್ಯೆಗಳ ಕುರಿತಾಗಿ ಹೋರಾಡಿದವರು. ರೈತರ ಸಾಲ ಮನ್ನಾಕ್ಕಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು.

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು. ಹಾಗೆಯೇ ಭಾರತೀಯ ಕಿಸಾನ್‌ ಯೂನಿಯನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. 2016ರಲ್ಲಿ ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಸೇರಿದ ಪಾಲ್‌ ಕಳೆದ 2019 ರಲ್ಲಿ ಯೂನಿಯನ್‌ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮಿತಿ ಸದಸ್ಯರೂ ಆಗಿರುವ ಪಾಲ್‌, ರೈತರ ಹೋರಾಟವನ್ನು ಪಂಜಾಬಿಗಷ್ಟೇ ಸೀಮಿತವಾಗಿಸದೆ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಸಂಘಟಿಸಿದ್ದಾರೆ.

ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ 3 ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿ ಹೋರಾಟಕ್ಕಿಳಿದರು. ಮುಖ್ಯವಾಗಿ ಪಂಜಾಬ್ ರಾಜ್ಯದಲ್ಲಿನ 31 ರೈತ-ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ, ಸಮನ್ವಯಕಾರರಾಗಿ ಹೋರಾಟ ಮುನ್ನಡೆಸಿದರು.

2020 ರ ನವೆಂಬರ್ 25-26 ರಂದು ರೈತರು ಪಂಜಾಬ್ ಮತ್ತು ಹರಿಯಾಣದಿಂದ ದೆಹಲಿಗೆ ರ್ಯಾಲಿ ಹೊರಟರು. ಕೇಂದ್ರ ಸರ್ಕಾರ ತನ್ನ ಪೊಲೀಸ್ ಬಲ ಬಳಸಿ ಅದನ್ನು ತಡೆಯಲು ಯತ್ನಿಸಿತು. ರೈತರ ಅಹಿಂಸಾತ್ಮಕ ಹೋರಾಟದೆದುರು ಅದು ಸೋತಿತು. ನಂತರ ದೆಹಲಿಯ ನಾಲ್ಕೈದು ಗಡಿಗಳಲ್ಲಿ ಲಕ್ಷಾಂತರ ರೈತರು ಬೀಡು ಬಿಟ್ಟು ಐತಿಹಾಸಿಕ ರೈತ ಹೋರಾಟ ಕಟ್ಟಿದರು.

ಈ ಹೋರಾಟವನ್ನು ಮುನ್ನೆಡೆಸುವ ಸಲುವಾಗಿ ಅಲ್ಲಿ ಸೇರಿದ್ದ ಪ್ರಮುಖ 37 ಸಂಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ಎಂಬ ವಿಶಾಲ ಒಕ್ಕೂಟವನ್ನು ಸ್ಥಾಪಿಸಿದರು. ದರ್ಶನ್ ಪಾಲ್‌ರವರನ್ನು ಅದರ ಸಂಚಾಲಕರನ್ನಾಗಿ ನೇಮಿಸಲಾಯಿತು. ಅಲ್ಲಿಂದ ಮುಂದೆ ಕೃಷಿ ಕಾಯ್ದೆಗಳ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ  ನಡುವೆ ನಡೆದ 11 ಸುತ್ತಿನ ಮಾತುಕತೆಗಳಲ್ಲಿ ದರ್ಶನ್ ಪಾಲ್ ಮುಂಚೋಣಿ ಪಾತ್ರ ವಹಿಸಿದರು. ದೆಹಲಿಯ ಗಡಿಗಳಲ್ಲಿ ಅಸಂಖ್ಯ ರೈತರದೊಂದಿಗೆ ಕೃಷಿ ಕೂಲಿ ಕಾರ್ಮಿಕರನ್ನು ಸೇರಿಸುವುದರಲ್ಲಿ ದರ್ಶನ್ ಪಾಲ್ ಪಾತ್ರವಿದೆ.

2021ರ ಮಾರ್ಚ್ 21 ರಂದು ರಾಜ್ಯದ ಶಿವಮೊಗ್ಗದಲ್ಲಿ ನಡೆದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಡಾ.ದರ್ಶನ್ ಪಾಲ್ ಭಾಗವಹಿಸಿದ್ದರು. ಶಾಂತ ಸ್ವಭಾವದ, ಮೃದು ದನಿಯ ಆದರೆ ದಿಟ್ಟತೆಯ ವ್ಯಕ್ತಿತ್ವ ಅವರದು. ಜನವರಿ 26ರ ಗಣರಾಜ್ಯೋತ್ಸವದ ಗದ್ದಲ, ಗಡಿಗಳಲ್ಲಿ ಪೊಲೀಸ್ ದೌರ್ಜನ್ಯ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ಅವರು ಬಹಳ ತಾಳ್ಮೆಯಿಂದ, ಪ್ರಜಾತಾಂತ್ರಿಕ ರೀತಿಯಲ್ಲಿ ನಿಭಾಯಿಸಿದ್ದಾರೆ.

ಈಗ ಒಕ್ಕೂಟ ಸರ್ಕಾರ ರೈತರ ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ಕ್ಷಮೆ ಕೇಳಿದ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ರೈತರು ದರ್ಶನ್ ಪಾಲ್ ನೇತೃತ್ವದಲ್ಲಿ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ:  ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...