Homeಕರ್ನಾಟಕಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

- Advertisement -
- Advertisement -

ಇಬ್ಬರು ಮುಸ್ಲಿಮ್ ಬಾಲಕಿಯರ ಮೇಲೆ ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಇಲ್ಲಿನ ಕೆಆರ್‌ಸಿ ವೃತ್ತದ ಕಟ್ಟಡವೊಂದಕ್ಕೆ ಬಾಲಕಿಯರನ್ನು ಎಳೆದೊಯ್ದು ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ಮುಸ್ಲಿಂ ವಿದ್ಯಾರ್ಥಿನಿಯರು ಶನಿವಾರಸಂತೆ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಶಾಲೆಗೆ ತೆರಳಿದ್ದರು. ಈ ವೇಳೆ ಇವರಿಬ್ಬರ ಅನ್ಯಧರ್ಮದ ಸ್ನೇಹಿತೆ ಬುರ್ಕಾವನ್ನು ಪಡೆದು ಸಂಜೆ ಹಿಂತಿರುಗಿಸುವುದಾಗಿ ತಿಳಿಸಿದ್ದಳು. ಅದರಿಂದ ಈ ಇಬ್ಬರು ಮುಸ್ಲಿಂ ಗೆಳತಿಯರಲ್ಲಿ ಒಬ್ಬಾಕೆ, ತನ್ನ ಸ್ನೇಹಿತೆಗೆ ಬುರ್ಕಾವನ್ನು ನೀಡಿದ್ದಳು. ಬರ್ಖಾ ತೆಗೆದುಕೊಂಡು ಹೋದ ಬಾಲಕಿ ವಾಪಸ್ ಸಂಜೆಯಾದರೂ ತಂದುಕೊಟ್ಟಿರಲಿಲ್ಲ.

ಮುಸ್ಲಿಂ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ್ತಾ ಶನಿವಾರಸಂತೆ ಕೆಆರ್‌ಸಿ ವೃತ್ತದ ಬಳಿ ನಿಂತಿದ್ದಾಗ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ಹುಡುಗನ ಮೂಲಕ ಇಲ್ಲಿಗೆ ತಂದು ಕೊಟ್ಟಿದ್ದಾಳೆ. ಈ ವೇಳೆ ಮತೀಯ ಗೂಂಡಾಗಳು ಈ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಕಾಂಪ್ಲೆಕ್ಸ್‌ಗೆ ಒಳೆದೊಯ್ದಯ ವಿಚಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅಷ್ಟರಲ್ಲಿ ವಿಷಯ ಅರಿತ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರು ಗಾಯಗೊಂಡಿದ್ದರಿಂದ ಸರ್ಕಾರಿ ಪೊಲೀಸ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಯುವಕರು ಆಸ್ಪತ್ರೆಯ ಮುಂಭಾಗ ಜಮಾಯಿಸಿ ಆರೋಪಿಗಳ ಬಂಧಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್‌ ಶಿವಮೂರ್ತಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ. ಜೊತೆಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದರ ಜೊತೆಗೆ ಟ್ವಿಟ್ಟರ್‌‌ನಲ್ಲಿ #SaveKarnatakaFromFascists #StudentsNotSafeInKarnataka ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿದ್ದು, ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಮತೀಯ ಗೂಂಡಾಗಿರಿಯಿಂದಾಗಿ ಆತಂಕ ವ್ಯಕ್ತವಾಗಿದೆ.

ಬಾಲಕಿಯರನ್ನು ಅಮಾನುಷವಾಗಿ ವಿಚಾರಣೆಗೆ ಒಳಪಡಿಸುತ್ತಿರುವ ಮತೀಯ ಗೂಂಡಾಗಿರಿಯ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಇದರ ವಿರುದ್ಧ ದನಿ ಎತ್ತಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಕ್ರಿಯೆಗೆ ಪ್ರತಿಕ್ರಿಯೆಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ ಬಳಿಕ ಮತೀಯ ಗೂಂಡಾಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇನ್ನೊಬ್ಬರ ಊಟ, ವಸ್ತ್ರ, ಆಯ್ಕೆ ಸ್ವತಂತ್ರವನ್ನು ಅನ್ಯವ್ಯಕ್ತಿ ನಿರ್ಧರಿಸುತ್ತಿರುವುದು ಆತಂಕಕಾರಿ. ಸಂವಿಧಾನ ವಿರೋಧಿಯಾಗಿರುವ ಮಾರಲ್‌ ಪೊಲೀಸಿಂಗ್‌ಗೆ ಕಡಿವಾಣ ಬೀಳಬೇಕು ಎಂಬುದು ಜನರ ಆಗ್ರಹ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮತೀಯ ಗೂಂಡಾಗಿರಿಗೆ ದಿಕ್ಕಾರವಿರಲಿ. ಈ ಗೂಂಡಾಗಿರಿಯನ್ನು ಎಸಗಿರುವ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕೋಮುಕ್ರಿಮಿಗಳ ರಾಜ್ಯಭಾರ. ರೌಡಿ ಸಮರ್ಥಕನೊಬ್ಬ ಮುಖ್ಯಮಂತ್ರಿ. ಆಜಯ್ ಕುಮಾರ್ ಬಿಷ್ಟನ ಉತ್ತರಪ್ರದೇಶವಾಗುತ್ತಿದೆ
    ಕರ್ನಾಟಕ.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...