Homeಕರ್ನಾಟಕರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಹೋರಾಟ ಮುಂದುವರಿಯುತ್ತದೆ ಎಂದು ಹೋರಾಟ ಸಮಿತಿ ತಿಳಿಸಿದೆ

- Advertisement -
- Advertisement -

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಭಾರಿ ದೊಡ್ಡ ವಿಜಯವಾಗಿದೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ ಶುಕ್ರವಾರ ಹೇಳಿದೆ. ಮಳೆ, ಚಳಿ, ಬಿಸಿಲು, ಬೆದರಿಕೆಗಳನ್ನು ಲೆಕ್ಕಿಸದೇ ದೆಹಲಿಯ ಗಡಿಗಳಲ್ಲಿ ಸತತ ಒಂದು ವರ್ಷದಿಂದ ಹೋರಾಟ ನಡೆಸಿ ಹೋರಾಟದ ಗೆಲುವಿಗೆ ಕಾರಣಿಭೂತರಾದ ಲಕ್ಷಾಂತರ ರೈತರು ಹಾಗು ಇದರ ಭಾಗವಾಗಿ ದೇಶಾದ್ಯಂತ ವ್ಯಾಪಕ ಹೋರಾಟ ನಡೆಸಿದ ರೈತರು, ದಲಿತರು, ಕಾರ್ಮಿಕರನ್ನು ‘ಸಂಯುಕ್ತ ಹೋರಾಟ ಕರ್ನಾಟಕ’ ಅಭಿನಂದಿಸಿದೆ.

ಈ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ‘ಸಂಯುಕ್ತ ಹೋರಾಟ ಕರ್ನಾಟಕ’, “ಪ್ರಧಾನಿ ಮೋದಿ ಮೂರು ಕರಾಳ ಕೃಷಿ ಕಾಯ್ದೆಗಳ ವಾಪಸಾತಿ ಮಾಡುವುದಾಗಿ ಮಾತ್ರ ಘೋಷಣೆ ಮಾಡಿದ್ದಾರೆ. ಆದರೆ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ರಚನೆಯ ಬಗ್ಗೆ ಹಾಗು ವಿದ್ಯುತ್‌ ಕ್ಷೇತ್ರದ ಸಂಪೂರ್ಣ ಖಾಸಗಿಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್‌ ಮಸೂದೆ-2020 ರ ವಾಪಸಾತಿಯ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸಹ ಈಡೇರಿಸಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ಇದನ್ನೂ ಓದಿ: ವಿವಾದಿತ ಕೃಷಿ ಕಾನೂನುಗಳು ವಾಪಸ್: ರೈತರ ಸಂಭ್ರಮ ವಿಡಿಯೋ ಮತ್ತು ಚಿತ್ರಗಳಲ್ಲಿ

ಬಿಜೆಪಿ ರಾಜ್ಯ ಸರ್ಕಾರವೂ ಮೋದಿಯವರ ದಾರಿಯಲ್ಲಿ ಹೆಜ್ಜೆ ಹಾಕಬೇಕು:

ರೈತರ ಒ೦ದು ವರ್ಷದ ಸತತ ಹೋರಾಟದ ಕಾರಣದಿಂದ ಪ್ರಧಾನಿಗೆ ತಮ್ಮ ತಪ್ಪಿನ ಅರಿವು ಆಗಿದ್ದು, ಈ ಕಾರಣಕ್ಕಾಗಿ ಕರಾಳ ಕೃಷಿ ಕಾಯ್ದೆ ವಾಪಸ್ಸು ಪಡೆದಿದ್ದಾರೆ ಎಂದು ಹೇಳಿರುವ ‘ಸಂಯುಕ್ತ ಹೋರಾಟ’ವು, ಮೋದಿಯ ದಾರಿಯಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕೂಡಾ ಹೆಜ್ಜೆ ಇಡಬೇಕು ಎಂದು ತಿಳಿಸಿದೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಮೋದಿಯ ಹಾದಿಯಲ್ಲಿ ಹೆಜ್ಜೆ ಹಾಕಿ, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗಳನ್ನು ಕೂಡಲೇ ರದ್ದು ಮಾಡಬೇಕು” ಎಂದು ಸಂಯುಕ್ತ ಹೋರಾಟ-ಕರ್ನಾಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲವೆಂದಾದಲ್ಲಿ ರಾಜ್ಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದೆ೦ದು ಸಂಯುಕ್ತ ಹೋರಾಟ ಕರ್ನಾಟಕ ಎಚ್ಚರಿಕೆ ನೀಡಿದೆ.

ಹೋರಾಟ ಮುಂದುವರಿಯುತ್ತದೆ 

ಕೇಂದ್ರದಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತರಿಯ ಕಾನೂನು, ವಿದ್ಯುತ್‌ ಮಸೂದೆ-2020 ರ ವಾಪಸಾತಿ ಹಾಗು ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗಳ ವಾಪಸಾತಿ, ಕಾರ್ಮಿಕ ಸಂಹಿತೆ ರದ್ಧತಿ, ಸಾರ್ವಜನಿಕ ಉದ್ಯಮಗಳ ಖಾಸಗೀಕರಣಕ್ಕೆ ತಡೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣ, ಸತತ ಮಳೆಯಿಂದ ಬೆಳೆ ನಷ್ಟಕ್ಕೆ ಪರಿಹಾರ, ಹಾಲಿನ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ತನಕ ರಾಜ್ಯದಲ್ಲಿ ಹೋರಾಟವನ್ನು ಮುಂದುವರಿಸಲು ಸಂಯುಕ್ತ ಹೋರಾಟ- ಕರ್ನಾಟಕ ನಿರ್ಧರಿಸಿದೆ ಎಂದು ಹೇಳಿದೆ.

ನವೆಂಬರ್‌ 26 ರ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ 

ದಿಲ್ಲಿಯ ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿಯನ್ನು ಘೋಷಿಸಲಾಗಿತ್ತು. ಈ ಕುರಿತು ನಾಳೆ ಬೆಂಗಳೂರಿನಲ್ಲಿ ಸಂಯುಕ್ತ ಹೋರಾಟ-ಕರ್ನಾಟಕದ ಪ್ರತಿಕಾಗೋಷ್ಠಿಯಲ್ಲಿ ಹೋರಾಟದ ರೂಪರೇಷಗಳನ್ನು ಘೋಷಣೆ ಮಾಡಲಾಗುವುದು ಎಂದು ಹೋರಾಟ ಸಮಿತಿ ತಿಳಿಸಿದೆ. ಘೋಷಣೆ ಮಾಡಲಾಗುವುದು ಎಂದು ಹೋರಾಟ ಸಮಿತಿ  tiLiside ತಿಳಿಸಿದೆ. 

ಇದನ್ನೂ ಓದಿ: ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...