Homeಕರ್ನಾಟಕಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ...

ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

- Advertisement -
- Advertisement -

ಕೊಡಗು ಜಿಲ್ಲೆಯ ಶನಿವಾರಸಂತೆ ಪೊಲೀಸ್‌ ಠಾಣೆಯ ಮುಂದೆ ಬುರ್ಖಾಧಾರಿ ಮಹಿಳೆಯರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರು ‘ಅಂಬೇಡ್ಕರ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಆದರೆ ದುಷ್ಕರ್ಮಿಗಳು ಈ ವೀಡಿಯೋವನ್ನು ತಿರುಚಿ, ‘‘ಮುಸ್ಲಿಂ ಮಹಿಳೆಯರು ಪೊಲೀಸ್‌ ಠಾಣೆಯ ಮುಂದೆ ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿದ್ದಾರೆ” ಎಂದು ವೈರಲ್ ಮಾಡಿದ್ದರು. ಇದೀಗ ಈ ವಿಡಿಯೊ ತಿರುಚಿದ್ದಾರೆ ಎನ್ನಲಾಗಿರುವ ಸ್ಥಳೀಯ ಬಿಜೆಪಿ ನಾಯಕ ಗಿರೀಶ್‌ ಸೇರಿದಂತೆ ಕನ್ನಡ ಪ್ರಭ ಪತ್ರಕರ್ತ ಹರೀಶ್‌ ಹಾಗೂ ಮತ್ತೊಬ್ಬ ಸ್ಥಳೀಯ ರಾಜಕೀಯ ನಾಯಕನ ರಘು ಎಂಬವರ ವಿರುದ್ದ ಶನಿವಾರಸಂತೆ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿ ಬುರ್ಖಾದಾರಿ ಮಹಿಳೆಯರು ಶನಿವಾರಸಂತೆ ಪೊಲೀಸ್ ಠಾಣೆಯ ಮುಂದೆ ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರು ಅಂಬೇಡ್ಕರ್‌ ಝಿಂದಾಬಾದ್ ಎಂದು ಕೂಗಿದ್ದರು.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಂತರ ಈ ವಿಡಿಯೊವನ್ನು ಶನಿವಾರಸಂತೆಯ ಗ್ರಾಮ ಪಂಚಾಯತ್‌ ಸದಸ್ಯರಾದ ಎಸ್‌.ಎನ್‌. ರಘು ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಕನ್ನಡ ಪ್ರಭ ಪತ್ರಿಕೆಯ ಪತ್ರಕರ್ತ ಹಾಗೂ ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿರುವ ಹರೀಶ್‌ ಅವರು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ, ಶನಿವಾರಸಂತೆ ಪೊಲೀಸ್ ಠಾಣೆಯ ಮುಂದೆ ಮುಸ್ಲಿಂ ಮಹಿಳೆಯರು ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು, ಇದನ್ನು ವಿರೋಧಿಸಿ ಶನಿವಾರ ಸಂತೆ ಬಂದ್ ಮಾಡಿ ಪ್ರತಿಭಟಿಸುವಂತೆ ಕರೆ ನೀಡಿದ್ದರು.

ಹರೀಶ್‌ ಮತ್ತು ರಘು ಅವರ ಮಾತುಗಳಿಂದ ಪ್ರಚೋದನೆಗೆ ಒಳಗಾಗಿದ್ದ ಮತ್ತೊಬ್ಬ ಆರೋಪಿ ಗಿರೀಶ್ ವಾಟ್ಸಪ್‌‌ನಿಂದ ಮುಸ್ಲಿಂ ಮಹಿಳೆಯರು ಪಾಕಿಸ್ತಾನ್ ಝಿಂದಾಬಾದ್ ಕೂಗಿದ್ದಾರೆ ಎಂದು ಸುಳ್ಳು ಬರೆದು ಎಲ್ಲೆಡೆ ವಿಡಿಯೊವನ್ನು ಹರಿಯಬಿಟ್ಟಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ವಾಟ್ಸಪ್‌ನ ಈ ಸಂದೇಶವು ಸಮಾಜದ ಕೋಮು ಸೌಹಾರ್ಧತೆ ಕದಡುವಂತೆ ಮಾಡಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ದೂರಿದ್ದಾರೆ. “ಈ ಎಲ್ಲಾ ಹೇಳಿಕೆಗಳು ಹಾಗೂ ವಿಡಿಯೊಗಳಿಂದಾಗಿ ಸಮಾಜದಲ್ಲಿ ಶಾಂತಿ ಕದಡಿ, ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗುವ ಸಂಭವವಿರುತ್ತದೆ, ಜೊತೆಗೆ ಕೋಮುಸೌಹಾರ್ದತೆಯನ್ನು ಕದಡುವ ದುರುದ್ದೇಶ ಈ ವಾಟ್ಸಪ್‌ ಸಂದೇಶ ಹೊಂದಿದೆ” ಎಂದು ಪೊಲೀಸ್ ಎಫ್‌ಐಆರ್‌ ಆರೋಪಿಸಿದೆ.

ಶನಿವಾರಸಂತೆ ಪೊಲೀಸರು, ಕನ್ನಡ ಪ್ರಭ ಪತ್ರಿಕೆಯ ವರದಿಗಾರ, ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್‌ ಮತ್ತು ಸ್ಥಳೀಯ ಬಿಜೆಪಿ ಮುಖಂಡರಾಗಿರುವ ರಘು ಮತ್ತು ಗಿರೀಶ್ ಎನ್ನುವವರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ನಡುವೆ, ‘ಪಾಕಿಸ್ತಾನ್‌ ಝಿಂದಾಬಾದ್‌‌’ ಕೂಗಿದ್ದಾರೆ ಎಂದು ಆರೋಪಿಸಿ ಶನಿವಾರಸಂತೆ ಬಂದ್‌ ಕರೆ ನೀಡಿದ್ದರ ಹಿನ್ನಲೆಯಲ್ಲಿ, ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದರು. ಆದರೂ, ಸೆಕ್ಷನ್‌ ಉಲ್ಲಂಘಿಸಿ, ಘೋಷಣೆ ಕೂಗುತ್ತಾ ಮೆರವಣಿಗೆ ನಡೆದಿದೆ ಎಂದು ಹೇಳಲಾಗಿದೆ. ಆದರೆ ಪೊಲೀಸರು ಸೆಕ್ಷನ್ ಉಲ್ಲಂಘನೆ ಮಾಡಿದವರ ವಿರುದ್ದ ಇದುವರೆಗೂ ಯಾವುದೆ ಪ್ರಕರಣ ದಾಖಲಿಸಿಲ್ಲ ಎಂದು ಮೂಲವೊಂದು ನಾನುಗೌರಿ.ಕಾಂಗೆ ತಿಳಿಸಿದೆ.

ಇದನ್ನೂ ಓದಿ: ಕೊಡಗು: ಪೊಲೀಸರ ದೌರ್ಜನ್ಯಕ್ಕೆ ಮಾನಸಿಕ ಅಸ್ವಸ್ಥ ಬಲಿ: ಎಂಟು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...