Homeಮುಖಪುಟರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

- Advertisement -
- Advertisement -

(ಇದು ಹೊಸ ಬರಹದಲ್ಲಿದೆ, ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

ನಿಜದ ಪ್ರಜಾಪ್ರಬುತ್ವ ಎಂಬುದು ನಿದಾನ ಪ್ರಕ್ರಿಯೆ. ಅದು ಎಡವುತ್ತದೆ, ತೆವಳುತ್ತದೆ, ಕುಂಟುತ್ತದೆ. ನೇರವಾಗಿ ಸಾಗುವುದು ಪ್ರಜಾಪ್ರಬುತ್ವ ಎನಿಸಿಕೊಳ್ಳುವುದಿಲ್ಲ.
ಪ್ರಜಾಪ್ರಬುತ್ವ ಸಮಾಜದಲ್ಲಿ (ಅದು ತನ್ನ ಮೌಲ್ಯ ಕಳೆದುಕೊಂಡಿದ್ದರೂ ಸಹ) ಒಂದು ಹೋರಾಟ ಮತ್ತೊಂದು ಹೋರಾಟಕ್ಕೆ ಇದು ಮಗದೊಂದಕ್ಕೆ ಸ್ಪೂರ್ತಿಯಾಗುತ್ತಾ ಹೋಗುತ್ತದೆ. ಇದು ಪ್ರಜಾಪ್ರಬುತ್ವದ ಅಡಿಪಾಯವನ್ನು ಶಿಥಿಲಗೊಳಿಸದಂತೆ ಕಾಪಾಡುತ್ತದೆ.

ಇತ್ತೀಚಿನ ಉದಾಹರಣೆ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಕೃಶಿ ಬಿಕ್ಕಟ್ಟಿಗೆ ಕಾರಣವಾದ ರಾಜ್ಯ ಸರಕಾರದ ನೀತಿಗಳ ವಿರುದ್ದ ರೂಪುಗೊಂಡ aikss (all india kisan sangharsh samiti) ಸಂಘಟನೆ.

ಮಾರ್ಚ್ 2018ರಲ್ಲಿ ಭೂರಹಿತ ಕೂಲಿ ಕಾರ್ಮಿಕರ ಹೋರಾಟ ಸಂಘಟಿಸಿದ್ದ aikssನ ಸಾವಿರಾರು ಕೂಲಿ ಕಾರ್ಮಿಕರು ನಾಸಿಕ್ ನಿಂದ ಮುಂಬೈವರೆಗಿನ 750 ಕಿ. ಮೀ. ನ ಆ ಆಭೂತಪೂರ್ವ ಕಾಲ್ನಡಿಗೆ ಹೊಸ ಇತಿಹಾಸವನ್ನೇ ಬರೆಯಿತು. ‘ಜನರಿಂದ ಜನರಿಗಾಗಿ’ ರೂಪುಗೊಂಡಿದ್ದ ಆ ಹೋರಾಟ ಫ್ಯಾಸಿಸ್ಟ್ ಕಾಲದಲ್ಲಿಯೂ ಸಹ ನೂರಾರು ನದಿಗಳು ಸೇರಿಕೊಳ್ಳುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿತು.

ನಾಸಿಕ್ ನಿಂದ ಮುಂಬೈವರೆಗಿನ ರೈತರ ಬಹುದೊಡ್ಡ ಪಾದಯಾತ್ರೆ

ಇದರಿಂದಾಗಿ ಸ್ಪೂರ್ತಿ ಪಡೆದ ದೆಹಲಿ ರೈತ ಹೋರಾಟ ಮತ್ತೊಂದು ಚಾರಿತ್ರಿಕ ಘಟನೆಯಾಗಿದೆ. ಇದು ಮುಂದಿನ ರಚನಾತ್ಮಕ ಸಂಘಟನೆಗೆ ಚಿಮ್ಮು ಹಲಗೆಯಾಗಿದೆ.
ಪ್ರಜಾಪ್ರಬುತ್ವದಲ್ಲಿ ‘ಹೋರಾಟ ಮತ್ತು ಸಂಘಟನೆ’ ಬಿತ್ತಿದ ಬೀಜಗಳನ್ನು ರಚನಾತ್ಮಕ ಕಾರ್ಯಯೋಜನೆಗಳು ಗಿಡವಾಗಿ ಬೆಳೆಸುತ್ತವೆ. ಅದು ಕೊಂಬೆಗಳಾಗಿ ಟಿಸಿಲೊಡೆಯುತ್ತದೆ. ಇದು ಪ್ರಜಾಪ್ರಬುತ್ವದ ಆತ್ಮದಂತೆ.

ಪ್ರತಿಕ್ರಿಯೆ ಮತ್ತು ಕ್ರಿಯಾತ್ಮಕ ಎರಡೂ ಪೂರಕವಾಗಿ ಸಂಘಟಿತವಾಗುವುದರಿಂದಲೇ ಪ್ರಜಾಪ್ರಬುತ್ವವು ಉಸಿರಾಡುತ್ತದೆ.

ಈ ಪ್ರಕ್ರಿಯೆ ಎಶ್ಚೇ ಹಿನ್ನಡೆ ಅನುಬವಿಸಿದರೂ ಸಹ ಇವೆರಡರ ಕಾರಣದಿಂದ ಕನಿಶ್ಟ ಅಬಿವ್ಯಕ್ತಿ ಸ್ವಾತಂತ್ರ್ಯವಂತೂ ಖಾತರಿಯಾಗಿರುತ್ತದೆ. ಇಂದು ಬೀದಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವಶ್ಟು ಸ್ವಾತಂತ್ರವಿದೆ ಎಂದರೆ ಅದಕ್ಕೆ ಈ ಹೋರಾಟಗಳು ಕಾರಣ. ಇದರ ಮೇಲೆ ಮುಂದಿನ ಬವಿಶ್ಯವನ್ನು ಕಟ್ಟಬೇಕಿರುವುದು ಪ್ರಜ್ಞಾವಂತರ ಜವಬ್ದಾರಿ.

ಪ್ರಜಾಪ್ರಬುತ್ವದ ಈ ಆಯಾಮಗಳು, ಕೈ ದೀವಿಗೆಗಳು ಮತ್ತು ಆದಾರಸ್ತಂಬಗಳು ಒಂದೆಡೆಯಾದರೆ ‘ಚುನಾವಣಾ ಪ್ರಜಾಪ್ರಬುತ್ವ’ ಮತ್ತೊಂದು ಮಗ್ಗಲು. ಅದಿಕಾರ ರಾಜಕಾರಣ ಮಹತ್ವದ ಕಾರಣಕ್ಕೆ ಇದರ ಗೆಲುವು ಸೋಲುಗಳು ಮುಖ್ಯವಾಗುತ್ತದೆ.

ಆದರೆ ಬಿಜೆಪಿಯಂತಹ ಸರ್ವಾದಿಕಾರಿ ಪಕ್ಷವು ಅದಿಕಾರದ ಹಿಂದೆ ಬಿದ್ದಾಗ ಮಿಕ್ಕಿದೆಲ್ಲವನ್ನು ಬಿಟ್ಟು ಕೇವಲ ಚುನಾವಣಾ ರಾಜಕಾರಣವನ್ನು ಪ್ರಜಾಪ್ರಬುತ್ವದ ಮೌಲ್ಯಮಾಪನವಾಗಿಸಿಬಿಡುತ್ತದೆ. ಇದೊಂದು ಬೋನು.

680 ರೈತರು ಪ್ರಾಣಬಿಟ್ಟರೂ ತಲೆ ಕೆಡಿಸಿಕೊಳ್ಳದ ಸರ್ವಾದಿಕಾರಿಗಳು ಚುನಾವಣೆಗೋಸ್ಕರ ನಿರ್ದಾರ ತೆಗೆದುಕೊಳ್ಳುವಂತಹ ಒತ್ತಡಕ್ಕೆ ಒಳಗಾಗುತ್ತಾರೆ.

ಆದರೆ ನಿರಂತರ ಹೋರಾಟಗಳು ಇಂತಹ ನಿರಂಕುಶ ಪ್ರಬುತ್ವವನ್ನು ಬಗ್ಗಿಸಿ ಚುನಾವಣಾ ಗಿಮಿಕ್ ಮಾಡುವ ಅನಿವಾರ್ಯತೆಯನ್ನು ಸೃಶ್ಟಿ ಮಾಡುತ್ತವೆ ಎಂಬುದೇ ಪ್ರಜಾಪ್ರಬುತ್ವದ ಹಿರಿಮೆ. ಇಲ್ಲಿ ದೆಹಲಿ ರೈತ ಹೋರಾಟದ ಗೆಲುವಿದೆ.

ಆದರೆ ಭಾರತದಂತಹ ದುರ್ಬಲ ಪ್ರಜಾಪ್ರಬುತ್ವದಲ್ಲಿ ಮುನ್ನಡೆಯು ಈ ರೀತಿಯ ಪ್ಯಾಕೇಜ್ ಗಳ ರೀತಿಯಿರುತ್ತದೆ.

ಪ್ರಜಾಪ್ರಬುತ್ವವು ಡೈನಮಿಕ್ ಆಗಿರುವಂತೆ ಎಚ್ಚರ ವಹಿಸುವುದು ನಮ್ಮ ಹೊಣೆಗಾರಿಕೆ. ಅದು ಎರಡು ಹೆಜ್ಜೆ ಮುಂದೆ, ಮೂರು ಹೆಜ್ಜೆ ಹಿಂದೆ ರೀತಿ ಆಗಿದ್ದರೂ ಪರವಾಗಿಲ್ಲ, ಚಲನಶೀಲವಾಗಿರಬೇಕು. ಇದನ್ನು ದೆಹಲಿ ರೈತ ಹೋರಾಟ ಸಾದಿಸಿದೆ

ನಾನು ಎಡ ಚಳುವಳಿಯಲ್ಲಿದ್ದಾಗ ನಾವೆಲ್ಲ ಹಾಡುತ್ತಿದ್ದ ಸಾಲುಗಳು ಈಗಲೂ ಬೀಜ ವಾಕ್ಯಗಳು

“ಎಲ್ಲಿಂದ ಬಂದಿರಿ ಎಂದು ಕೇಳುತೀರಿ ನೀವು
ಜನರ ನಡುವಿಂದ ಬಂದೆವು ಎಂದು ಹೇಳುತೇವೆ ನಾವು
ಎಲ್ಲಿಗೆ ಹೋಗುವಿರಿ ಎಂದು ಕೇಳುವಿರಿ ನೀವು
ಮರಳಿ ಜನರ ಬಳಿಗೆ ಎಂದು ಹೇಳುತೇವೆ ನಾವು”

  • ಶ್ರೀಪಾದ್ ಭಟ್

ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...